ಇದಕ್ಕೆ ಸ್ಪಂದಿಸಿದ ಸಮುದಾಯದ ಮುಖಂಡರು ಧರಣಿ ನಿರ್ಧಾರವನ್ನು ತಾತ್ಕಾಲಿಕವಾಗಿ ಕೈಬಿಟ್ಟು ಗಾಂಧಿ ಜಯಂತಿ ಆಚರಣೆಯಲ್ಲಿ ಪಾಲ್ಗೊಂಡರು. ಸುದ್ದಿಗಾರರೊಂದಿಗೆ ಮಾತನಾಡಿದ ಅಲೆಮಾರಿ ಬುಡಕಟ್ಟು ಮಹಾಸಭಾ ಪ್ರಧಾನ ಕಾರ್ಯದರ್ಶಿ ಮುರುಗೇಶ್, ‘ಅಧಿಕಾರಿಗಳು ಸಮುದಾಯದ ಮಕ್ಕಳಿಗೆ ಜಾತಿ ಪ್ರಮಾಣಪತ್ರ ನೀಡದ ಕಾರಣ ಶೈಕ್ಷಣಿಕವಾಗಿ ಸಾಕಷ್ಟು ಸಮಸ್ಯೆಯಾಗಿದೆ. ಸಮುದಾಯದವರು ಸರ್ಕಾರದ ಸವಲತ್ತುಗಳಿಂದ ವಂಚಿತರಾಗಿದ್ದಾರೆ’ ಎಂದರು.