ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ರಾಜ್ಯದ ಒಟ್ಟಾರೆ ಅಭಿವೃದ್ಧಿ ವಿಚಾರದಲ್ಲಿ ಹಣ ನೀಡದೆ ಅಲ್ಪಸಂಖ್ಯಾತರು, ಕ್ರೈಸ್ತ ಸಮುದಾಯಕ್ಕೆ ಹಾಗೂ ಗ್ಯಾರಂಟಿಗಳಿಗೆ ಮಾತ್ರ ಅನುದಾನ ಬಿಡುಗಡೆ ಮಾಡಿದ್ದಾರೆ. ಮುಜರಾಯಿ ಇಲಾಖೆಯನ್ನು ಪ್ರಾಧಿಕಾರವನ್ನಾಗಿಸಿ ಹುಂಡಿ ಹಣವನ್ನು ಅವರ ಪಕ್ಷದ ಮುಖಂಡರ ಐಷಾರಾಮಿ ಜೀವನಕ್ಕೆ ಕಾರು ಸೇರಿದಂತೆ ಮತ್ತಿತರ ಸೌಲಭ್ಯ ಕಲ್ಪಿಸಲು ದೇವಸ್ಥಾನ ಬಳಕೆ ಮಾಡಿಕೊಳ್ಳುತ್ತಿದ್ದಾರೆ’ ಎಂದು ದೂರಿದರು.