<p><strong>ಕೋಲಾರ: </strong>ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ ನೀಡಿದ್ದ ‘ಭಾರತ್ ಬಂದ್’ ಕರೆಗೆ ಜಿಲ್ಲೆಯಲ್ಲಿ ಸೋಮವಾರ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದರಿಂದ ಜನಜೀವನಕ್ಕೆ ಬಂದ್ನ ಬಿಸಿ ತಟ್ಟಲಿಲ್ಲ.</p>.<p>ರೈತಪರ ಸಂಘಟನೆಗಳು, ಸಿಪಿಎಂ, ಕಾಂಗ್ರೆಸ್ ಕಿಸಾನ್ ಖೇತ್ ಹೊರತುಪಡಿಸಿ ಇತರೆ ಸಂಘಟನೆಗಳ ಸದಸ್ಯರು ಹಾಗೂ ಜನರು ಬಂದ್ಗೆ ಬೆಂಬಲ ಸೂಚಿಸಲಿಲ್ಲ. ಕೆಲ ಸಂಘಟನೆಗಳ ಸದಸ್ಯರು ಬೈಕ್ ರ್ಯಾಲಿ, ಪ್ರತಿಭಟನಾ ಮೆರವಣಿಗೆ ಮಾಡಿದ್ದನ್ನು ಹೊರತುಪಡಿಸಿದರೆ ಎಲ್ಲಿಯೂ ಬಂದ್ನ ಛಾಯೆ ಇರಲಿಲ್ಲ.</p>.<p>ವಾಹನ ಸಂಚಾರ ಎಂದಿನಂತೆಯೇ ಇತ್ತು. ಕೆಎಸ್ಆರ್ಟಿಸಿ ಹಾಗೂ ಖಾಸಗಿ ಬಸ್ಗಳು, ಆಟೊಗಳು ಪ್ರತಿನಿತ್ಯದಂತೆ ರಸ್ತೆಗಿಳಿದವು. ಹೀಗಾಗಿ ಜನಜೀವನಕ್ಕೆ ಹೆಚ್ಚಿನ ತೊಂದರೆಯಾಗಲಿಲ್ಲ. ಕೆಎಸ್ಆರ್ಟಿಸಿ ಮತ್ತು ಹಳೆ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ದೊಡ್ಡ ದಂಡೇ ಕಂಡುಬಂತು.</p>.<p>ಎಪಿಎಂಸಿ, ರೇಷ್ಮೆಗೂಡು ಮತ್ತು ತರಕಾರಿ ಮಾರುಕಟ್ಟೆಯಲ್ಲಿ ದಿನನಿತ್ಯದಂತೆ ವಹಿವಾಟು ನಡೆಯಿತು. ತರಕಾರಿ, ಹಾಲು, ದಿನಸಿ ಪದಾರ್ಥ ಸೇರಿದಂತೆ ಅಗತ್ಯ ವಸ್ತುಗಳ ಪೂರೈಕೆಯಲ್ಲಿ ವ್ಯತ್ಯಯವಾಗಲಿಲ್ಲ. ಹೋಟೆಲ್ಗಳು, ಆಸ್ಪತ್ರೆಗಳು ಮತ್ತು ಔಷಧ ಮಾರಾಟ ಮಳಿಗೆಗಳು ಸೇವೆ ಒದಗಿಸಿದವು.</p>.<p>ಪ್ರಮುಖ ವಾಣಿಜ್ಯ ಸ್ಥಳಗಳಾದ ಎಂ.ಜಿ.ರಸ್ತೆ, ಎಂ.ಬಿ.ರಸ್ತೆ, ಅಮ್ಮವಾರಿಪೇಟೆ, ದೊಡ್ಡಪೇಟೆ, ಹಳೆ ಬಸ್ ನಿಲ್ದಾಣ, ಕ್ಲಾಕ್ ಟವರ್, ಗೌರಿಪೇಟೆಯಲ್ಲಿನ ಅಂಗಡಿಗಳು ಕೆಲ ಕಾಲ ತೆರೆದಿದ್ದವು. ಬಳಿಕ ಸಂಘಟನೆಗಳ ಸದಸ್ಯರು ಬಲವಂತವಾಗಿ ಅಂಗಡಿಗಳನ್ನು ಮುಚ್ಚಿಸಿದರು.</p>.<p>ಸರ್ಕಾರಿ ಕಚೇರಿಗಳು, ಬ್ಯಾಂಕ್ಗಳು, ಬಿಎಸ್ಎನ್ಎಲ್ ಕಚೇರಿ ಇಡೀ ದಿನ ಕಾರ್ಯ ನಿರ್ವಹಿಸಿದವು. ಕೆಲ ಸಂಘಟನೆಗಳ ಸದಸ್ಯರು ಅಂಚೆ ಕಚೇರಿಗೆ ಬೀಗ ಜಡಿದರು. ಆದರೆ, ಸಿಬ್ಬಂದಿ ಕಚೇರಿಯೊಳಗೆ ಕರ್ತವ್ಯ ನಿರ್ವಹಿಸಿದರು.ಸರ್ಕಾರಿ ಕಚೇರಿಗಳು ಮತ್ತು ಬ್ಯಾಂಕ್ಗಳಲ್ಲಿ ಹೆಚ್ಚಿನ ಜನಸಂದಣಿ ಇತ್ತು. ಪೆಟ್ರೋಲ್ ಬಂಕ್ಗಳಲ್ಲೂ ವಹಿವಾಟು ಸಹಜವಾಗಿತ್ತು. ವಾಹನ ಸವಾರರು ಸಾಲಿನಲ್ಲಿ ನಿಂತು ಪೆಟ್ರೋಲ್ ಮತ್ತು ಡೀಸೆಲ್ ಹಾಕಿಸಿಕೊಳ್ಳುತ್ತಿದ್ದ ದೃಶ್ಯ ಕಂಡುಬಂತು.</p>.<p>ಪರೀಕ್ಷೆ ಸುಗಮ: ಬಂದ್ನ ಕಾರಣಕ್ಕೆ ರಾಜ್ಯದ ಹಲವು ವಿಶ್ವವಿದ್ಯಾಲಯಗಳು ಸೋಮವಾರ ನಡೆಯಬೇಕಿದ್ದ ಪದವಿ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಯನ್ನು ಮುಂದೂಡಿದ್ದವು. ಆದರೆ, ಬೆಂಗಳೂರು ಉತ್ತರ ವಿ.ವಿ ಪರೀಕ್ಷೆಗಳು ಜಿಲ್ಲೆ ವ್ಯಾಪ್ತಿಯಲ್ಲಿ ಸುಸೂತ್ರವಾಗಿ ನಡೆದವು. ಎಸ್ಸೆಸ್ಸೆಲ್ಸಿಯ ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ವಿಷಯದ ಪೂರಕ ಪರೀಕ್ಷೆ ಸಹ ಸುಗಮವಾಗಿ ನಡೆಯಿತು.</p>.<p><strong>ಹಾಜರಾತಿ ಕಡಿಮೆ: </strong>ಸರ್ಕಾರವು ಸರ್ಕಾರಿ ಕಚೇರಿಗಳಿಗೆ ರಜೆ ಇಲ್ಲವೆಂದು ಮುಂಚಿತವಾಗಿ ತಿಳಿಸಿತ್ತು. ಆದರೂ ಬಂದ್ನ ಗೊಂದಲದಿಂದಾಗಿ ಹಾಗೂ ವಾರಾಂತ್ಯದ ಕಾರಣಕ್ಕೆ ಸರ್ಕಾರಿ ಕಚೇರಿಗಳಲ್ಲಿ ಸಿಬ್ಬಂದಿ ಹಾಜರಾತಿ ಕಡಿಮೆಯಿತ್ತು.</p>.<p>ಬಂದ್ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ ಬಸ್ ನಿಲ್ದಾಣ, ರೈಲು ನಿಲ್ದಾಣ, ಸರ್ಕಾರಿ ಕಚೇರಿಗಳು, ಪ್ರಮುಖ ವೃತ್ತ, ಜಂಕ್ಷನ್ಗಳು ಸೇರಿದಂತೆ ಜನನಿಬಿಡ ಪ್ರದೇಶದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಹೆಚ್ಚಿನ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿತ್ತು. ಹಿರಿಯ ಪೊಲೀಸ್ ಅಧಿಕಾರಿಗಳು ಸೂಕ್ಷ್ಮ ಪ್ರದೇಶಗಳಲ್ಲಿ ನಿಯಮಿತವಾಗಿ ಗಸ್ತು ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ: </strong>ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ ನೀಡಿದ್ದ ‘ಭಾರತ್ ಬಂದ್’ ಕರೆಗೆ ಜಿಲ್ಲೆಯಲ್ಲಿ ಸೋಮವಾರ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದರಿಂದ ಜನಜೀವನಕ್ಕೆ ಬಂದ್ನ ಬಿಸಿ ತಟ್ಟಲಿಲ್ಲ.</p>.<p>ರೈತಪರ ಸಂಘಟನೆಗಳು, ಸಿಪಿಎಂ, ಕಾಂಗ್ರೆಸ್ ಕಿಸಾನ್ ಖೇತ್ ಹೊರತುಪಡಿಸಿ ಇತರೆ ಸಂಘಟನೆಗಳ ಸದಸ್ಯರು ಹಾಗೂ ಜನರು ಬಂದ್ಗೆ ಬೆಂಬಲ ಸೂಚಿಸಲಿಲ್ಲ. ಕೆಲ ಸಂಘಟನೆಗಳ ಸದಸ್ಯರು ಬೈಕ್ ರ್ಯಾಲಿ, ಪ್ರತಿಭಟನಾ ಮೆರವಣಿಗೆ ಮಾಡಿದ್ದನ್ನು ಹೊರತುಪಡಿಸಿದರೆ ಎಲ್ಲಿಯೂ ಬಂದ್ನ ಛಾಯೆ ಇರಲಿಲ್ಲ.</p>.<p>ವಾಹನ ಸಂಚಾರ ಎಂದಿನಂತೆಯೇ ಇತ್ತು. ಕೆಎಸ್ಆರ್ಟಿಸಿ ಹಾಗೂ ಖಾಸಗಿ ಬಸ್ಗಳು, ಆಟೊಗಳು ಪ್ರತಿನಿತ್ಯದಂತೆ ರಸ್ತೆಗಿಳಿದವು. ಹೀಗಾಗಿ ಜನಜೀವನಕ್ಕೆ ಹೆಚ್ಚಿನ ತೊಂದರೆಯಾಗಲಿಲ್ಲ. ಕೆಎಸ್ಆರ್ಟಿಸಿ ಮತ್ತು ಹಳೆ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ದೊಡ್ಡ ದಂಡೇ ಕಂಡುಬಂತು.</p>.<p>ಎಪಿಎಂಸಿ, ರೇಷ್ಮೆಗೂಡು ಮತ್ತು ತರಕಾರಿ ಮಾರುಕಟ್ಟೆಯಲ್ಲಿ ದಿನನಿತ್ಯದಂತೆ ವಹಿವಾಟು ನಡೆಯಿತು. ತರಕಾರಿ, ಹಾಲು, ದಿನಸಿ ಪದಾರ್ಥ ಸೇರಿದಂತೆ ಅಗತ್ಯ ವಸ್ತುಗಳ ಪೂರೈಕೆಯಲ್ಲಿ ವ್ಯತ್ಯಯವಾಗಲಿಲ್ಲ. ಹೋಟೆಲ್ಗಳು, ಆಸ್ಪತ್ರೆಗಳು ಮತ್ತು ಔಷಧ ಮಾರಾಟ ಮಳಿಗೆಗಳು ಸೇವೆ ಒದಗಿಸಿದವು.</p>.<p>ಪ್ರಮುಖ ವಾಣಿಜ್ಯ ಸ್ಥಳಗಳಾದ ಎಂ.ಜಿ.ರಸ್ತೆ, ಎಂ.ಬಿ.ರಸ್ತೆ, ಅಮ್ಮವಾರಿಪೇಟೆ, ದೊಡ್ಡಪೇಟೆ, ಹಳೆ ಬಸ್ ನಿಲ್ದಾಣ, ಕ್ಲಾಕ್ ಟವರ್, ಗೌರಿಪೇಟೆಯಲ್ಲಿನ ಅಂಗಡಿಗಳು ಕೆಲ ಕಾಲ ತೆರೆದಿದ್ದವು. ಬಳಿಕ ಸಂಘಟನೆಗಳ ಸದಸ್ಯರು ಬಲವಂತವಾಗಿ ಅಂಗಡಿಗಳನ್ನು ಮುಚ್ಚಿಸಿದರು.</p>.<p>ಸರ್ಕಾರಿ ಕಚೇರಿಗಳು, ಬ್ಯಾಂಕ್ಗಳು, ಬಿಎಸ್ಎನ್ಎಲ್ ಕಚೇರಿ ಇಡೀ ದಿನ ಕಾರ್ಯ ನಿರ್ವಹಿಸಿದವು. ಕೆಲ ಸಂಘಟನೆಗಳ ಸದಸ್ಯರು ಅಂಚೆ ಕಚೇರಿಗೆ ಬೀಗ ಜಡಿದರು. ಆದರೆ, ಸಿಬ್ಬಂದಿ ಕಚೇರಿಯೊಳಗೆ ಕರ್ತವ್ಯ ನಿರ್ವಹಿಸಿದರು.ಸರ್ಕಾರಿ ಕಚೇರಿಗಳು ಮತ್ತು ಬ್ಯಾಂಕ್ಗಳಲ್ಲಿ ಹೆಚ್ಚಿನ ಜನಸಂದಣಿ ಇತ್ತು. ಪೆಟ್ರೋಲ್ ಬಂಕ್ಗಳಲ್ಲೂ ವಹಿವಾಟು ಸಹಜವಾಗಿತ್ತು. ವಾಹನ ಸವಾರರು ಸಾಲಿನಲ್ಲಿ ನಿಂತು ಪೆಟ್ರೋಲ್ ಮತ್ತು ಡೀಸೆಲ್ ಹಾಕಿಸಿಕೊಳ್ಳುತ್ತಿದ್ದ ದೃಶ್ಯ ಕಂಡುಬಂತು.</p>.<p>ಪರೀಕ್ಷೆ ಸುಗಮ: ಬಂದ್ನ ಕಾರಣಕ್ಕೆ ರಾಜ್ಯದ ಹಲವು ವಿಶ್ವವಿದ್ಯಾಲಯಗಳು ಸೋಮವಾರ ನಡೆಯಬೇಕಿದ್ದ ಪದವಿ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಯನ್ನು ಮುಂದೂಡಿದ್ದವು. ಆದರೆ, ಬೆಂಗಳೂರು ಉತ್ತರ ವಿ.ವಿ ಪರೀಕ್ಷೆಗಳು ಜಿಲ್ಲೆ ವ್ಯಾಪ್ತಿಯಲ್ಲಿ ಸುಸೂತ್ರವಾಗಿ ನಡೆದವು. ಎಸ್ಸೆಸ್ಸೆಲ್ಸಿಯ ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ವಿಷಯದ ಪೂರಕ ಪರೀಕ್ಷೆ ಸಹ ಸುಗಮವಾಗಿ ನಡೆಯಿತು.</p>.<p><strong>ಹಾಜರಾತಿ ಕಡಿಮೆ: </strong>ಸರ್ಕಾರವು ಸರ್ಕಾರಿ ಕಚೇರಿಗಳಿಗೆ ರಜೆ ಇಲ್ಲವೆಂದು ಮುಂಚಿತವಾಗಿ ತಿಳಿಸಿತ್ತು. ಆದರೂ ಬಂದ್ನ ಗೊಂದಲದಿಂದಾಗಿ ಹಾಗೂ ವಾರಾಂತ್ಯದ ಕಾರಣಕ್ಕೆ ಸರ್ಕಾರಿ ಕಚೇರಿಗಳಲ್ಲಿ ಸಿಬ್ಬಂದಿ ಹಾಜರಾತಿ ಕಡಿಮೆಯಿತ್ತು.</p>.<p>ಬಂದ್ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ ಬಸ್ ನಿಲ್ದಾಣ, ರೈಲು ನಿಲ್ದಾಣ, ಸರ್ಕಾರಿ ಕಚೇರಿಗಳು, ಪ್ರಮುಖ ವೃತ್ತ, ಜಂಕ್ಷನ್ಗಳು ಸೇರಿದಂತೆ ಜನನಿಬಿಡ ಪ್ರದೇಶದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಹೆಚ್ಚಿನ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿತ್ತು. ಹಿರಿಯ ಪೊಲೀಸ್ ಅಧಿಕಾರಿಗಳು ಸೂಕ್ಷ್ಮ ಪ್ರದೇಶಗಳಲ್ಲಿ ನಿಯಮಿತವಾಗಿ ಗಸ್ತು ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>