<p><strong>ಕೋಲಾರ:</strong> ತಾಲ್ಲೂಕಿನ ಪಾರ್ಶ್ವಗಾನಹಳ್ಳಿಯಲ್ಲಿ ಗ್ರಾಮದ ಚರಂಡಿ ನೀರು ಬಳಸಿಕೊಂಡು ರೇಷ್ಮೆ ಕೃಷಿ ಮಾಡುತ್ತಿರುವ ಪ್ರಗತಿಪರ ರೈತ ನಾರಾಯಣಪ್ಪ ಅವರ ಜಮೀನಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಚ್.ವಿ.ದರ್ಶನ್ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>‘ಗ್ರಾಮದ ಕೊಳಚೆ ನೀರು ಚರಂಡಿಯಲ್ಲಿ ಹರಿದು ಹೋಗುತ್ತಿದೆ. ಈ ಕೊಳಚೆ ನೀರು ಮನೆಯ ಸಮೀಪ ನಿಂತು ದುರ್ವಾಸನೆ ಬೀರುತ್ತಿತ್ತು. ಜತೆಗೆ ಸೊಳ್ಳೆ ಕಾಟ ಹೆಚ್ಚಿತ್ತು. ಈ ಸಮಸ್ಯೆ ಪರಿಹಾರಕ್ಕಾಗಿ ನೀರನ್ನು ನನ್ನ ಜಮೀನಿಗೆ ಪಂಪ್ ಮಾಡಿ ಹನಿ ನೀರಾವರಿ ಮೂಲಕ ಹಿಪ್ಪುನೇರಳೆ ಗಿಡಗಳಿಗೆ ಹಾಯಿಸುತ್ತಿದ್ದೇನೆ’ ಎಂದು ರೈತ ನಾರಾಯಣಪ್ಪ ಸಿಇಒಗೆ ಮಾಹಿತಿ ನೀಡಿದರು.</p>.<p>‘5 ಎಕರೆಯಲ್ಲಿನ ಹಿಪ್ಪುನೇರಳೆ ಗಿಡಗಳು ಸೊಂಪಾಗಿ ಬೆಳೆದಿವೆ. 250 ಮೊಟ್ಟೆ ಹುಳು ಮೇಯಿಸುವ ಮೂಲಕ ಆರ್ಥಿಕ ಸದೃಢತೆ ಸಾಧಿಸಿದ್ದೇನೆ. ಗ್ರಾಮದ ಚರಂಡಿ ನೀರು ನನಗೆ ವರದಾನವಾಗಿದೆ’ ಎಂದು ತಿಳಿಸಿದರು.</p>.<p>ರೈತ ನಾರಾಯಣಪ್ಪ ಅವರನ್ನು ಅಭಿನಂದಿಸಿದ ಸಿಇಒ, ‘ಚರಂಡಿಯ ತ್ಯಾಜ್ಯ ನೀರಿನ ಸಮರ್ಪಕ ಬಳಕೆ ಮುಂದುವರಿಸುವ ಜತೆಗೆ ಇತರೆ ರೈತರಿಗೂ ಮಾರ್ಗದರ್ಶನ ಮಾಡಿ’ ಎಂದು ಸಲಹೆ ನೀಡಿದರು.</p>.<p>ಪ್ರಶಸ್ತಿ ಗೌರವ: ‘ನಾರಾಯಣಪ್ಪ ತಮ್ಮ ಜಮೀನಿನಲ್ಲಿ ಕೊರೆಸಿದ್ದ 9 ಕೊಳವೆ ಬಾವಿಗಳಲ್ಲಿ ನೀರು ಬತ್ತಿತ್ತು. ಇದರಿಂದ ಸಾಲದ ಹೊರೆ ಹೆಚ್ಚಿ ಗ್ರಾಮದ ಬಸ್ ನಿಲ್ದಾಣದ ಬಳಿ ಟೀ ಹೋಟೆಲ್ ಆರಂಭಿಸಿದರು. ಆದರೂ ಛಲ ಬಿಡದೆ ಕೃಷಿ ಮುಂದುವರಿಸಿ ಬದುಕು ಕಟ್ಟಿಕೊಂಡಿದ್ದಾರೆ’ ಎಂದು ಮುದುವತ್ತಿ ಗ್ರಾ.ಪಂ ಪಿಡಿಒ ಮಹೇಶ್ಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>‘ಮರ ಕಡ್ಡಿ ಮಾದರಿಯಲ್ಲಿ ಹಿಪ್ಪುನೇರಳೆ ಬೆಳೆಯುತ್ತಿರುವ ನಾರಾಯಣಪ್ಪ ಅವರಿಗೆ ರಾಜ್ಯ ಸರ್ಕಾರವು ₹ 20 ಸಾವಿರ ಮೊತ್ತದ ಪ್ರಶಸ್ತಿ ನೀಡಿ ಪ್ರಗತಿಪರ ರೇಷ್ಮೆ ಕೃಷಿಕರೆಂದು ಗೌರವಿಸಿದೆ. ದೆಹಲಿಯಲ್ಲಿ ನಡೆದ ರಾಷ್ಟ್ರೀಯ ಕಾರ್ಯಾಗಾರದಲ್ಲೂ ನಾರಾಯಣಪ್ಪರ ಸಾಹಸಗಾಥೆ ಬಗ್ಗೆ ಚರ್ಚೆಯಾಗಿದೆ’ ಎಂದು ಮಾಹಿತಿ ನೀಡಿದರು.</p>.<p>ರೇಷ್ಮೆ ಇಲಾಖೆ ಉಪ ನಿರ್ದೇಶಕ ಪ್ರಭಾಕರ್, ತಾ.ಪಂ ಕಾರ್ಯ ನಿರ್ವಹಣಾಧಿಕಾರಿ ಬಾಬು, ಗ್ರಾಪಂ ಅಧ್ಯಕ್ಷೆ ನೀಲಮ್ಮ, ಸದಸ್ಯೆ ಸವಿತಾ, ಕಾರ್ಯದರ್ಶಿ ಕರಿಬಸಪ್ಪ, ಎಸ್ಡಿಎ ಚಿಕ್ಕಮುನಿಯಮ್ಮ, ಕರ ಸಂಗ್ರಹಗಾರ ರಾಜೇಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ತಾಲ್ಲೂಕಿನ ಪಾರ್ಶ್ವಗಾನಹಳ್ಳಿಯಲ್ಲಿ ಗ್ರಾಮದ ಚರಂಡಿ ನೀರು ಬಳಸಿಕೊಂಡು ರೇಷ್ಮೆ ಕೃಷಿ ಮಾಡುತ್ತಿರುವ ಪ್ರಗತಿಪರ ರೈತ ನಾರಾಯಣಪ್ಪ ಅವರ ಜಮೀನಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಚ್.ವಿ.ದರ್ಶನ್ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>‘ಗ್ರಾಮದ ಕೊಳಚೆ ನೀರು ಚರಂಡಿಯಲ್ಲಿ ಹರಿದು ಹೋಗುತ್ತಿದೆ. ಈ ಕೊಳಚೆ ನೀರು ಮನೆಯ ಸಮೀಪ ನಿಂತು ದುರ್ವಾಸನೆ ಬೀರುತ್ತಿತ್ತು. ಜತೆಗೆ ಸೊಳ್ಳೆ ಕಾಟ ಹೆಚ್ಚಿತ್ತು. ಈ ಸಮಸ್ಯೆ ಪರಿಹಾರಕ್ಕಾಗಿ ನೀರನ್ನು ನನ್ನ ಜಮೀನಿಗೆ ಪಂಪ್ ಮಾಡಿ ಹನಿ ನೀರಾವರಿ ಮೂಲಕ ಹಿಪ್ಪುನೇರಳೆ ಗಿಡಗಳಿಗೆ ಹಾಯಿಸುತ್ತಿದ್ದೇನೆ’ ಎಂದು ರೈತ ನಾರಾಯಣಪ್ಪ ಸಿಇಒಗೆ ಮಾಹಿತಿ ನೀಡಿದರು.</p>.<p>‘5 ಎಕರೆಯಲ್ಲಿನ ಹಿಪ್ಪುನೇರಳೆ ಗಿಡಗಳು ಸೊಂಪಾಗಿ ಬೆಳೆದಿವೆ. 250 ಮೊಟ್ಟೆ ಹುಳು ಮೇಯಿಸುವ ಮೂಲಕ ಆರ್ಥಿಕ ಸದೃಢತೆ ಸಾಧಿಸಿದ್ದೇನೆ. ಗ್ರಾಮದ ಚರಂಡಿ ನೀರು ನನಗೆ ವರದಾನವಾಗಿದೆ’ ಎಂದು ತಿಳಿಸಿದರು.</p>.<p>ರೈತ ನಾರಾಯಣಪ್ಪ ಅವರನ್ನು ಅಭಿನಂದಿಸಿದ ಸಿಇಒ, ‘ಚರಂಡಿಯ ತ್ಯಾಜ್ಯ ನೀರಿನ ಸಮರ್ಪಕ ಬಳಕೆ ಮುಂದುವರಿಸುವ ಜತೆಗೆ ಇತರೆ ರೈತರಿಗೂ ಮಾರ್ಗದರ್ಶನ ಮಾಡಿ’ ಎಂದು ಸಲಹೆ ನೀಡಿದರು.</p>.<p>ಪ್ರಶಸ್ತಿ ಗೌರವ: ‘ನಾರಾಯಣಪ್ಪ ತಮ್ಮ ಜಮೀನಿನಲ್ಲಿ ಕೊರೆಸಿದ್ದ 9 ಕೊಳವೆ ಬಾವಿಗಳಲ್ಲಿ ನೀರು ಬತ್ತಿತ್ತು. ಇದರಿಂದ ಸಾಲದ ಹೊರೆ ಹೆಚ್ಚಿ ಗ್ರಾಮದ ಬಸ್ ನಿಲ್ದಾಣದ ಬಳಿ ಟೀ ಹೋಟೆಲ್ ಆರಂಭಿಸಿದರು. ಆದರೂ ಛಲ ಬಿಡದೆ ಕೃಷಿ ಮುಂದುವರಿಸಿ ಬದುಕು ಕಟ್ಟಿಕೊಂಡಿದ್ದಾರೆ’ ಎಂದು ಮುದುವತ್ತಿ ಗ್ರಾ.ಪಂ ಪಿಡಿಒ ಮಹೇಶ್ಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>‘ಮರ ಕಡ್ಡಿ ಮಾದರಿಯಲ್ಲಿ ಹಿಪ್ಪುನೇರಳೆ ಬೆಳೆಯುತ್ತಿರುವ ನಾರಾಯಣಪ್ಪ ಅವರಿಗೆ ರಾಜ್ಯ ಸರ್ಕಾರವು ₹ 20 ಸಾವಿರ ಮೊತ್ತದ ಪ್ರಶಸ್ತಿ ನೀಡಿ ಪ್ರಗತಿಪರ ರೇಷ್ಮೆ ಕೃಷಿಕರೆಂದು ಗೌರವಿಸಿದೆ. ದೆಹಲಿಯಲ್ಲಿ ನಡೆದ ರಾಷ್ಟ್ರೀಯ ಕಾರ್ಯಾಗಾರದಲ್ಲೂ ನಾರಾಯಣಪ್ಪರ ಸಾಹಸಗಾಥೆ ಬಗ್ಗೆ ಚರ್ಚೆಯಾಗಿದೆ’ ಎಂದು ಮಾಹಿತಿ ನೀಡಿದರು.</p>.<p>ರೇಷ್ಮೆ ಇಲಾಖೆ ಉಪ ನಿರ್ದೇಶಕ ಪ್ರಭಾಕರ್, ತಾ.ಪಂ ಕಾರ್ಯ ನಿರ್ವಹಣಾಧಿಕಾರಿ ಬಾಬು, ಗ್ರಾಪಂ ಅಧ್ಯಕ್ಷೆ ನೀಲಮ್ಮ, ಸದಸ್ಯೆ ಸವಿತಾ, ಕಾರ್ಯದರ್ಶಿ ಕರಿಬಸಪ್ಪ, ಎಸ್ಡಿಎ ಚಿಕ್ಕಮುನಿಯಮ್ಮ, ಕರ ಸಂಗ್ರಹಗಾರ ರಾಜೇಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>