<p><strong>ಕೋಲಾರ</strong>: ‘ವೃತ್ತಿನಿರತ ಬಡಗಿಗಳು ಸರ್ಕಾರದ ಸೌಲಭ್ಯ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಪಡೆಯಿರಿ; ಎಂದು ರಾಜ್ಯ ಪ್ರದೇಶ ಅಸಂಘಟಿತ ಕಾರ್ಮಿಕ ಪರಿಷತ್ ಅಧ್ಯಕ್ಷ ಕೆ.ವಿ.ಸುರೇಶ್ಕುಮಾರ್ ಕಿವಿಮಾತು ಹೇಳಿದರು.</p>.<p>ತಾಲ್ಲೂಕು ಬಡಗಿಗಳ ಕ್ಷೇಮಾಭಿವೃದ್ಧಿ ಸಂಘವು ಇಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಬಡಗಿಗಳಿಗೆ ಸುರಕ್ಷತಾ ಸಲಕರಣೆಗಳ ಕಿಟ್ ಮತ್ತು ಗುರುತಿನ ಚೀಟಿ ವಿತರಿಸಿ ಮಾತನಾಡಿದರು.</p>.<p>‘ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಲ್ಯಾಣ ಮಂಡಳಿ ವತಿಯಿಂದ ನೀಡುತ್ತಿರುವ ಸೌಲಭ್ಯ ಪಡೆದುಕೊಳ್ಳಲು ಗುರುತಿನ ಚೀಟಿ ಕಡ್ಡಾಯ. ಕೋವಿಡ್ ಸಂದರ್ಭದಲ್ಲಿ ಗುರುತಿನ ಚೀಟಿ ಇಲ್ಲದೆ ಸಾವಿರಾರು ಬಡಗಿಗಳು ಸೌಲಭ್ಯಗಳಿಂದ ವಂಚಿತರಾದರು’ ಎಂದು ತಿಳಿಸಿದರು.</p>.<p>‘ಈಗಾಗಲೇ ನೋಂದಾಯಿತ ಕಾರ್ಮಿಕರು ಮುಖ್ಯಮಂತ್ರಿಗಳ ಕೋವಿಡ್ ಪರಿಹಾರ ನಿಧಿಯ ₹ 3 ಸಾವಿರ ಸಿಗದೆ ಪರಿತಪಿಸುತ್ತಿದ್ದಾರೆ. ಈ ಹಣ ಬಿಡುಗಡೆಗಾಗಿ ಶಾಸಕ ಕೆ.ಶ್ರೀನಿವಾಸಗೌಡರ ನೇತೃತ್ವದಲ್ಲಿ ರಾಜ್ಯ ಕಾರ್ಮಿಕ ಇಲಾಖೆ ಆಯುಕ್ತರನ್ನು ಭೇಟಿ ಮಾಡಿ ಬಾಕಿ ಉಳಿದಿರುವ ಪರಿಹಾರದ ಹಣ ಬಿಡುಗಡೆಗೆ ಮಾಡುವಂತೆ ಒತ್ತಾಯಿಸಲು ನಿರ್ಧರಿಸಿದ್ದೇವೆ’ ಎಂದು ವಿವರಿಸಿದರು.</p>.<p>‘ಕೊರೊನಾ ಸೋಂಕು ಹರಡುವಿಕೆ ತಡೆಗೆ ಕೆಲಸದ ಸ್ಥಳಗಳಲ್ಲಿ ಸುರಕ್ಷತಾ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸಬೇಕು. ಅಂತರ ಕಾಪಾಡಬೇಕು ಮತ್ತು ಮಾಸ್ಕ್ ಬಳಸಬೇಕು. ನಗರಸಭೆಯಿಂದ ಸಿಗುವ ಸೌಲಭ್ಯ ಪಡೆಯಲು ನಮ್ಮನ್ನು ನೇರವಾಗಿ ಭೇಟಿಯಾಗಿ’ ಎಂದು ನಗರಸಭೆ ಅಧ್ಯಕ್ಷೆ ಆರ್.ಶ್ವೇತಾ ಶಬರೀಶ್ ಮನವಿ ಮಾಡಿದರು.</p>.<p>ಜಿಲ್ಲಾ ಬಡಗಿಗಳ ಸಂಘದ ಅಧ್ಯಕ್ಷ ಶೇಕ್ ಬಾಬು, ತಾಲ್ಲೂಕು ಸಂಘದ ಅಧ್ಯಕ್ಷ ಎಸ್.ಎಲ್.ವಿ.ಕುಮಾರ್, ಕಾರ್ಯದರ್ಶಿ ಮುನಿಯಪ್ಪ, ಖಜಾಂಚಿ ಫಯಾಜ್, ಪದಾಧಿಕಾರಿಗಳಾದ ಅಕ್ರಂ, ಷಫಿಉಲ್ಲಾ ಪಾಲ್ಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ</strong>: ‘ವೃತ್ತಿನಿರತ ಬಡಗಿಗಳು ಸರ್ಕಾರದ ಸೌಲಭ್ಯ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಪಡೆಯಿರಿ; ಎಂದು ರಾಜ್ಯ ಪ್ರದೇಶ ಅಸಂಘಟಿತ ಕಾರ್ಮಿಕ ಪರಿಷತ್ ಅಧ್ಯಕ್ಷ ಕೆ.ವಿ.ಸುರೇಶ್ಕುಮಾರ್ ಕಿವಿಮಾತು ಹೇಳಿದರು.</p>.<p>ತಾಲ್ಲೂಕು ಬಡಗಿಗಳ ಕ್ಷೇಮಾಭಿವೃದ್ಧಿ ಸಂಘವು ಇಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಬಡಗಿಗಳಿಗೆ ಸುರಕ್ಷತಾ ಸಲಕರಣೆಗಳ ಕಿಟ್ ಮತ್ತು ಗುರುತಿನ ಚೀಟಿ ವಿತರಿಸಿ ಮಾತನಾಡಿದರು.</p>.<p>‘ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಲ್ಯಾಣ ಮಂಡಳಿ ವತಿಯಿಂದ ನೀಡುತ್ತಿರುವ ಸೌಲಭ್ಯ ಪಡೆದುಕೊಳ್ಳಲು ಗುರುತಿನ ಚೀಟಿ ಕಡ್ಡಾಯ. ಕೋವಿಡ್ ಸಂದರ್ಭದಲ್ಲಿ ಗುರುತಿನ ಚೀಟಿ ಇಲ್ಲದೆ ಸಾವಿರಾರು ಬಡಗಿಗಳು ಸೌಲಭ್ಯಗಳಿಂದ ವಂಚಿತರಾದರು’ ಎಂದು ತಿಳಿಸಿದರು.</p>.<p>‘ಈಗಾಗಲೇ ನೋಂದಾಯಿತ ಕಾರ್ಮಿಕರು ಮುಖ್ಯಮಂತ್ರಿಗಳ ಕೋವಿಡ್ ಪರಿಹಾರ ನಿಧಿಯ ₹ 3 ಸಾವಿರ ಸಿಗದೆ ಪರಿತಪಿಸುತ್ತಿದ್ದಾರೆ. ಈ ಹಣ ಬಿಡುಗಡೆಗಾಗಿ ಶಾಸಕ ಕೆ.ಶ್ರೀನಿವಾಸಗೌಡರ ನೇತೃತ್ವದಲ್ಲಿ ರಾಜ್ಯ ಕಾರ್ಮಿಕ ಇಲಾಖೆ ಆಯುಕ್ತರನ್ನು ಭೇಟಿ ಮಾಡಿ ಬಾಕಿ ಉಳಿದಿರುವ ಪರಿಹಾರದ ಹಣ ಬಿಡುಗಡೆಗೆ ಮಾಡುವಂತೆ ಒತ್ತಾಯಿಸಲು ನಿರ್ಧರಿಸಿದ್ದೇವೆ’ ಎಂದು ವಿವರಿಸಿದರು.</p>.<p>‘ಕೊರೊನಾ ಸೋಂಕು ಹರಡುವಿಕೆ ತಡೆಗೆ ಕೆಲಸದ ಸ್ಥಳಗಳಲ್ಲಿ ಸುರಕ್ಷತಾ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸಬೇಕು. ಅಂತರ ಕಾಪಾಡಬೇಕು ಮತ್ತು ಮಾಸ್ಕ್ ಬಳಸಬೇಕು. ನಗರಸಭೆಯಿಂದ ಸಿಗುವ ಸೌಲಭ್ಯ ಪಡೆಯಲು ನಮ್ಮನ್ನು ನೇರವಾಗಿ ಭೇಟಿಯಾಗಿ’ ಎಂದು ನಗರಸಭೆ ಅಧ್ಯಕ್ಷೆ ಆರ್.ಶ್ವೇತಾ ಶಬರೀಶ್ ಮನವಿ ಮಾಡಿದರು.</p>.<p>ಜಿಲ್ಲಾ ಬಡಗಿಗಳ ಸಂಘದ ಅಧ್ಯಕ್ಷ ಶೇಕ್ ಬಾಬು, ತಾಲ್ಲೂಕು ಸಂಘದ ಅಧ್ಯಕ್ಷ ಎಸ್.ಎಲ್.ವಿ.ಕುಮಾರ್, ಕಾರ್ಯದರ್ಶಿ ಮುನಿಯಪ್ಪ, ಖಜಾಂಚಿ ಫಯಾಜ್, ಪದಾಧಿಕಾರಿಗಳಾದ ಅಕ್ರಂ, ಷಫಿಉಲ್ಲಾ ಪಾಲ್ಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>