‘ರೈಲು ತಯಾರಿಕ ಘಟಕ ಸ್ಥಾಪನೆಗೆ ಒತ್ತಾಯಿಸಿ ಹೋರಾಟಕ್ಕೆ ಮುಂದಾಗಿರುವ ಮಾಜಿ ಸಂಸದ ಕೆ.ಎಚ್.ಮುನಿಯಪ್ಪವರಿಗೆ ನಾನು ಬೆಂಬಲ ನೀಡುತ್ತೆನೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದ ನಾಯಕರಾದ ಕೆ.ಎಚ್.ಮುನಿಯಪ್ಪ, ರಮೇಶ್ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಹೀಗಾಗಿ ನಾನು ಅದಕ್ಕೆ ಪ್ರತಿಕ್ರಿಯಿಸುವ ಅಗತ್ಯವಿಲ್ಲ, ಅವರ ಹೇಳಿಕೆಗೆ ಸಂಪೂರ್ಣ ಸಹಮತ ಇದೆ’ ಎಂದು ತಿಳಿಸಿದರು.