ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರು ಅಪಘಾತ: ಯುವಕ ಸಾವು

Last Updated 19 ಮಾರ್ಚ್ 2022, 16:22 IST
ಅಕ್ಷರ ಗಾತ್ರ

ಕೋಲಾರ: ತಾಲ್ಲೂಕಿನ ಚಿಕ್ಕಬಳ್ಳಾಪುರ ರಸ್ತೆಯ ಜೂಹಳ್ಳಿ ಗೇಟ್‌ ಬಳಿ ಶನಿವಾರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್‌ಆರ್‌ಟಿಸಿ) ಬಸ್‌ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಆದಿ ಉರುಫ್‌ ಆದರ್ಶ್‌ (26) ಎಂಬುವರು ಮೃತಪಟ್ಟಿದ್ದಾರೆ.

ಶ್ರೀನಿವಾಸಪುರ ಪಟ್ಟಣದ ಆದರ್ಶ್‌ ಅವರು ಶಿಡ್ಲಘಟ್ಟದಿಂದ ಕೋಲಾರಕ್ಕೆ ಬರುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಕಾರು ಚಾಲನೆ ಮಾಡುತ್ತಿದ್ದ ಅವರು ನಿಯಂತ್ರಣ ತಪ್ಪಿ ಎದುರುಗಡೆಯಿಂದ ಬರುತ್ತಿದ್ದ ಬಸ್‌ಗೆ ವಾಹನ ಗುದ್ದಿಸಿದ್ದಾರೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ ಎಂದು ಗ್ರಾಮಾಂತರ ಠಾಣೆ ಪೊಲೀಸರು ತಿಳಿಸಿದ್ದಾರೆ. ದೂರು ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT