ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಕ್ರಾಂತಿ ಬಳಿಕ ವಿಸ್ತರಣೆ

Last Updated 8 ಜನವರಿ 2021, 8:33 IST
ಅಕ್ಷರ ಗಾತ್ರ

ಕೋಲಾರ: ‘ಸಂಕ್ರಾಂತಿ ಹಬ್ಬದ ನಂತರ ಯಾವುದೇ ಕ್ಷಣದಲ್ಲಿ ಸಚಿವ ಸಂಪುಟ ವಿಸ್ತರಣೆ ಆಗಬಹುದು’ ಎಂದು ಅಬಕಾರಿ ಸಚಿವ ಎಚ್‌.ನಾಗೇಶ್‌ ಹೇಳಿದರು.

ಇಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿ, ‘ನಾವು ತ್ಯಾಗ ಮಾಡಿದ್ದರಿಂದಲೇ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಯಿತು. ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮೇಲೆ ನಂಬಿಕೆಯಿದೆ. ಅವರು ಕೊಟ್ಟ ಮಾತು ಉಳಿಸಿಕೊಳ್ಳುತ್ತಾರೆ’ ಎಂದರು.

‘ಮುಖ್ಯಮಂತ್ರಿಗಳು ವಿಧಾನ ಪರಿಷತ್‌ ಸದಸ್ಯರಾದ ಆರ್‌.ಶಂಕರ್, ಎಂಟಿಬಿ ನಾಗರಾಜ್‌ ಮತ್ತು ಶಾಸಕ ಮುನಿರತ್ನ ಅವರನ್ನು ಮಂತ್ರಿ ಮಾಡೇ ಮಾಡುತ್ತಾರೆ. ಇದು ನೂರಕ್ಕೆ ನೂರು ಸತ್ಯ. ಎಚ್‌.ವಿಶ್ವನಾಥ್‌ ಅವರ ವಿಚಾರ ನನಗೆ ಗೊತ್ತಿಲ್ಲ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT