<p><strong>ಶ್ರೀನಿವಾಸಪುರ:</strong> ‘ತ್ಯಾಗ ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಶಾಂತಿಯುತವಾಗಿ ಆಚರಿಸಿ ಮತ್ತೊಬ್ಬರಿಗೆ ಮಾದರಿಯಾಗಿ. ಯಾವುದೇ ಹಬ್ಬ ಸಂಭ್ರಮದಿಂದ ಕೂಡಿರಬೇಕೇ ಹೊರತು ಸಮಾಜದ ಸ್ವಾಸ್ಥ್ಯ ಕೆಡಿಸುವಂತೆ ಇರಬಾರದು’ ಎಂದು ಶ್ರೀನಿವಾಸಪುರ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಎಂ.ಬಿ.ಗೊರವನಕೊಳ್ಳ ಹೇಳಿದರು.</p>.<p>ಬಕ್ರೀದ್ ಹಬ್ಬದ ಪ್ರಯುಕ್ತ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಂಗಳವಾರ ನಡೆದ ಶಾಂತಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಕೆಲಸ ಕಾರ್ಯಗಳ ಬಗ್ಗೆ ಜಾಗರೂಕರಾಗಿ ಇರಬೇಕು. ಯಾವುದೇ ಕಾರಣಕ್ಕೂ ಧಾರ್ಮಿಕ ಕೆಲಸ ಕಾರ್ಯಗಳಿಗೆ ಧಕ್ಕೆ ಆಗದಂತೆ ನಡೆದುಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>‘ಸಮಾಜದಲ್ಲಿ ಶಾಂತಿ ಕದಡುವವರನ್ನು ಇಲಾಖೆ ಬಿಡುವುದಿಲ್ಲ. ಪೊಲೀಸ್ ಇಲಾಖೆ ಎಲ್ಲಾ ಸಮಾಜದೊಂದಿಗೆ ಉತ್ತಮ ಬಾಂಧವ್ಯ ಹೊಂದಿದೆ, ಒಳ್ಳೆಯ ಸಮಾಜವನ್ನು ನಿರ್ಮಾಣ ಮಾಡಲು ಸಾರ್ವಜನಿಕರು ಇಲಾಖೆಗೆ ಸಹಕಾರ ನೀಡಬೇಕು’ ಎಂದು ಮನವಿ ಮಾಡಿದರು.</p>.<p>ಪಿಎಸ್ಐ ಜಯರಾಮ್, ಸಿಬ್ಬಂದಿ ರಾಜೇಶ್, ಒಕ್ಕಲಿಗರ ಸಂಘದ ತಾಲ್ಲೂಕು ಅಧ್ಯಕ್ಷ ವೇಣುಗೋಪಾಲರೆಡ್ಡಿ, ಮುಖಂಡರಾದ ಪ್ರಭಾಕರಗೌಡ, ರಾಮಾಂಜಮ್ಮ, ಚಲ್ದಿಗಾನಹಳ್ಳಿ ಈರಪ್ಪ, ಮುನಿವೆಂಕಟಪ್ಪ, ನಾಗದೇನಹಳ್ಳಿ ಶ್ರೀನಿವಾಸ್, ಸಾಧಿಕ್ಅಹ್ಮದ್, ಮಹಬೂಬ್ ಪಾಷ, ಲಕ್ಕಿ, ಫಾರೂಕ್ಪಾಷ, ಅಬ್ದುಲ್ಲಾ, ಕಾರ್ತಿಕ್, ಹೊಗಳಗೆರೆ ಆಂಜಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಿವಾಸಪುರ:</strong> ‘ತ್ಯಾಗ ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಶಾಂತಿಯುತವಾಗಿ ಆಚರಿಸಿ ಮತ್ತೊಬ್ಬರಿಗೆ ಮಾದರಿಯಾಗಿ. ಯಾವುದೇ ಹಬ್ಬ ಸಂಭ್ರಮದಿಂದ ಕೂಡಿರಬೇಕೇ ಹೊರತು ಸಮಾಜದ ಸ್ವಾಸ್ಥ್ಯ ಕೆಡಿಸುವಂತೆ ಇರಬಾರದು’ ಎಂದು ಶ್ರೀನಿವಾಸಪುರ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಎಂ.ಬಿ.ಗೊರವನಕೊಳ್ಳ ಹೇಳಿದರು.</p>.<p>ಬಕ್ರೀದ್ ಹಬ್ಬದ ಪ್ರಯುಕ್ತ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಂಗಳವಾರ ನಡೆದ ಶಾಂತಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಕೆಲಸ ಕಾರ್ಯಗಳ ಬಗ್ಗೆ ಜಾಗರೂಕರಾಗಿ ಇರಬೇಕು. ಯಾವುದೇ ಕಾರಣಕ್ಕೂ ಧಾರ್ಮಿಕ ಕೆಲಸ ಕಾರ್ಯಗಳಿಗೆ ಧಕ್ಕೆ ಆಗದಂತೆ ನಡೆದುಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>‘ಸಮಾಜದಲ್ಲಿ ಶಾಂತಿ ಕದಡುವವರನ್ನು ಇಲಾಖೆ ಬಿಡುವುದಿಲ್ಲ. ಪೊಲೀಸ್ ಇಲಾಖೆ ಎಲ್ಲಾ ಸಮಾಜದೊಂದಿಗೆ ಉತ್ತಮ ಬಾಂಧವ್ಯ ಹೊಂದಿದೆ, ಒಳ್ಳೆಯ ಸಮಾಜವನ್ನು ನಿರ್ಮಾಣ ಮಾಡಲು ಸಾರ್ವಜನಿಕರು ಇಲಾಖೆಗೆ ಸಹಕಾರ ನೀಡಬೇಕು’ ಎಂದು ಮನವಿ ಮಾಡಿದರು.</p>.<p>ಪಿಎಸ್ಐ ಜಯರಾಮ್, ಸಿಬ್ಬಂದಿ ರಾಜೇಶ್, ಒಕ್ಕಲಿಗರ ಸಂಘದ ತಾಲ್ಲೂಕು ಅಧ್ಯಕ್ಷ ವೇಣುಗೋಪಾಲರೆಡ್ಡಿ, ಮುಖಂಡರಾದ ಪ್ರಭಾಕರಗೌಡ, ರಾಮಾಂಜಮ್ಮ, ಚಲ್ದಿಗಾನಹಳ್ಳಿ ಈರಪ್ಪ, ಮುನಿವೆಂಕಟಪ್ಪ, ನಾಗದೇನಹಳ್ಳಿ ಶ್ರೀನಿವಾಸ್, ಸಾಧಿಕ್ಅಹ್ಮದ್, ಮಹಬೂಬ್ ಪಾಷ, ಲಕ್ಕಿ, ಫಾರೂಕ್ಪಾಷ, ಅಬ್ದುಲ್ಲಾ, ಕಾರ್ತಿಕ್, ಹೊಗಳಗೆರೆ ಆಂಜಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>