<p>ಬಂಗಾರಪೇಟೆ: ತಾಲ್ಲೂಕಿನ ಗಡಿಗೆ ಹೊಂದಿಕೊಂಡಿರುವ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ವೆಂಕಟಗಿರಿ ಕೋಟೆಯಲ್ಲಿ ಮಂಗಳವಾರ ಮುಂಜಾನೆ ಎಬಿಎನ್ ಆಂಧ್ರ ಜ್ಯೋತಿ ವಾಹಿನಿಯ ವರದಿಗಾರ ವಿ.ಕೋಟಾದ ಜಗನ್ಮೋಹನ್ ರೆಡ್ಡಿ (45) ಹತ್ಯೆ ನಡೆದಿದೆ.</p>.<p>ಜಗನ್ಮೋಹನ್ ರೆಡ್ಡಿ ಅವರು ಮಂಗಳವಾರ ಮುಂಜಾನೆ ವಾಕಿಂಗ್ ಮಾಡುತ್ತಿದ್ದ ವೇಳೆ ದ್ವಿಚಕ್ರ ವಾಹನದಲ್ಲಿ ಬಂದ ದುಷ್ಕರ್ಮಿಗಳು ಅಡ್ಡಗಟ್ಟಿ, ಮಾರಕಾಸ್ತ್ರಗಳಿಂದ ಅಟ್ಟಾಡಿಸಿ ದಾಳಿ ನಡೆಸಿದ್ದಾರೆ. ದಾಳಿಯ ತೀವ್ರತೆಗೆ ಜಗನ್ಮೋಹನ್ ರೆಡ್ಡಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<p>ಇತ್ತೀಚೆಗಷ್ಟೇ ಜೈಲಿನಿಂದ ಬಿಡುಗಡೆಯಾದ ರೌಡಿ ಶೀಟರ್ ಒಬ್ಬನ ಮೇಲೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಆತನ ಚಲನವಲನಗಳ ಕುರಿತು ಮಾಹಿತಿ ಕಲೆ ಹಾಕಲು ವಿಶೇಷ ತಂಡ ರಚಿಸಲಾಗಿದೆ.</p>.<p>ಈ ಹತ್ಯೆಯು ಅವರು ಮಾಡಿದ ವೃತ್ತಿಪರ ವರದಿಗಳ ಹಿನ್ನೆಲೆ ನಡೆದಿದೆಯೇ ಅಥವಾ ಹಳೆಯ ವೈಯಕ್ತಿಕ ವೈಷಮ್ಯ ಕಾರಣವೇ ಎಂಬ ಬಗ್ಗೆ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಕೈಗೊಂಡಿದ್ದಾರೆ.</p>.<p>ವಿ.ಕೋಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260429-18-788437886</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಂಗಾರಪೇಟೆ: ತಾಲ್ಲೂಕಿನ ಗಡಿಗೆ ಹೊಂದಿಕೊಂಡಿರುವ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ವೆಂಕಟಗಿರಿ ಕೋಟೆಯಲ್ಲಿ ಮಂಗಳವಾರ ಮುಂಜಾನೆ ಎಬಿಎನ್ ಆಂಧ್ರ ಜ್ಯೋತಿ ವಾಹಿನಿಯ ವರದಿಗಾರ ವಿ.ಕೋಟಾದ ಜಗನ್ಮೋಹನ್ ರೆಡ್ಡಿ (45) ಹತ್ಯೆ ನಡೆದಿದೆ.</p>.<p>ಜಗನ್ಮೋಹನ್ ರೆಡ್ಡಿ ಅವರು ಮಂಗಳವಾರ ಮುಂಜಾನೆ ವಾಕಿಂಗ್ ಮಾಡುತ್ತಿದ್ದ ವೇಳೆ ದ್ವಿಚಕ್ರ ವಾಹನದಲ್ಲಿ ಬಂದ ದುಷ್ಕರ್ಮಿಗಳು ಅಡ್ಡಗಟ್ಟಿ, ಮಾರಕಾಸ್ತ್ರಗಳಿಂದ ಅಟ್ಟಾಡಿಸಿ ದಾಳಿ ನಡೆಸಿದ್ದಾರೆ. ದಾಳಿಯ ತೀವ್ರತೆಗೆ ಜಗನ್ಮೋಹನ್ ರೆಡ್ಡಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<p>ಇತ್ತೀಚೆಗಷ್ಟೇ ಜೈಲಿನಿಂದ ಬಿಡುಗಡೆಯಾದ ರೌಡಿ ಶೀಟರ್ ಒಬ್ಬನ ಮೇಲೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಆತನ ಚಲನವಲನಗಳ ಕುರಿತು ಮಾಹಿತಿ ಕಲೆ ಹಾಕಲು ವಿಶೇಷ ತಂಡ ರಚಿಸಲಾಗಿದೆ.</p>.<p>ಈ ಹತ್ಯೆಯು ಅವರು ಮಾಡಿದ ವೃತ್ತಿಪರ ವರದಿಗಳ ಹಿನ್ನೆಲೆ ನಡೆದಿದೆಯೇ ಅಥವಾ ಹಳೆಯ ವೈಯಕ್ತಿಕ ವೈಷಮ್ಯ ಕಾರಣವೇ ಎಂಬ ಬಗ್ಗೆ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಕೈಗೊಂಡಿದ್ದಾರೆ.</p>.<p>ವಿ.ಕೋಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260429-18-788437886</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>