ಈ ಕುರಿತು ಮಾಹಿತಿ ಪಡೆದು ದಾಳಿ ನಡೆಸಿದ ಕೆಜಿಎಫ್ ತಾಲ್ಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ನಾಗರತ್ನ ಅವರು, ಬೇತಮಂಗಲ ಗ್ರಾಮದ ಹಳೆಯ ಬಡಾವಣೆಯ 4ನೇ ಬ್ಲಾಕ್ನಲ್ಲಿರುವ ಅಂಗಡಿ ಮತ್ತು ಗೋಡೌನ್ಗಳಲ್ಲಿದ್ದ 250ಕ್ಕೂ ಹೆಚ್ಚು ಪೌಷ್ಟಿಕ ಆಹಾರದ ಪೊಟ್ಟಣಗಳನ್ನು ವಶಕ್ಕೆ ಪಡೆದರು. ಜತೆಗೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೇತಮಂಗಲ ಪೊಲೀಸರಿಗೆ ಸೂಚಿಸಿದರು.