ಇದರ ಬೆನ್ನಲ್ಲೇ ನಾಗೇಶ್ ಅವರು ಹಾಲು ಸರಬರಾಜು ಮಾಡುವ ಮಾದರಿಯಲ್ಲಿ ಜನರ ಮನೆ ಬಾಗಿಲಿಗೆ ಮದ್ಯ ಪೂರೈಕೆ ಮಾಡುವುದಾಗಿ ಹೇಳಿಕೆ ನೀಡಿ ಸರ್ಕಾರಕ್ಕೆ ತೀವ್ರ ಮುಜುಗರ ಉಂಟು ಮಾಡಿದ್ದರು. ಲಂಚದ ಆರೋಪ ಮತ್ತು ನಾಗೇಶ್ರ ಬಾಲಿಷ ಹೇಳಿಕೆ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ ಬಿಜೆಪಿ ವರಿಷ್ಠರು ಅವರನ್ನು ಸಂಪುಟದಿಂದ ಕೈಬಿಡುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಸಂದೇಶ ರವಾನಿಸಿದ್ದರು.