<p><strong>ಬಂಗಾರಪೇಟೆ</strong>: ತಾಲ್ಲೂಕಿನ ಚಿಗರಲೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶೌಚಾಲಯ ಮತ್ತು ಕಾಂಪೌಂಡ್ ನಿರ್ಮಾಣ ಅರ್ಧಕ್ಕೆ ನಿಂತಿದ್ದು, ನಿತ್ಯ ಮಕ್ಕಳು ಬಯಲು ಶೌಚಕ್ಕೆ ಹೋಗುವಂತಾಗಿದೆ.</p>.<p>ಶೌಚಾಲಯ ನಿರ್ಮಾಣಕ್ಕೆ ಹಲವು ಬಾರಿ ಗ್ರಾಮ ಪಂಚಾಯಿತಿಗೆ ಮನವಿ ಸಲ್ಲಿಸಿದ ಮೇರೆಗೆ ನರೇಗಾ ಯೋಜನೆಯಡಿ ₹4.3 ಲಕ್ಷ ವೆಚ್ಚದಲ್ಲಿ ಶೌಚಾಲಯ ಹಾಗೂ ₹3 ಲಕ್ಷ ವೆಚ್ಚದಲ್ಲಿ ಕಾಂಪೌಂಡ್ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಯಿತು. ಆದರೆ, ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಕಾಮಗಾರಿ ಅರ್ಧಕ್ಕೆ ನಿಂತಿದ್ದು, ವಿದ್ಯಾರ್ಥಿಗಳು ಬಯಲು ಶೌಚಕ್ಕೆ ಹೋಗಬೇಕಾಗಿದೆ. ಹಾಗಾಗಿ ಶೀಘ್ರ ಶೌಚಾಲಯ ಕಾಮಗಾರಿಯನ್ನು ಪೂರ್ಣಗೊಳಿಸಬೇಕೆಂದು ಗ್ರಾಮಸ್ಥರು, ಶಿಕ್ಷಕರು ಒತ್ತಾಯಿಸಿದ್ದಾರೆ.</p>.<p>ಬಹಿರ್ದೆಸೆ ಮುಕ್ತಗೊಳಿಸಲು ಮೂರು ವರ್ಷದ ಹಿಂದೆ ಶೌಚಾಲಯ ನಿರ್ಮಾಣಕ್ಕೆ ಚಾಲನೆ ನೀಡಲಾಯಿತು. ಆದರೆ, ಇನ್ನೂ ಕಾಮಗಾರಿ ಪೂರ್ಣಗೊಂಡಿಲ್ಲ. ಹಾಗಾಗಿ ವಿದ್ಯಾರ್ಥಿಗಳು ಮುಜುಗರ ಪಡುವಂತಾಗಿದೆ.</p>.<p>ಅರ್ಧಕ್ಕೆ ನಿಂತಿರುವ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಗ್ರಾಮ ಪಂಚಾಯಿತಿ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ಆದರೆ ಕಾಮಗಾರಿಗೆ ಮಂಜೂರಾಗಿರುವ ಅನುದಾನ ಮಾತ್ರ ಪಡೆಯಲಾಗಿದೆ ಎಂಬ ಆರೋಪ ಕೇಳಿ ಬರುತ್ತಿದೆ.</p>.<p>ಶಾಲೆಯ ಕಾಂಪೌಂಡ್ ಮತ್ತು ಶೌಚಾಲಯ ನಿರ್ಮಾಣ ಕಾಮಗಾರಿ ಬೇಗ ಪೂರ್ಣಗೊಳಿಸುತ್ತೇವೆ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭವ್ಯ ಸಂತೋಷ್ ಭರವಸೆ ನೀಡಿದರು.</p>.<div><blockquote>ತಾಲ್ಲೂಕಿನಾದ್ಯಂತ ಶೌಚಾಲಯ ಮತ್ತು ಇತರೆ ಕಾಮಗಾರಿಗಳು ಅರ್ಧಕ್ಕೆ ಸ್ಥಗಿತವಾಗಿರುವುದನ್ನು ಶೀಘ್ರ ಪೂರ್ಣಗೊಳಿಸಲು ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಮಾಡುತ್ತೇನೆ.</blockquote><span class="attribution">– ಜಿ.ಗುರುಮೂರ್ತಿ, ಕ್ಷೇತ್ರ ಶಿಕ್ಷಣಾಧಿಕಾರಿ ಬಂಗಾರಪೇಟೆ</span></div>.<div><blockquote>ಕಾಂಪೌಂಡ್ ಮತ್ತು ಶೌಚಾಲಯ ನಿರ್ಮಾಣ ಕಾಮಗಾರಿ ಸ್ಥಗಿತಗೊಂಡಿದ್ದು ವಿಷ ಜಂತುಗಳ ಆವಾಸ ತಾಣವಾಗಿದೆ. ಮಕ್ಕಳ ಹಿತದೃಷ್ಟಿಯಿಂದ ಶೀಘ್ರ ಕಾಮಗಾರಿ ಪೂರ್ಣಗೊಳಿಸಿ.</blockquote><span class="attribution">– ಮಲ್ಲಪ್ಪ, ಪೋಷಕರು</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಂಗಾರಪೇಟೆ</strong>: ತಾಲ್ಲೂಕಿನ ಚಿಗರಲೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶೌಚಾಲಯ ಮತ್ತು ಕಾಂಪೌಂಡ್ ನಿರ್ಮಾಣ ಅರ್ಧಕ್ಕೆ ನಿಂತಿದ್ದು, ನಿತ್ಯ ಮಕ್ಕಳು ಬಯಲು ಶೌಚಕ್ಕೆ ಹೋಗುವಂತಾಗಿದೆ.</p>.<p>ಶೌಚಾಲಯ ನಿರ್ಮಾಣಕ್ಕೆ ಹಲವು ಬಾರಿ ಗ್ರಾಮ ಪಂಚಾಯಿತಿಗೆ ಮನವಿ ಸಲ್ಲಿಸಿದ ಮೇರೆಗೆ ನರೇಗಾ ಯೋಜನೆಯಡಿ ₹4.3 ಲಕ್ಷ ವೆಚ್ಚದಲ್ಲಿ ಶೌಚಾಲಯ ಹಾಗೂ ₹3 ಲಕ್ಷ ವೆಚ್ಚದಲ್ಲಿ ಕಾಂಪೌಂಡ್ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಯಿತು. ಆದರೆ, ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಕಾಮಗಾರಿ ಅರ್ಧಕ್ಕೆ ನಿಂತಿದ್ದು, ವಿದ್ಯಾರ್ಥಿಗಳು ಬಯಲು ಶೌಚಕ್ಕೆ ಹೋಗಬೇಕಾಗಿದೆ. ಹಾಗಾಗಿ ಶೀಘ್ರ ಶೌಚಾಲಯ ಕಾಮಗಾರಿಯನ್ನು ಪೂರ್ಣಗೊಳಿಸಬೇಕೆಂದು ಗ್ರಾಮಸ್ಥರು, ಶಿಕ್ಷಕರು ಒತ್ತಾಯಿಸಿದ್ದಾರೆ.</p>.<p>ಬಹಿರ್ದೆಸೆ ಮುಕ್ತಗೊಳಿಸಲು ಮೂರು ವರ್ಷದ ಹಿಂದೆ ಶೌಚಾಲಯ ನಿರ್ಮಾಣಕ್ಕೆ ಚಾಲನೆ ನೀಡಲಾಯಿತು. ಆದರೆ, ಇನ್ನೂ ಕಾಮಗಾರಿ ಪೂರ್ಣಗೊಂಡಿಲ್ಲ. ಹಾಗಾಗಿ ವಿದ್ಯಾರ್ಥಿಗಳು ಮುಜುಗರ ಪಡುವಂತಾಗಿದೆ.</p>.<p>ಅರ್ಧಕ್ಕೆ ನಿಂತಿರುವ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಗ್ರಾಮ ಪಂಚಾಯಿತಿ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ಆದರೆ ಕಾಮಗಾರಿಗೆ ಮಂಜೂರಾಗಿರುವ ಅನುದಾನ ಮಾತ್ರ ಪಡೆಯಲಾಗಿದೆ ಎಂಬ ಆರೋಪ ಕೇಳಿ ಬರುತ್ತಿದೆ.</p>.<p>ಶಾಲೆಯ ಕಾಂಪೌಂಡ್ ಮತ್ತು ಶೌಚಾಲಯ ನಿರ್ಮಾಣ ಕಾಮಗಾರಿ ಬೇಗ ಪೂರ್ಣಗೊಳಿಸುತ್ತೇವೆ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭವ್ಯ ಸಂತೋಷ್ ಭರವಸೆ ನೀಡಿದರು.</p>.<div><blockquote>ತಾಲ್ಲೂಕಿನಾದ್ಯಂತ ಶೌಚಾಲಯ ಮತ್ತು ಇತರೆ ಕಾಮಗಾರಿಗಳು ಅರ್ಧಕ್ಕೆ ಸ್ಥಗಿತವಾಗಿರುವುದನ್ನು ಶೀಘ್ರ ಪೂರ್ಣಗೊಳಿಸಲು ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಮಾಡುತ್ತೇನೆ.</blockquote><span class="attribution">– ಜಿ.ಗುರುಮೂರ್ತಿ, ಕ್ಷೇತ್ರ ಶಿಕ್ಷಣಾಧಿಕಾರಿ ಬಂಗಾರಪೇಟೆ</span></div>.<div><blockquote>ಕಾಂಪೌಂಡ್ ಮತ್ತು ಶೌಚಾಲಯ ನಿರ್ಮಾಣ ಕಾಮಗಾರಿ ಸ್ಥಗಿತಗೊಂಡಿದ್ದು ವಿಷ ಜಂತುಗಳ ಆವಾಸ ತಾಣವಾಗಿದೆ. ಮಕ್ಕಳ ಹಿತದೃಷ್ಟಿಯಿಂದ ಶೀಘ್ರ ಕಾಮಗಾರಿ ಪೂರ್ಣಗೊಳಿಸಿ.</blockquote><span class="attribution">– ಮಲ್ಲಪ್ಪ, ಪೋಷಕರು</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>