<p><strong>ಬಂಗಾರಪೇಟೆ</strong>: ಪಟ್ಟಣದ ಉದ್ಯಮಿ ಷಣ್ಮುಗಂ ಅವರಿಗೆ ಸೇರಿದ ಅಕ್ಕಿ ಗಿರಣಿ, ಫೈನಾನ್ಸ್ ಸಂಸ್ಥೆ ಸೇರಿದಂತೆ ಅವರ ಆಸ್ತಿಯನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಂಡಿದೆ.</p>.<p>ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತದ ಸೂಚನೆಯಂತೆ ಪಟ್ಟಣದ ಶ್ರೀಷಣ್ಮುಗ ಫೈನಾನ್ಸಿಯರ್ಸ್, ಆರ್ಕೆಎನ್ ಚಿಟ್ಸ್ ಆ್ಯಂಡ್ ಇನ್ವೆಸ್ಟ್ಮೆಂಟ್ಸ್ ಪ್ರೈವೇಟ್ ಲಿಮಿಟೆಡ್, ಆರ್.ಕೆ.ಎನ್. ಮಿಲ್ಗಳಿಗೆ ಗುರುವಾರ ಪುರಸಭೆ ಮುಖ್ಯಾಧಿಕಾರಿ ಬೀಗಮುದ್ರೆ ಹಾಕಿದ್ದಾರೆ. ಜತೆಗೆ ಸಂಸ್ಥೆಗಳ ಮುಖ್ಯದ್ವಾರದಲ್ಲಿ ಸಾರ್ವಜನಿಕ ಪ್ರಕಟಣೆ ಫಲಕ ಅಳವಡಿಸಲಾಗಿದೆ.</p>.<p>ಕಂದಾಯ ಇಲಾಖೆಯಅಧೀನ ಕಾರ್ಯದರ್ಶಿ ಅವರ ನಿರ್ದೇಶನದಂತೆ ಈ ಜಾಗವನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಂಡಿದ್ದು, ಸಾರ್ವಜನಿಕರು ಪ್ರವೇಶಿಸಲು ನಿಷೇಧಿಸಿದೆ ಎಂದು ಫಲಕದಲ್ಲಿ ಬರೆಯಲಾಗಿದೆ. ಅಲ್ಲದೇ, ಅವರಿಗೆ ಸೇರಿದ ನಿವೇಶನಗಳನ್ನೂ ವಶಕ್ಕೆ ಪಡೆದಿದ್ದು, ಮನೆಗೂ ಬೀಗಮುದ್ರೆ ಹಾಕುವ ಸಂಭವವಿದೆ ಎಂದು ಮೂಲಗಳು ತಿಳಿಸಿವೆ.</p>.<p>ಜಿಲ್ಲಾಧಿಕಾರಿ ಅವರ ಆದೇಶದ ಮೇರೆಗೆ ಷಣ್ಮುಗಂ ಅವರ ಹಣಕಾಸಿನ ಸಂಸ್ಥೆ, ಮಿಲ್ ಹಾಗೂ ನಿವೇಶನಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಶ್ರೀಧರ್ ತಿಳಿಸಿದ್ದಾರೆ.</p>.<p>ಷಣ್ಮುಗಂ ತನ್ನ ಹಣಕಾಸಿನ ಸಂಸ್ಥೆಯಲ್ಲಿ ಹೂಡಿಕೆ ಮಾಡಿದ್ದ ಸಾವಿರಾರು ಜನರಿಗೆ ಕೋಟಿಗಟ್ಟಲೆ ಹಣ ವಂಚಿಸಿದ್ದರು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಸಿಒಡಿ ಎರಡು ವರ್ಷದ ಹಿಂದೆ ತನಿಖೆ ನಡೆಸಿ ಸರ್ಕಾರಕ್ಕೆ ವರದಿ ನೀಡಿತ್ತು. ಈ ವರದಿ ಆಧರಿಸಿ ಅವರ ಆಸ್ತಿಯನ್ನು ಸರ್ಕಾರ ವಶಕ್ಕೆ ಪಡೆದಿದೆ.ವಂಚನೆ ಪ್ರಕರಣದಲ್ಲಿ ಸಿಒಡಿ ಪೊಲೀಸರು ಷಣ್ಮುಗಂ ಅವರನ್ನು ಬಂಧಿಸಿದ್ದು, ಪ್ರಸ್ತುತ ಷರತ್ತುಬದ್ಧ ಜಾಮೀನು ಪಡೆದಿದ್ದಾರೆ.</p>.<p>ರಾಜ್ಯದ ವಿವಿಧ ನ್ಯಾಯಾಲಯ ಗಳಲ್ಲಿ ಅವರ ವಿರುದ್ಧ 50ಕ್ಕೂ ಹೆಚ್ಚು ಚೆಕ್ಬೌನ್ಸ್ ಪ್ರಕರಣ ದಾಖಲಾಗಿದ್ದು, ವಿಚಾರಣೆ ಹಂತದಲ್ಲಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಂಗಾರಪೇಟೆ</strong>: ಪಟ್ಟಣದ ಉದ್ಯಮಿ ಷಣ್ಮುಗಂ ಅವರಿಗೆ ಸೇರಿದ ಅಕ್ಕಿ ಗಿರಣಿ, ಫೈನಾನ್ಸ್ ಸಂಸ್ಥೆ ಸೇರಿದಂತೆ ಅವರ ಆಸ್ತಿಯನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಂಡಿದೆ.</p>.<p>ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತದ ಸೂಚನೆಯಂತೆ ಪಟ್ಟಣದ ಶ್ರೀಷಣ್ಮುಗ ಫೈನಾನ್ಸಿಯರ್ಸ್, ಆರ್ಕೆಎನ್ ಚಿಟ್ಸ್ ಆ್ಯಂಡ್ ಇನ್ವೆಸ್ಟ್ಮೆಂಟ್ಸ್ ಪ್ರೈವೇಟ್ ಲಿಮಿಟೆಡ್, ಆರ್.ಕೆ.ಎನ್. ಮಿಲ್ಗಳಿಗೆ ಗುರುವಾರ ಪುರಸಭೆ ಮುಖ್ಯಾಧಿಕಾರಿ ಬೀಗಮುದ್ರೆ ಹಾಕಿದ್ದಾರೆ. ಜತೆಗೆ ಸಂಸ್ಥೆಗಳ ಮುಖ್ಯದ್ವಾರದಲ್ಲಿ ಸಾರ್ವಜನಿಕ ಪ್ರಕಟಣೆ ಫಲಕ ಅಳವಡಿಸಲಾಗಿದೆ.</p>.<p>ಕಂದಾಯ ಇಲಾಖೆಯಅಧೀನ ಕಾರ್ಯದರ್ಶಿ ಅವರ ನಿರ್ದೇಶನದಂತೆ ಈ ಜಾಗವನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಂಡಿದ್ದು, ಸಾರ್ವಜನಿಕರು ಪ್ರವೇಶಿಸಲು ನಿಷೇಧಿಸಿದೆ ಎಂದು ಫಲಕದಲ್ಲಿ ಬರೆಯಲಾಗಿದೆ. ಅಲ್ಲದೇ, ಅವರಿಗೆ ಸೇರಿದ ನಿವೇಶನಗಳನ್ನೂ ವಶಕ್ಕೆ ಪಡೆದಿದ್ದು, ಮನೆಗೂ ಬೀಗಮುದ್ರೆ ಹಾಕುವ ಸಂಭವವಿದೆ ಎಂದು ಮೂಲಗಳು ತಿಳಿಸಿವೆ.</p>.<p>ಜಿಲ್ಲಾಧಿಕಾರಿ ಅವರ ಆದೇಶದ ಮೇರೆಗೆ ಷಣ್ಮುಗಂ ಅವರ ಹಣಕಾಸಿನ ಸಂಸ್ಥೆ, ಮಿಲ್ ಹಾಗೂ ನಿವೇಶನಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಶ್ರೀಧರ್ ತಿಳಿಸಿದ್ದಾರೆ.</p>.<p>ಷಣ್ಮುಗಂ ತನ್ನ ಹಣಕಾಸಿನ ಸಂಸ್ಥೆಯಲ್ಲಿ ಹೂಡಿಕೆ ಮಾಡಿದ್ದ ಸಾವಿರಾರು ಜನರಿಗೆ ಕೋಟಿಗಟ್ಟಲೆ ಹಣ ವಂಚಿಸಿದ್ದರು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಸಿಒಡಿ ಎರಡು ವರ್ಷದ ಹಿಂದೆ ತನಿಖೆ ನಡೆಸಿ ಸರ್ಕಾರಕ್ಕೆ ವರದಿ ನೀಡಿತ್ತು. ಈ ವರದಿ ಆಧರಿಸಿ ಅವರ ಆಸ್ತಿಯನ್ನು ಸರ್ಕಾರ ವಶಕ್ಕೆ ಪಡೆದಿದೆ.ವಂಚನೆ ಪ್ರಕರಣದಲ್ಲಿ ಸಿಒಡಿ ಪೊಲೀಸರು ಷಣ್ಮುಗಂ ಅವರನ್ನು ಬಂಧಿಸಿದ್ದು, ಪ್ರಸ್ತುತ ಷರತ್ತುಬದ್ಧ ಜಾಮೀನು ಪಡೆದಿದ್ದಾರೆ.</p>.<p>ರಾಜ್ಯದ ವಿವಿಧ ನ್ಯಾಯಾಲಯ ಗಳಲ್ಲಿ ಅವರ ವಿರುದ್ಧ 50ಕ್ಕೂ ಹೆಚ್ಚು ಚೆಕ್ಬೌನ್ಸ್ ಪ್ರಕರಣ ದಾಖಲಾಗಿದ್ದು, ವಿಚಾರಣೆ ಹಂತದಲ್ಲಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>