<p><strong>ಕೋಲಾರ:</strong> ಹಿರಿಯ ನೊಂದಣಾಧಿಕಾರಿ ಕಚೇರಿಯಲ್ಲಿ ಲಂಚದ ಹಾವಳಿ ಮಿತಿ ಮೀರಿದೆ ಎಂದು ಆರೋಪಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸದಸ್ಯರು ಇಲ್ಲಿ ಶುಕ್ರವಾರ ನೊಂದಣಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದರು.</p>.<p>‘ಹಿರಿಯ ನೊಂದಣಾಧಿಕಾರಿ ಕಚೇರಿಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಕಚೇರಿ ಅಧಿಕಾರಿಗಳು ಹಾಗೂ ಸಿಬ್ಬಂದಿಯು ಲಂಚಕ್ಕಾಗಿ ಸಾರ್ವಜನಿಕರನ್ನು ಶೋಷಿಸುತ್ತಿದ್ದಾರೆ. ಸಾರ್ವಜನಿಕರು ಲಂಚ ಕೊಡದಿದ್ದರೆ ಅಧಿಕಾರಿಗಳು ಆಸ್ತಿ ನೊಂದಣಿ ಕೆಲಸ ಮಾಡಲು ಹಿಂದೇಟು ಹಾಕುತ್ತಾರೆ’ ಎಂದು ಧರಣಿನಿರತರು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಸರ್ವಾಧಿಕಾರಿಗಳಂತೆ ವರ್ತಿಸುತ್ತಿರುವ ಹಿರಿಯ ನೊಂದಣಾಧಿಕಾರಿ ಕಚೇರಿ ಅಧಿಕಾರಿಗಳು ಹಾಗೂ ಸಿಬ್ಬಂದಿಯು ಜನರಿಂದ ಲಂಚದ ರೂಪದಲ್ಲಿ ಲಕ್ಷಾಂತರ ರೂಪಾಯಿ ಸುಲಿಗೆ ಮಾಡುತ್ತಿದ್ದಾರೆ. ದಲ್ಲಾಳಿಗಳ ಜತೆ ಶಾಮೀಲಾಗಿ ಲಂಚದ ದಂಧೆ ನಡೆಸುತ್ತಿದ್ದಾರೆ’ ಎಂದು ಸಂಘಟನೆಯ ರಾಜ್ಯ ಘಟಕದ ಉಪಾಧ್ಯಕ್ಷ ಕೆ.ನಾರಾಯಣಗೌಡ ದೂರಿದರು.</p>.<p>‘ಸರ್ಕಾರ ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಜಿಲ್ಲಾಡಳಿತ ಭವನ ನಿರ್ಮಿಸಿದೆ. ಆದರೆ, ಕೆಲ ಇಲಾಖೆಗಳ ಕಚೇರಿಗಳು ಖಾಸಗಿ ಕಟ್ಟಡಗಳಲ್ಲಿ ಮುಂದುವರಿದಿವೆ. ಲಂಚದ ದಂಧೆಗಾಗಿಯೇ ಖಾಸಗಿ ಕಟ್ಟಡಗಳಲ್ಲಿ ಕಚೇರಿಗಳನ್ನು ಮುಂದುವರಿಸಲಾಗಿದೆ’ ಎಂದು ಆರೋಪಿಸಿದರು.</p>.<p><strong>ಹಣ ಪೋಲು: </strong>‘ಸರ್ಕಾರಿ ಕಟ್ಟಡವಿದ್ದರೂ ಅಧಿಕಾರಿಗಳು ಖಾಸಗಿ ಕಟ್ಟಡಗಳನ್ನು ಬಾಡಿಗೆಗೆ ಪಡೆದು ಸಾರ್ವಜನಿಕರ ಹಣವನ್ನು ಪೋಲು ಮಾಡುತ್ತಿದ್ದಾರೆ. ನೊಂದಣಾಧಿಕಾರಿ ಕಚೇರಿಯನ್ನು ಜಿಲ್ಲಾಡಳಿತ ಭವನಕ್ಕೆ ಸ್ಥಳಾಂತರಿಸಲು ಅಧಿಕಾರಿಗಳು ಮೀನಮೇಷ ಎಣಿಸುತ್ತಿದ್ದಾರೆ. ಲಂಚದಾಸೆಗಾಗಿ ಕಚೇರಿ ಸ್ಥಳಾಂತರಿಸದೆ ಸಬೂಬು ಹೇಳುತ್ತಿದ್ದಾರೆ’ ಎಂದು ಧರಣಿನಿರತರು ಕಿಡಿಕಾರಿದರು.</p>.<p>‘ಅಧಿಕಾರಿಗಳು ಜನರಿಗೆ ಸಿಗಬೇಕಾದ ಸವಲತ್ತುಗಳನ್ನು ಮಾರಾಟ ಮಾಡುವ ಸಂಚು ರೂಪಿಸಿದ್ದಾರೆ. ಲಂಚ ಕೊಡದ ಸಾರ್ವಜನಿಕರ ಆಸ್ತಿಯ ಕಡತಗಳನ್ನೇ ಅಧಿಕಾರಿಗಳು ನಾಪತ್ತೆ ಮಾಡುತ್ತಾರೆ. ದಾಖಲೆಪತ್ರಗಳಲ್ಲಿ ಉದ್ದೇಶಪೂರ್ವಕವಾಗಿ ತಪ್ಪು ಮಾಹಿತಿ ನಮೂದಿಸಿ ತೊಂದರೆ ಮಾಡುತ್ತಿದ್ದಾರೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಹಿರಿಯ ನೊಂದಣಾಧಿಕಾರಿ ಕಚೇರಿಯಲ್ಲಿನ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕು. ಕಚೇರಿಯನ್ನು ಶೀಘ್ರವೇ ಜಿಲ್ಲಾಡಳಿತ ಭವನಕ್ಕೆ ಸ್ಥಳಾಂತರಿಸಬೇಕು. ಭ್ರಷ್ಟ ಅಧಿಕಾರಿಗಳನ್ನು ಅಮಾನತು ಮಾಡಬೇಕು. ಇಲ್ಲದಿದ್ದರೆ ಜಿಲ್ಲಾಡಳಿತ ಭವನದ ಎದುರು ಹೋರಾಟ ನಡೆಸುತ್ತೇವೆ’ ಎಂದು ಎಚ್ಚರಿಕೆ ನೀಡಿದರು.</p>.<p>ರೈತ ಸಂಘ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀನಿವಾಸ್, ಸಂಚಾಲಕ ಕೆ.ಶ್ರೀನಿವಾಸಗೌಡ, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ್, ತಾಲ್ಲೂಕು ಘಟಕದ ಅಧ್ಯಕ್ಷ ಮಂಜುನಾಥ್, ಶ್ರೀನಿವಾಸಪುರ ತಾಲ್ಲೂಕು ಘಟಕದ ಅಧ್ಯಕ್ಷ ಆಂಜಿನಪ್ಪ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ಹಿರಿಯ ನೊಂದಣಾಧಿಕಾರಿ ಕಚೇರಿಯಲ್ಲಿ ಲಂಚದ ಹಾವಳಿ ಮಿತಿ ಮೀರಿದೆ ಎಂದು ಆರೋಪಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸದಸ್ಯರು ಇಲ್ಲಿ ಶುಕ್ರವಾರ ನೊಂದಣಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದರು.</p>.<p>‘ಹಿರಿಯ ನೊಂದಣಾಧಿಕಾರಿ ಕಚೇರಿಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಕಚೇರಿ ಅಧಿಕಾರಿಗಳು ಹಾಗೂ ಸಿಬ್ಬಂದಿಯು ಲಂಚಕ್ಕಾಗಿ ಸಾರ್ವಜನಿಕರನ್ನು ಶೋಷಿಸುತ್ತಿದ್ದಾರೆ. ಸಾರ್ವಜನಿಕರು ಲಂಚ ಕೊಡದಿದ್ದರೆ ಅಧಿಕಾರಿಗಳು ಆಸ್ತಿ ನೊಂದಣಿ ಕೆಲಸ ಮಾಡಲು ಹಿಂದೇಟು ಹಾಕುತ್ತಾರೆ’ ಎಂದು ಧರಣಿನಿರತರು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಸರ್ವಾಧಿಕಾರಿಗಳಂತೆ ವರ್ತಿಸುತ್ತಿರುವ ಹಿರಿಯ ನೊಂದಣಾಧಿಕಾರಿ ಕಚೇರಿ ಅಧಿಕಾರಿಗಳು ಹಾಗೂ ಸಿಬ್ಬಂದಿಯು ಜನರಿಂದ ಲಂಚದ ರೂಪದಲ್ಲಿ ಲಕ್ಷಾಂತರ ರೂಪಾಯಿ ಸುಲಿಗೆ ಮಾಡುತ್ತಿದ್ದಾರೆ. ದಲ್ಲಾಳಿಗಳ ಜತೆ ಶಾಮೀಲಾಗಿ ಲಂಚದ ದಂಧೆ ನಡೆಸುತ್ತಿದ್ದಾರೆ’ ಎಂದು ಸಂಘಟನೆಯ ರಾಜ್ಯ ಘಟಕದ ಉಪಾಧ್ಯಕ್ಷ ಕೆ.ನಾರಾಯಣಗೌಡ ದೂರಿದರು.</p>.<p>‘ಸರ್ಕಾರ ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಜಿಲ್ಲಾಡಳಿತ ಭವನ ನಿರ್ಮಿಸಿದೆ. ಆದರೆ, ಕೆಲ ಇಲಾಖೆಗಳ ಕಚೇರಿಗಳು ಖಾಸಗಿ ಕಟ್ಟಡಗಳಲ್ಲಿ ಮುಂದುವರಿದಿವೆ. ಲಂಚದ ದಂಧೆಗಾಗಿಯೇ ಖಾಸಗಿ ಕಟ್ಟಡಗಳಲ್ಲಿ ಕಚೇರಿಗಳನ್ನು ಮುಂದುವರಿಸಲಾಗಿದೆ’ ಎಂದು ಆರೋಪಿಸಿದರು.</p>.<p><strong>ಹಣ ಪೋಲು: </strong>‘ಸರ್ಕಾರಿ ಕಟ್ಟಡವಿದ್ದರೂ ಅಧಿಕಾರಿಗಳು ಖಾಸಗಿ ಕಟ್ಟಡಗಳನ್ನು ಬಾಡಿಗೆಗೆ ಪಡೆದು ಸಾರ್ವಜನಿಕರ ಹಣವನ್ನು ಪೋಲು ಮಾಡುತ್ತಿದ್ದಾರೆ. ನೊಂದಣಾಧಿಕಾರಿ ಕಚೇರಿಯನ್ನು ಜಿಲ್ಲಾಡಳಿತ ಭವನಕ್ಕೆ ಸ್ಥಳಾಂತರಿಸಲು ಅಧಿಕಾರಿಗಳು ಮೀನಮೇಷ ಎಣಿಸುತ್ತಿದ್ದಾರೆ. ಲಂಚದಾಸೆಗಾಗಿ ಕಚೇರಿ ಸ್ಥಳಾಂತರಿಸದೆ ಸಬೂಬು ಹೇಳುತ್ತಿದ್ದಾರೆ’ ಎಂದು ಧರಣಿನಿರತರು ಕಿಡಿಕಾರಿದರು.</p>.<p>‘ಅಧಿಕಾರಿಗಳು ಜನರಿಗೆ ಸಿಗಬೇಕಾದ ಸವಲತ್ತುಗಳನ್ನು ಮಾರಾಟ ಮಾಡುವ ಸಂಚು ರೂಪಿಸಿದ್ದಾರೆ. ಲಂಚ ಕೊಡದ ಸಾರ್ವಜನಿಕರ ಆಸ್ತಿಯ ಕಡತಗಳನ್ನೇ ಅಧಿಕಾರಿಗಳು ನಾಪತ್ತೆ ಮಾಡುತ್ತಾರೆ. ದಾಖಲೆಪತ್ರಗಳಲ್ಲಿ ಉದ್ದೇಶಪೂರ್ವಕವಾಗಿ ತಪ್ಪು ಮಾಹಿತಿ ನಮೂದಿಸಿ ತೊಂದರೆ ಮಾಡುತ್ತಿದ್ದಾರೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಹಿರಿಯ ನೊಂದಣಾಧಿಕಾರಿ ಕಚೇರಿಯಲ್ಲಿನ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕು. ಕಚೇರಿಯನ್ನು ಶೀಘ್ರವೇ ಜಿಲ್ಲಾಡಳಿತ ಭವನಕ್ಕೆ ಸ್ಥಳಾಂತರಿಸಬೇಕು. ಭ್ರಷ್ಟ ಅಧಿಕಾರಿಗಳನ್ನು ಅಮಾನತು ಮಾಡಬೇಕು. ಇಲ್ಲದಿದ್ದರೆ ಜಿಲ್ಲಾಡಳಿತ ಭವನದ ಎದುರು ಹೋರಾಟ ನಡೆಸುತ್ತೇವೆ’ ಎಂದು ಎಚ್ಚರಿಕೆ ನೀಡಿದರು.</p>.<p>ರೈತ ಸಂಘ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀನಿವಾಸ್, ಸಂಚಾಲಕ ಕೆ.ಶ್ರೀನಿವಾಸಗೌಡ, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ್, ತಾಲ್ಲೂಕು ಘಟಕದ ಅಧ್ಯಕ್ಷ ಮಂಜುನಾಥ್, ಶ್ರೀನಿವಾಸಪುರ ತಾಲ್ಲೂಕು ಘಟಕದ ಅಧ್ಯಕ್ಷ ಆಂಜಿನಪ್ಪ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>