ಫೆ.11ಕ್ಕೆ ಉಪ ಚುನಾವಣೆ ಪ್ರಕ್ರಿಯೆ ಮುಗಿಯಲಿದ್ದು, ಆವರೆಗೆ ಕ್ಷೇತ್ರದ ವ್ಯಾಪ್ತಿಯಲ್ಲಿ ನೀತಿಸಂಹಿತೆ ಜಾರಿಯಲ್ಲಿರುತ್ತದೆ. ಚುನಾವಣಾ ನೀತಿಸಂಹಿತೆ ನಿಗಾ ವಹಿಸಲಾಗುತ್ತದೆ. ನೀತಿಸಂಹಿತೆ ಉಲ್ಲಂಘಿಸಿದರೆ ಶಿಸ್ತುಕ್ರಮ ಜರುಗಿಸುತ್ತೇವೆ. ಸಾರ್ವಜನಿಕರು, ಅಭ್ಯರ್ಥಿಗಳು ಹಾಗೂ ರಾಜಕೀಯ ಪಕ್ಷಗಳು ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗೆ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.