ಆಸ್ಪತ್ರೆ ಆಡಳಿತ ಹಾಗೂ ಆಸ್ಪತ್ರೆ ವೈದ್ಯರ ಬಗ್ಗೆ ದೂರುಗಳಿವೆಯಲ್ಲಾ ಎಂಬ ಪ್ರಶ್ನೆಗೆ, ‘ತಾಯಿ ಮತ್ತು ಮಕ್ಕಳ ವಿಭಾಗದ 100 ಬೆಡ್ ಸೇರಿದಂತೆ ಆಸ್ಪತ್ರೆಯ ಎಲ್ಲಾ 500 ಬೆಡ್ಗಳು ಭರ್ತಿಯಾಗಿರುತ್ತವೆ. ನಿತ್ಯ 450 ಹೆರಿಗೆ ಮಾಡಲಾಗುತ್ತಿದೆ. ಸಾವಿರಕ್ಕೂ ಅಧಿಕ ಮಂದಿ ಹೊರರೋಗಿಗಳಾಗಿ ಬಂದು ಚಿಕಿತ್ಸೆ ಪಡೆಯುತ್ತಿದ್ದಾರೆ. ಆಯುಷ್ಮಾನ್ ಭಾರತ್ - ಆರೋಗ್ಯ ಕರ್ನಾಟಕ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ್ದು, ರಾಜ್ಯದಲ್ಲಿ 3 ನೇ ಸ್ಥಾನದಲ್ಲಿದ್ದೇವೆ. ಸರಿಯಾಗಿ ಚಿಕಿತ್ಸೆ ನೀಡದಿದ್ದರೆ ಇಷ್ಟೊಂದು ರೋಗಿಗಳು ಬರುತ್ತಿದ್ದರೇ’ ಎಂದು ಮರು ಪ್ರಶ್ನೆ ಹಾಕಿದರು.