<p><strong>ಕೋಲಾರ:</strong> ‘ರಾಜ್ಯದ ಅಂಗನವಾಡಿ ಕೇಂದ್ರಗಳಲ್ಲಿ ಬಾಲ್ಯಾರಂಭದ ಪೋಷಣೆ ಮತ್ತು ಚಿಲಿಪಿಲಿ ಶಿಕ್ಷಣ ನೀತಿಯನ್ನು ಸರ್ಕಾರ ಕೂಡಲೇ ಜಾರಿಗೊಳಿಸಬೇಕು’ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮಾಜಿ ಅಧ್ಯಕ್ಷೆ ಕೃಪಾ ಅಮರ್ ಆಳ್ವ ಒತ್ತಾಯಿಸಿದರು.</p>.<p>ಇಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಮಕ್ಕಳಲ್ಲಿನ ಅಪೌಷ್ಟಿಕತೆ ಹೋಗಲಾಡಿಸಲು ಅಂಗನವಾಡಿ ಕೇಂದ್ರಗಳನ್ನು ಆರಂಭಿಸಲಾಗಿದೆ. ಮಕ್ಕಳ ಆರೋಗ್ಯದ ದೃಷ್ಟಿಯಿಂದ ಬಾಲ್ಯಾರಂಭದ ಪೋಷಣೆ ಅರಂಭಿಸಬೇಕು’ ಎಂದರು.</p>.<p>‘ಆರೋಗ್ಯ ಮತ್ತು ಶೈಕ್ಷಣಿಕ ಕ್ಷೇತ್ರಕ್ಕೆ ಒತ್ತು ನೀಡಿದರೆ ದೇಶದ ಅಭಿವೃದ್ಧಿಯಾಗುತ್ತದೆ. ಪೌಷ್ಟಿಕ ಆಹಾರದ ಮೇಲೆ ಮಗುವಿನ ದೈಹಿಕ, ಮಾನಸಿಕ ಆರೋಗ್ಯದ ಬೆಳವಣಿಗೆ ನಿಂತಿದೆ. ಮಗು ಹುಟ್ಟಿದ ದಿನದಿಂದ 1 ಸಾವಿರ ದಿನಗಳು ಹಾಗೂ 6 ವರ್ಷದ ಅವಧಿಯಲ್ಲಿ ಪೌಷ್ಟಿಕ ಆಹಾರ ಸಿಗದಿದ್ದರೆ ಅಪೌಷ್ಟಿಕತೆ ಉಂಟಾಗುವ ಸಾಧ್ಯತೆಯಿದೆ’ ಎಂದು ಹೇಳಿದರು.</p>.<p>‘ಶಾಲಾ ಪೂರ್ವ ಶಿಕ್ಷಣದ ಬಲವರ್ಧನೆ ಸಂಬಂಧ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಸರ್ಕಾರಗಳಿಗೆ ಸಾಕಷ್ಟು ಶಿಫಾರಸು ಮಾಡಿದ್ದರೂ ಕೆಲವೊಂದು ಮಾತ್ರ ಅನುಷ್ಠಾನಗೊಂಡಿವೆ. ಸರ್ಕಾರದ ಗಮನ ಸೆಳೆಯುವ ಉದ್ದೇಶಕ್ಕೆ ಎಲ್ಲಾ ಜಿಲ್ಲೆಗಳಲ್ಲೂ ಪತ್ರಿಕಾಗೋಷ್ಠಿ ನಡೆಸಿ ಜನರಲ್ಲಿ ಅರಿವು ಮೂಡಿಸಲಾಗುತ್ತಿದೆ’ ಎಂದು ವಿವರಿಸಿದರು.</p>.<p>‘ರಾಜ್ಯದಲ್ಲಿ ಐಸಿಡಿಎಸ್ ಕಾರ್ಯಕ್ರಮ ಸಮರ್ಪಕವಾಗಿ ಜಾರಿಗೊಳಿಸುವಲ್ಲಿ ಸರ್ಕಾರ ವಿಫಲವಾಗಿದೆ. ಅಂಗನವಾಡಿಗಳಿಗೆ ಸೂಕ್ತ ಸೌಲಭ್ಯವಿಲ್ಲ. ಕಾರ್ಯಕರ್ತೆಯರು, ಸಹಾಯಕಿಯರ ಮೇಲ್ವಿಚಾರಣೆ ನಡೆಸಬೇಕಾದ ಸಿಡಿಪಿಒ ಮತ್ತು ಡಿಸಿಪಿಒ ಹುದ್ದೆಗಳಲ್ಲಿ ಪ್ರಭಾರಿ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿರುವುದರಿಂದ ಯೋಜನೆಗಳು ಪರಿಣಾಮಕಾರಿಯಾಗಿ ಜಾರಿಯಾಗುತ್ತಿಲ್ಲ’ ಎಂದು ದೂರಿದರು.</p>.<p>ತರಬೇತಿ: ‘ಮಕ್ಕಳಲ್ಲಿ ಕಲಿಕಾಸಕ್ತಿ ಹೆಚ್ಚಿಸಲು ಚಿಲಿಪಿಲಿ ಪಠ್ಯಕ್ರಮ ಬೋಧಿಸಲು ಕಾರ್ಯಕರ್ತರು ಮುಂದಾಗಿಲ್ಲ. ಅವರಿಗೆ ಸೂಕ್ತ ತರಬೇತಿ ನೀಡಿದರೆ ಯೋಜನೆಯ ಪ್ರಯೋಜನ ಕಲ್ಪಿಸಲು ಸಹಾಯವಾಗುತ್ತದೆ’ ಎಂದು ಜನಾಂದೋಲನದ ರಾಜ್ಯ ಪ್ರಧಾನ ಕಾರ್ಯದರ್ಶಿ ವೈ.ಮರಿಸ್ವಾಮಿ ತಿಳಿಸಿದರು.</p>.<p>‘ಸಿಡಿಪಿಒ, ಎಸಿಡಿಪಿಒಗಳಿಗೆ ದಕ್ಷಿಣ ಭಾರತದ 7 ರಾಜ್ಯಗಳ ತರಬೇತಿ ಕೇಂದ್ರವಾದ ನಿಪ್ಸಿಡ್ ಮೂಲಕ ಹಾಗೂ 3 ಸಾವಿರ ಅಂಗನವಾಡಿ ಮೇಲ್ವಿಚಾರಕಿಯರಿಗೆ ಎಂಎಲ್ಟಿಸಿ ತರಬೇತಿ ಕೇಂದ್ರದ ಮೂಲಕ, ಸುಮಾರು 1.30 ಲಕ್ಷ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ರಾಜ್ಯದ 21 ತರಬೇತಿ ಕೇಂದ್ರಗಳಲ್ಲಿ 4 ದಿನಗಳ ಕಾಲ ಶಾಲಾ ಪೂರ್ವ ಶಿಕ್ಷಣದ ಬಗ್ಗೆ ತರಬೇತಿ ನೀಡಲಾಗುತ್ತದೆ’ ಎಂದು ವಿವರಿಸಿದರು.</p>.<p>‘ಲಭ್ಯವಿರುವ ಸರ್ಕಾರದ ಕಟ್ಟಡಗಳನ್ನು ಜಿಲ್ಲಾ ತರಬೇತಿ ಕೇಂದ್ರವಾಗಿಸಿ ಮತ್ತು ಮಾದರಿ ಅಂಗನವಾಡಿ ಕೇಂದ್ರಗಳನ್ನು ವೃತ್ತ ಮಟ್ಟದ ಸಂಪನ್ಮೂಲ ಕೇಂದ್ರವಾಗಿ ನೀಡಬೇಕು. 4 ತಿಂಗಳಿಗೊಮ್ಮೆ ತರಬೇತಿ ನೀಡಬೇಕು. ಅಂಗನವಾಡಿ ಕಾರ್ಯಕರ್ತೆಯರನ್ನು ಶಾಲಾ ಪೂರ್ವ ಶಿಕ್ಷಣ ಹೊರತುಪಡಿಸಿ ಇತರೆ ಯಾವುದೇ ಚಟುವಟಿಕೆಗಳಿಗೆ ನಿಯೋಜಿಸಬಾರದು. ಖಾಲಿ ಹುದ್ದೆ ಭರ್ತಿ ಮಾಡಬೇಕು’ ಎಂದು ಒತ್ತಾಯಿಸಿದರು.</p>.<p>ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಎಸ್.ಎಚ್.ಚೌಡಪ್ಪ, ಜನಾಂದೋಲನ ರಾಜ್ಯ ಸಮಿತಿ ಸದಸ್ಯೆ ಎಸ್.ಪ್ರಭಾವತಿ, ಮಾಜಿ ಅಧ್ಯಕ್ಷ ಐಪಲ್ಲಿ ನಾರಾಯಣಸ್ವಾಮಿ, ಲೋಕಮಿತ್ರ ಸಂಸ್ಥೆ ಸದಸ್ಯ ನರಸಿಂಹಮೂರ್ತಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ‘ರಾಜ್ಯದ ಅಂಗನವಾಡಿ ಕೇಂದ್ರಗಳಲ್ಲಿ ಬಾಲ್ಯಾರಂಭದ ಪೋಷಣೆ ಮತ್ತು ಚಿಲಿಪಿಲಿ ಶಿಕ್ಷಣ ನೀತಿಯನ್ನು ಸರ್ಕಾರ ಕೂಡಲೇ ಜಾರಿಗೊಳಿಸಬೇಕು’ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮಾಜಿ ಅಧ್ಯಕ್ಷೆ ಕೃಪಾ ಅಮರ್ ಆಳ್ವ ಒತ್ತಾಯಿಸಿದರು.</p>.<p>ಇಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಮಕ್ಕಳಲ್ಲಿನ ಅಪೌಷ್ಟಿಕತೆ ಹೋಗಲಾಡಿಸಲು ಅಂಗನವಾಡಿ ಕೇಂದ್ರಗಳನ್ನು ಆರಂಭಿಸಲಾಗಿದೆ. ಮಕ್ಕಳ ಆರೋಗ್ಯದ ದೃಷ್ಟಿಯಿಂದ ಬಾಲ್ಯಾರಂಭದ ಪೋಷಣೆ ಅರಂಭಿಸಬೇಕು’ ಎಂದರು.</p>.<p>‘ಆರೋಗ್ಯ ಮತ್ತು ಶೈಕ್ಷಣಿಕ ಕ್ಷೇತ್ರಕ್ಕೆ ಒತ್ತು ನೀಡಿದರೆ ದೇಶದ ಅಭಿವೃದ್ಧಿಯಾಗುತ್ತದೆ. ಪೌಷ್ಟಿಕ ಆಹಾರದ ಮೇಲೆ ಮಗುವಿನ ದೈಹಿಕ, ಮಾನಸಿಕ ಆರೋಗ್ಯದ ಬೆಳವಣಿಗೆ ನಿಂತಿದೆ. ಮಗು ಹುಟ್ಟಿದ ದಿನದಿಂದ 1 ಸಾವಿರ ದಿನಗಳು ಹಾಗೂ 6 ವರ್ಷದ ಅವಧಿಯಲ್ಲಿ ಪೌಷ್ಟಿಕ ಆಹಾರ ಸಿಗದಿದ್ದರೆ ಅಪೌಷ್ಟಿಕತೆ ಉಂಟಾಗುವ ಸಾಧ್ಯತೆಯಿದೆ’ ಎಂದು ಹೇಳಿದರು.</p>.<p>‘ಶಾಲಾ ಪೂರ್ವ ಶಿಕ್ಷಣದ ಬಲವರ್ಧನೆ ಸಂಬಂಧ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಸರ್ಕಾರಗಳಿಗೆ ಸಾಕಷ್ಟು ಶಿಫಾರಸು ಮಾಡಿದ್ದರೂ ಕೆಲವೊಂದು ಮಾತ್ರ ಅನುಷ್ಠಾನಗೊಂಡಿವೆ. ಸರ್ಕಾರದ ಗಮನ ಸೆಳೆಯುವ ಉದ್ದೇಶಕ್ಕೆ ಎಲ್ಲಾ ಜಿಲ್ಲೆಗಳಲ್ಲೂ ಪತ್ರಿಕಾಗೋಷ್ಠಿ ನಡೆಸಿ ಜನರಲ್ಲಿ ಅರಿವು ಮೂಡಿಸಲಾಗುತ್ತಿದೆ’ ಎಂದು ವಿವರಿಸಿದರು.</p>.<p>‘ರಾಜ್ಯದಲ್ಲಿ ಐಸಿಡಿಎಸ್ ಕಾರ್ಯಕ್ರಮ ಸಮರ್ಪಕವಾಗಿ ಜಾರಿಗೊಳಿಸುವಲ್ಲಿ ಸರ್ಕಾರ ವಿಫಲವಾಗಿದೆ. ಅಂಗನವಾಡಿಗಳಿಗೆ ಸೂಕ್ತ ಸೌಲಭ್ಯವಿಲ್ಲ. ಕಾರ್ಯಕರ್ತೆಯರು, ಸಹಾಯಕಿಯರ ಮೇಲ್ವಿಚಾರಣೆ ನಡೆಸಬೇಕಾದ ಸಿಡಿಪಿಒ ಮತ್ತು ಡಿಸಿಪಿಒ ಹುದ್ದೆಗಳಲ್ಲಿ ಪ್ರಭಾರಿ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿರುವುದರಿಂದ ಯೋಜನೆಗಳು ಪರಿಣಾಮಕಾರಿಯಾಗಿ ಜಾರಿಯಾಗುತ್ತಿಲ್ಲ’ ಎಂದು ದೂರಿದರು.</p>.<p>ತರಬೇತಿ: ‘ಮಕ್ಕಳಲ್ಲಿ ಕಲಿಕಾಸಕ್ತಿ ಹೆಚ್ಚಿಸಲು ಚಿಲಿಪಿಲಿ ಪಠ್ಯಕ್ರಮ ಬೋಧಿಸಲು ಕಾರ್ಯಕರ್ತರು ಮುಂದಾಗಿಲ್ಲ. ಅವರಿಗೆ ಸೂಕ್ತ ತರಬೇತಿ ನೀಡಿದರೆ ಯೋಜನೆಯ ಪ್ರಯೋಜನ ಕಲ್ಪಿಸಲು ಸಹಾಯವಾಗುತ್ತದೆ’ ಎಂದು ಜನಾಂದೋಲನದ ರಾಜ್ಯ ಪ್ರಧಾನ ಕಾರ್ಯದರ್ಶಿ ವೈ.ಮರಿಸ್ವಾಮಿ ತಿಳಿಸಿದರು.</p>.<p>‘ಸಿಡಿಪಿಒ, ಎಸಿಡಿಪಿಒಗಳಿಗೆ ದಕ್ಷಿಣ ಭಾರತದ 7 ರಾಜ್ಯಗಳ ತರಬೇತಿ ಕೇಂದ್ರವಾದ ನಿಪ್ಸಿಡ್ ಮೂಲಕ ಹಾಗೂ 3 ಸಾವಿರ ಅಂಗನವಾಡಿ ಮೇಲ್ವಿಚಾರಕಿಯರಿಗೆ ಎಂಎಲ್ಟಿಸಿ ತರಬೇತಿ ಕೇಂದ್ರದ ಮೂಲಕ, ಸುಮಾರು 1.30 ಲಕ್ಷ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ರಾಜ್ಯದ 21 ತರಬೇತಿ ಕೇಂದ್ರಗಳಲ್ಲಿ 4 ದಿನಗಳ ಕಾಲ ಶಾಲಾ ಪೂರ್ವ ಶಿಕ್ಷಣದ ಬಗ್ಗೆ ತರಬೇತಿ ನೀಡಲಾಗುತ್ತದೆ’ ಎಂದು ವಿವರಿಸಿದರು.</p>.<p>‘ಲಭ್ಯವಿರುವ ಸರ್ಕಾರದ ಕಟ್ಟಡಗಳನ್ನು ಜಿಲ್ಲಾ ತರಬೇತಿ ಕೇಂದ್ರವಾಗಿಸಿ ಮತ್ತು ಮಾದರಿ ಅಂಗನವಾಡಿ ಕೇಂದ್ರಗಳನ್ನು ವೃತ್ತ ಮಟ್ಟದ ಸಂಪನ್ಮೂಲ ಕೇಂದ್ರವಾಗಿ ನೀಡಬೇಕು. 4 ತಿಂಗಳಿಗೊಮ್ಮೆ ತರಬೇತಿ ನೀಡಬೇಕು. ಅಂಗನವಾಡಿ ಕಾರ್ಯಕರ್ತೆಯರನ್ನು ಶಾಲಾ ಪೂರ್ವ ಶಿಕ್ಷಣ ಹೊರತುಪಡಿಸಿ ಇತರೆ ಯಾವುದೇ ಚಟುವಟಿಕೆಗಳಿಗೆ ನಿಯೋಜಿಸಬಾರದು. ಖಾಲಿ ಹುದ್ದೆ ಭರ್ತಿ ಮಾಡಬೇಕು’ ಎಂದು ಒತ್ತಾಯಿಸಿದರು.</p>.<p>ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಎಸ್.ಎಚ್.ಚೌಡಪ್ಪ, ಜನಾಂದೋಲನ ರಾಜ್ಯ ಸಮಿತಿ ಸದಸ್ಯೆ ಎಸ್.ಪ್ರಭಾವತಿ, ಮಾಜಿ ಅಧ್ಯಕ್ಷ ಐಪಲ್ಲಿ ನಾರಾಯಣಸ್ವಾಮಿ, ಲೋಕಮಿತ್ರ ಸಂಸ್ಥೆ ಸದಸ್ಯ ನರಸಿಂಹಮೂರ್ತಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>