<p><strong>ಕೋಲಾರ</strong>: ‘ಕದನ ವಿರಾಮವನ್ನು ನಾನು ಸ್ವಾಗತಿಸುತ್ತೇನೆ. ರಾಜ್ಯ ಆಳುವಾಗ ಯಾರಾದರೂ ಹಿರಿಯರು ಬಂದು ವ್ಯಾಜ್ಯವನ್ನು ಬಗೆಹರಿಸಲು ಮುಂದಾದಾಗ ಅದಕ್ಕೆ ಗೌರವ ಕೊಡಬೇಕು. ನಮ್ಮ ನಾಗರಿಕರನ್ನು ಕಳೆದುಕೊಂಡ ನೋವು ಇದ್ದರೂ ಕಲಹ ಅಥವಾ ಯುದ್ಧದಿಂದ ಯಾವುದೇ ಲಾಭವಿಲ್ಲ’ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.</p><p>ಅಮೆರಿಕದ ಮಧ್ಯಸ್ಥಿಕೆ ಹಾಗೂ ಕದನ ವಿರಾಮ ಕುರಿತ ಪ್ರಶ್ನೆಗೆ ನಗರದಲ್ಲಿ ಸೋಮವಾರ ಸುದ್ದಿಗಾರರರಿಗೆ ಈ ರೀತಿ ಪ್ರತಿಕ್ರಿಯಿಸಿದರು.</p><p>‘ಪಹಲ್ಗಾಮ್ನಲ್ಲಿ ನಮ್ಮ ಜನರನ್ನು ಉಗ್ರರು ಕೊಂದ್ದಕ್ಕೆ ನಾವು ಪಾಕಿಸ್ತಾನದಲ್ಲಿ ಉಗ್ರರ ನೆಲೆಗಳ ಮೇಲೆ ದಾಳಿ ಮಾಡಿದ್ದೇವೆಯೇ ಹೊರತು ಪಾಕಿಸ್ತಾನದ ಮೇಲೆ ಯುದ್ಧ ಮಾಡುವ ಅವಶ್ಯ ಇರಲಿಲ್ಲ. ಪಾಕಿಸ್ತಾನದ ನಾಗರಿಕರನ್ನಾಗಲಿ, ಅಲ್ಲಿನ ಸೈನಿಕರನ್ನಾಗಲಿ ನಾವು ಮುಟ್ಟಿಲ್ಲ’ ಎಂದು ತಿಳಿಸಿದರು.</p><p>‘ಶಾಂತಿಯಿಂದ ಸಾಧನೆ ಮಾಡಬೇಕೆಂದು ಗಾಂಧೀಜಿ ಪಾಠ ಹೇಳಿಕೊಟ್ಟಿದ್ದಾರೆ. ಬ್ರಿಟಿಷರು 200 ವರ್ಷ ರಾಜ್ಯಭಾರ ಮಾಡಿದರು. ಅವರ ವಿರುದ್ಧ ನಾವು ಗೆದ್ದಿದ್ದು ಯುದ್ಧದಿಂದ ಅಲ್ಲ; ಶಾಂತಿಯಿಂದ. ಆ ಸಿದ್ಧಾಂತದಲ್ಲೇ ನಾವು ಇದ್ದೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ</strong>: ‘ಕದನ ವಿರಾಮವನ್ನು ನಾನು ಸ್ವಾಗತಿಸುತ್ತೇನೆ. ರಾಜ್ಯ ಆಳುವಾಗ ಯಾರಾದರೂ ಹಿರಿಯರು ಬಂದು ವ್ಯಾಜ್ಯವನ್ನು ಬಗೆಹರಿಸಲು ಮುಂದಾದಾಗ ಅದಕ್ಕೆ ಗೌರವ ಕೊಡಬೇಕು. ನಮ್ಮ ನಾಗರಿಕರನ್ನು ಕಳೆದುಕೊಂಡ ನೋವು ಇದ್ದರೂ ಕಲಹ ಅಥವಾ ಯುದ್ಧದಿಂದ ಯಾವುದೇ ಲಾಭವಿಲ್ಲ’ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.</p><p>ಅಮೆರಿಕದ ಮಧ್ಯಸ್ಥಿಕೆ ಹಾಗೂ ಕದನ ವಿರಾಮ ಕುರಿತ ಪ್ರಶ್ನೆಗೆ ನಗರದಲ್ಲಿ ಸೋಮವಾರ ಸುದ್ದಿಗಾರರರಿಗೆ ಈ ರೀತಿ ಪ್ರತಿಕ್ರಿಯಿಸಿದರು.</p><p>‘ಪಹಲ್ಗಾಮ್ನಲ್ಲಿ ನಮ್ಮ ಜನರನ್ನು ಉಗ್ರರು ಕೊಂದ್ದಕ್ಕೆ ನಾವು ಪಾಕಿಸ್ತಾನದಲ್ಲಿ ಉಗ್ರರ ನೆಲೆಗಳ ಮೇಲೆ ದಾಳಿ ಮಾಡಿದ್ದೇವೆಯೇ ಹೊರತು ಪಾಕಿಸ್ತಾನದ ಮೇಲೆ ಯುದ್ಧ ಮಾಡುವ ಅವಶ್ಯ ಇರಲಿಲ್ಲ. ಪಾಕಿಸ್ತಾನದ ನಾಗರಿಕರನ್ನಾಗಲಿ, ಅಲ್ಲಿನ ಸೈನಿಕರನ್ನಾಗಲಿ ನಾವು ಮುಟ್ಟಿಲ್ಲ’ ಎಂದು ತಿಳಿಸಿದರು.</p><p>‘ಶಾಂತಿಯಿಂದ ಸಾಧನೆ ಮಾಡಬೇಕೆಂದು ಗಾಂಧೀಜಿ ಪಾಠ ಹೇಳಿಕೊಟ್ಟಿದ್ದಾರೆ. ಬ್ರಿಟಿಷರು 200 ವರ್ಷ ರಾಜ್ಯಭಾರ ಮಾಡಿದರು. ಅವರ ವಿರುದ್ಧ ನಾವು ಗೆದ್ದಿದ್ದು ಯುದ್ಧದಿಂದ ಅಲ್ಲ; ಶಾಂತಿಯಿಂದ. ಆ ಸಿದ್ಧಾಂತದಲ್ಲೇ ನಾವು ಇದ್ದೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>