<p><strong>ಮಾಲೂರು</strong>: ವೈಕುಂಠ ಏಕಾದಾಶಿಗೆ ಕೋಲಾರ ಜಿಲ್ಲೆಯ ಪ್ರಸಿದ್ದ ಯಾತ್ರಾಸ್ಥಳವಾದ ಚಿಕ್ಕಕತಿರುಪತಿಯ ಪ್ರಸನ್ನ ವೆಂಕಟರಮಣಸ್ವಾಮಿ ದೇವಾಲಯ ಸಜ್ಜಾಗಿದೆ.</p>.<p>ಮಂಗಳವಾರ ವೈಕುಂಠ ಏಕಾದಶಿಯಲ್ಲಿ ಒಂದು ಲಕ್ಷಕ್ಕೂ ಹೆಚ್ಚಿನ ಭಕ್ತರು ಭಾಗವಹಿಸುವ ನಿರೀಕ್ಷೆ ಇದ್ದು, ಅಂತಿಮ ಸಿದ್ಧತೆಗಳು ಭರದಿಂದ ಸಾಗಿವೆ. </p>.<p>ದೇವಾಲಯದ ಕಾರ್ಯ ನಿರ್ವಹಣಾಧಿಕಾರಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಗೋಪಾಲ್ ಹಾಗೂ ಸದಸ್ಯರು ಭಕ್ತರ ಸುಗಮ ದರ್ಶನಕ್ಕೆ ವ್ಯವಸ್ಥೆ ಹಾಗೂ ಮೂಲಸೌಕರ್ಯಗಳಿಗೆ ಸಕಲ ಸಿದ್ಧತೆ ಕೈಗೊಂಡಿದ್ದಾರೆ.</p>.<p>ವೈಕುಂಠ ಏಕಾದಶಿ ವೆಂಕಟೇಶ್ವರನಿಗೆ ಅತ್ಯಂತ ಪ್ರಿಯವಾದ ದಿನ. ಈ ದಿನ ವೆಂಕಟೇಶ್ವರನಿಗೆ ತಿರುಮಂಜನ, ವಜ್ರ ಹಾಗೂ ಚಿನ್ನಾಭರಣಗಳಿಂದ ಅಲಂಕಾರ ಮಾಡಲಾಗುತ್ತದೆ. ತೋಮಾಲ ಸೇವೆ, ಧರ್ನುಮಾಸ ಆರಾಧನೆ ಬಳಿಕ ಉತ್ಸವ ಮೂರ್ತಿಯ ಮೆರವಣಿಗೆ ನಡೆಯುತ್ತದೆ.</p>.<p>ವೈಕುಂಠ ಏಕಾದಶಿಯಂದು ವೈಕುಂಠ ದ್ವಾರದಲ್ಲಿ ಭಕ್ತರಿಗೆ ದರ್ಶನ ಪ್ರಾಪ್ತಿಯಾಗುತ್ತದೆ ಎಂಬ ಐತಿಹ್ಯವಿದೆ. ಹಾಗಾಗಿ ಉತ್ಸವದ ಬಳಿಕ ಮೂರ್ತಿಯನ್ನು ದೇವಾಲಯಕ್ಕೆ ಕರೆತಂದು ವೈಕುಂಠ ದ್ವಾರದಲ್ಲಿ ಪ್ರತಿಷ್ಠಾಪಿಸಿ ಭಕ್ತರಿಗೆ ದರ್ಶನ ನೀಡಲಾಗುತ್ತದೆ. </p>.<div><blockquote>ವೈಕುಂಠ ಏಕಾದಶಿ ಅಂಗವಾಗಿ ಚಿಕ್ಕತಿರುಪತಿಯ ವೆಂಕಟರಮಣ ದೇವಾಲಯಕ್ಕೆ ಬರುವ ಭಕ್ತರಿಗೆ ಪೆಂಡಾಲ್ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ </blockquote><span class="attribution"> ಆಲಾಂಬಾಡಿ ಎಂ.ಗೋಪಾಲ್ಅಧ್ಯಕ್ಷ ದೇವಸ್ಥಾನ ಸಮಿತಿ </span></div>.<p>ಅತಿ ಹೆಚ್ಚು ಆದಾಯಧಾರ್ಮಿಕ ದತ್ತಿ ಇಲಾಖೆ ಅಧೀನದಲ್ಲಿರುವ ಈ ದೇವಾಲಯಕ್ಕೆ ಸಾವಿರಾರು ವರ್ಷಗಳ ಇತಿಹಾಸ ಇದೆ. ಯುಗಾದಿ ಶ್ರಾವಣ ನವರಾತ್ರಿ ಮತ್ತು ವೈಕುಂಠ ಏಕಾದಶಿಯಂತಹ ವಿಶೇಷ ದಿನಗಳಲ್ಲಿ ವಿಶೇಷ ಪೂಜಾ ಕೈಂಕರ್ಯ ನೆರವೇರಿಸಲಾಗುತ್ತಿದೆ. ಪ್ರಸನ್ನ ವೆಂಕಟರಮಣ ಸ್ವಾಮಿ ರಥೋತ್ಸವ ಅದ್ದೂರಿಯಾಗಿ ನೆರವೇರುತ್ತದೆ. ಸಾವಿರಾರು ಭಕ್ತರು ಹರಕೆ ಸಲ್ಲಿಸುತ್ತಾರೆ. ದೇವಾಲಯದ ವಾರ್ಷಿಕ ಆದಾಯ ₹9 ಕೋಟಿ ದಾಟಿದ್ದು ಜಿಲ್ಲೆಯಲ್ಲಿ ಅತೀ ಹೆಚ್ಚು ಆದಾಯ ಹೊಂದಿರುವ ದೇವಾಲಯ ಎಂಬ ಹೆಗ್ಗಳಿಕೆ ಹೊಂದಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಲೂರು</strong>: ವೈಕುಂಠ ಏಕಾದಾಶಿಗೆ ಕೋಲಾರ ಜಿಲ್ಲೆಯ ಪ್ರಸಿದ್ದ ಯಾತ್ರಾಸ್ಥಳವಾದ ಚಿಕ್ಕಕತಿರುಪತಿಯ ಪ್ರಸನ್ನ ವೆಂಕಟರಮಣಸ್ವಾಮಿ ದೇವಾಲಯ ಸಜ್ಜಾಗಿದೆ.</p>.<p>ಮಂಗಳವಾರ ವೈಕುಂಠ ಏಕಾದಶಿಯಲ್ಲಿ ಒಂದು ಲಕ್ಷಕ್ಕೂ ಹೆಚ್ಚಿನ ಭಕ್ತರು ಭಾಗವಹಿಸುವ ನಿರೀಕ್ಷೆ ಇದ್ದು, ಅಂತಿಮ ಸಿದ್ಧತೆಗಳು ಭರದಿಂದ ಸಾಗಿವೆ. </p>.<p>ದೇವಾಲಯದ ಕಾರ್ಯ ನಿರ್ವಹಣಾಧಿಕಾರಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಗೋಪಾಲ್ ಹಾಗೂ ಸದಸ್ಯರು ಭಕ್ತರ ಸುಗಮ ದರ್ಶನಕ್ಕೆ ವ್ಯವಸ್ಥೆ ಹಾಗೂ ಮೂಲಸೌಕರ್ಯಗಳಿಗೆ ಸಕಲ ಸಿದ್ಧತೆ ಕೈಗೊಂಡಿದ್ದಾರೆ.</p>.<p>ವೈಕುಂಠ ಏಕಾದಶಿ ವೆಂಕಟೇಶ್ವರನಿಗೆ ಅತ್ಯಂತ ಪ್ರಿಯವಾದ ದಿನ. ಈ ದಿನ ವೆಂಕಟೇಶ್ವರನಿಗೆ ತಿರುಮಂಜನ, ವಜ್ರ ಹಾಗೂ ಚಿನ್ನಾಭರಣಗಳಿಂದ ಅಲಂಕಾರ ಮಾಡಲಾಗುತ್ತದೆ. ತೋಮಾಲ ಸೇವೆ, ಧರ್ನುಮಾಸ ಆರಾಧನೆ ಬಳಿಕ ಉತ್ಸವ ಮೂರ್ತಿಯ ಮೆರವಣಿಗೆ ನಡೆಯುತ್ತದೆ.</p>.<p>ವೈಕುಂಠ ಏಕಾದಶಿಯಂದು ವೈಕುಂಠ ದ್ವಾರದಲ್ಲಿ ಭಕ್ತರಿಗೆ ದರ್ಶನ ಪ್ರಾಪ್ತಿಯಾಗುತ್ತದೆ ಎಂಬ ಐತಿಹ್ಯವಿದೆ. ಹಾಗಾಗಿ ಉತ್ಸವದ ಬಳಿಕ ಮೂರ್ತಿಯನ್ನು ದೇವಾಲಯಕ್ಕೆ ಕರೆತಂದು ವೈಕುಂಠ ದ್ವಾರದಲ್ಲಿ ಪ್ರತಿಷ್ಠಾಪಿಸಿ ಭಕ್ತರಿಗೆ ದರ್ಶನ ನೀಡಲಾಗುತ್ತದೆ. </p>.<div><blockquote>ವೈಕುಂಠ ಏಕಾದಶಿ ಅಂಗವಾಗಿ ಚಿಕ್ಕತಿರುಪತಿಯ ವೆಂಕಟರಮಣ ದೇವಾಲಯಕ್ಕೆ ಬರುವ ಭಕ್ತರಿಗೆ ಪೆಂಡಾಲ್ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ </blockquote><span class="attribution"> ಆಲಾಂಬಾಡಿ ಎಂ.ಗೋಪಾಲ್ಅಧ್ಯಕ್ಷ ದೇವಸ್ಥಾನ ಸಮಿತಿ </span></div>.<p>ಅತಿ ಹೆಚ್ಚು ಆದಾಯಧಾರ್ಮಿಕ ದತ್ತಿ ಇಲಾಖೆ ಅಧೀನದಲ್ಲಿರುವ ಈ ದೇವಾಲಯಕ್ಕೆ ಸಾವಿರಾರು ವರ್ಷಗಳ ಇತಿಹಾಸ ಇದೆ. ಯುಗಾದಿ ಶ್ರಾವಣ ನವರಾತ್ರಿ ಮತ್ತು ವೈಕುಂಠ ಏಕಾದಶಿಯಂತಹ ವಿಶೇಷ ದಿನಗಳಲ್ಲಿ ವಿಶೇಷ ಪೂಜಾ ಕೈಂಕರ್ಯ ನೆರವೇರಿಸಲಾಗುತ್ತಿದೆ. ಪ್ರಸನ್ನ ವೆಂಕಟರಮಣ ಸ್ವಾಮಿ ರಥೋತ್ಸವ ಅದ್ದೂರಿಯಾಗಿ ನೆರವೇರುತ್ತದೆ. ಸಾವಿರಾರು ಭಕ್ತರು ಹರಕೆ ಸಲ್ಲಿಸುತ್ತಾರೆ. ದೇವಾಲಯದ ವಾರ್ಷಿಕ ಆದಾಯ ₹9 ಕೋಟಿ ದಾಟಿದ್ದು ಜಿಲ್ಲೆಯಲ್ಲಿ ಅತೀ ಹೆಚ್ಚು ಆದಾಯ ಹೊಂದಿರುವ ದೇವಾಲಯ ಎಂಬ ಹೆಗ್ಗಳಿಕೆ ಹೊಂದಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>