ಬೆಂಗಳೂರು: ಚುನಾವಣಾ ದಿನಾಂಕ ಘೋಷಣೆಯಾಗಿರುವುದನ್ನು ಸ್ವಾಗತಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಕರ್ನಾಟಕದಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಪ್ರಚಂಡ ಬಹುಮತ ಪಡೆದು ಅಧಿಕಾರ ಕ್ಕೆ ಬರಲಿದೆ ಎಂದರು.
ಮಂಗಳವಾರ ಅಮಿತ್ ಶಾ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಸಿದ್ದರಾಮಯ್ಯ ಅಹಿಂದ ಅಲ್ಲ, ಅಹಿಂದು. ಹಿಂದೂ ವಿರೋಧಿ ಸರ್ಕಾರ ಇಲ್ಲಿದೆ. ಈ ಸರ್ಕಾರವನ್ನು ತೊಲಗಿಸಲು ಕರ್ನಾಟಕದ ಜನರು ಮತಪತ್ರ ಎಂಬ ಅಸ್ತ್ರ ಬಳಸಬೇಕಿದೆ ಎಂದು ಹೇಳಿದರು.
ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಸರ್ಕಾರ ರಚನೆಯಾಗುವುದು ಖಚಿತ ಎಂದು ಪುನರುಚ್ಚಿರಿಸಿದರು.