<p><strong>ಮುಳಬಾಗಿಲು:</strong> ತಾಲ್ಲೂಕಿನ ಮೋತಕಪಲ್ಲಿ ಗ್ರಾಮ ಪಂಚಾಯಿತಿಯಲ್ಲಿ ಬುಧವಾರ ಮಕ್ಕಳ ಗ್ರಾಮಸಭೆ ಹಮ್ಮಿಕೊಳ್ಳಲಾಯಿತು. </p>.<p>ಮಕ್ಕಳ ಗ್ರಾಮಸಭೆ ಉದ್ದೇಶಿಸಿ ಮಾತನಾಡಿ, ‘ಪಂಚಾಯಿತಿ ವ್ಯಾಪ್ತಿಯ ಎಲ್ಲ ಶಾಲೆಗಳ ಮೂಲಭೂತ ಸೌಕರ್ಯಗಳಿಗೆ ಮೊದಲ ಆದ್ಯತೆ ನೀಡಲಾಗುವುದು’ ಎಂದು ಹೇಳಿದರು. </p>.<p>ಸರ್ಕಾರದ ವಿವಿಧ ಯೋಜನೆ ಅಡಿ ಶಾಲೆಗಳನ್ನು ಅಭಿವೃದ್ಧಿಪಡಿಸುವ ಅವಕಾಶ ಇದೆ. ಆದ್ದರಿಂದ ಆಯಾ ಶಾಲಾ ಶಿಕ್ಷಕರು ಶಾಲೆಯಲ್ಲಿನ ಸಮಸ್ಯೆ ಹಾಗೂ ಕುಂದುಕೊರತೆಗಳನ್ನು ಮುಕ್ತವಾಗಿ ತಿಳಿಸಿ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. </p>.<p>ಎಲ್ಲಾ ಶಾಲಾ ಮಕ್ಕಳು ಗ್ರಾಮ ಸಭೆಯಲ್ಲಿ ತಮ್ಮ ಶಾಲೆ ಮೂಲಭೂತ ಸಮಸ್ಯೆಗಳ ಬಗ್ಗೆ ಹಾಗೂ ಮಕ್ಕಳ ಹಕ್ಕು, ಕರ್ತವ್ಯ, ಕಾಯ್ದೆಗಳು, ಘೋಷಣೆಗಳು ಮತ್ತು ಜವಾಬ್ದಾರಿಗಳು ಸೇರಿದಂತೆ ಇತರೆ ವಿಷಯಗಳ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.</p>.<p>ಮಕ್ಕಳ ಗ್ರಾಮಸಭೆಯಲ್ಲಿ ಉತ್ತಮ ಭಾಷಣ ಮಾಡಿದ ಮತ್ತು ಉತ್ತಮ ಚಟುವಟಿಕೆಗಳನ್ನು ನೀಡಿದ ಶಾಲಾ ಮಕ್ಕಳಿಗೆ ಪಂಚಾಯಿತಿಯಿಂದ ಬಹುಮಾನ ವಿತರಿಸಲಾಯಿತು.</p>.<p>ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಆಚಂಪಲ್ಲಿ ಗ್ರಾಮದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಕೆ.ಎನ್.ತಾಯಲೂರಪ್ಪ ಅವರನ್ನು ಪಂಚಾಯಿತಿ ವತಿಯಿಂದ ಸನ್ಮಾನಿಸಲಾಯಿತು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅಂಜಲಿ ವೆಂಕಟೇಶ್, ಸದಸ್ಯರಾದ ಸುರೇಶ್ ಬಾಬು, ಜಯಮ್ಮ, ರುಕ್ಮಿಣಿ ಗಿರೀಶ್, ರಂಗಪ್ಪ, ಬಾಬು, ಆನಂದ್, ಪಂಚಾಯಿತಿ ಎಲ್ಲಾ ಶಾಲೆಗಳ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ಸಿ.ಆರ್.ಪಿ ಶಿವಕುಮಾರ್ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಳಬಾಗಿಲು:</strong> ತಾಲ್ಲೂಕಿನ ಮೋತಕಪಲ್ಲಿ ಗ್ರಾಮ ಪಂಚಾಯಿತಿಯಲ್ಲಿ ಬುಧವಾರ ಮಕ್ಕಳ ಗ್ರಾಮಸಭೆ ಹಮ್ಮಿಕೊಳ್ಳಲಾಯಿತು. </p>.<p>ಮಕ್ಕಳ ಗ್ರಾಮಸಭೆ ಉದ್ದೇಶಿಸಿ ಮಾತನಾಡಿ, ‘ಪಂಚಾಯಿತಿ ವ್ಯಾಪ್ತಿಯ ಎಲ್ಲ ಶಾಲೆಗಳ ಮೂಲಭೂತ ಸೌಕರ್ಯಗಳಿಗೆ ಮೊದಲ ಆದ್ಯತೆ ನೀಡಲಾಗುವುದು’ ಎಂದು ಹೇಳಿದರು. </p>.<p>ಸರ್ಕಾರದ ವಿವಿಧ ಯೋಜನೆ ಅಡಿ ಶಾಲೆಗಳನ್ನು ಅಭಿವೃದ್ಧಿಪಡಿಸುವ ಅವಕಾಶ ಇದೆ. ಆದ್ದರಿಂದ ಆಯಾ ಶಾಲಾ ಶಿಕ್ಷಕರು ಶಾಲೆಯಲ್ಲಿನ ಸಮಸ್ಯೆ ಹಾಗೂ ಕುಂದುಕೊರತೆಗಳನ್ನು ಮುಕ್ತವಾಗಿ ತಿಳಿಸಿ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. </p>.<p>ಎಲ್ಲಾ ಶಾಲಾ ಮಕ್ಕಳು ಗ್ರಾಮ ಸಭೆಯಲ್ಲಿ ತಮ್ಮ ಶಾಲೆ ಮೂಲಭೂತ ಸಮಸ್ಯೆಗಳ ಬಗ್ಗೆ ಹಾಗೂ ಮಕ್ಕಳ ಹಕ್ಕು, ಕರ್ತವ್ಯ, ಕಾಯ್ದೆಗಳು, ಘೋಷಣೆಗಳು ಮತ್ತು ಜವಾಬ್ದಾರಿಗಳು ಸೇರಿದಂತೆ ಇತರೆ ವಿಷಯಗಳ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.</p>.<p>ಮಕ್ಕಳ ಗ್ರಾಮಸಭೆಯಲ್ಲಿ ಉತ್ತಮ ಭಾಷಣ ಮಾಡಿದ ಮತ್ತು ಉತ್ತಮ ಚಟುವಟಿಕೆಗಳನ್ನು ನೀಡಿದ ಶಾಲಾ ಮಕ್ಕಳಿಗೆ ಪಂಚಾಯಿತಿಯಿಂದ ಬಹುಮಾನ ವಿತರಿಸಲಾಯಿತು.</p>.<p>ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಆಚಂಪಲ್ಲಿ ಗ್ರಾಮದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಕೆ.ಎನ್.ತಾಯಲೂರಪ್ಪ ಅವರನ್ನು ಪಂಚಾಯಿತಿ ವತಿಯಿಂದ ಸನ್ಮಾನಿಸಲಾಯಿತು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅಂಜಲಿ ವೆಂಕಟೇಶ್, ಸದಸ್ಯರಾದ ಸುರೇಶ್ ಬಾಬು, ಜಯಮ್ಮ, ರುಕ್ಮಿಣಿ ಗಿರೀಶ್, ರಂಗಪ್ಪ, ಬಾಬು, ಆನಂದ್, ಪಂಚಾಯಿತಿ ಎಲ್ಲಾ ಶಾಲೆಗಳ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ಸಿ.ಆರ್.ಪಿ ಶಿವಕುಮಾರ್ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>