ದೆಹಲಿಯಿಂದ ಆಗಮಿಸಿದ್ದ ಅಧ್ಯಯನ ತಂಡದ ನೇತೃತ್ವವನ್ನು ಮಹಾರಾಷ್ಟ್ರದ ಗಾಯಕ್ವಾಡ್ ವಹಿಸಿದ್ದರು. ವಿನಾಯಕ ಘಾಡೆ ತಂಡದ ಉಪ ಮುಖ್ಯಸ್ಥರಾಗಿದ್ದರು.
ತಂಡದ ಸದಸ್ಯರು ಎರಡೂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಿಗೆ ಭೇಟಿ ನೀಡಿ ಕೃಷಿ, ತೋಟಗಾರಿಕೆ, ಹೈನುಗಾರಿಕೆ, ರೇಷ್ಮೆ ಕೃಷಿ, ಸ್ವಚ್ಛ ಭಾರತ್ ಯೋಜನೆ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿ
ಗಳ ಪ್ರಗತಿ ಪರಿಶೀಲನೆ ನಡೆಸಿ, ಕಾಮಗಾರಿಗಳ ನಿರ್ವಹಣೆ ಕುರಿತು ತೃಪ್ತಿ ವ್ಯಕ್ತಪಡಿಸಿದರು.