<p><strong>ಮುಳಬಾಗಿಲು:</strong> ತಾಲ್ಲೂಕಿನ ಮಂಡಿಕಲ್ನಲ್ಲಿ ಚೌಡೇಶ್ವರಿ ದೇವಿಯ ರಥೋತ್ಸವ ಹಾಗೂ ಜಾತ್ರಾ ಮಹೋತ್ಸವ ಶನಿವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.</p>.<p>ರಥೋತ್ಸವ ಪ್ರಯುಕ್ತ ದೇವರ ಮೂರ್ತಿಗೆ ವಿಶೇಷವಾದ ಹೂಗಳಿಂದ ಅಲಂಕಾರ ಮಾಡಲಾಗಿತ್ತು. ಅಭಿಷೇಕ, ತೀರ್ಥ ಪ್ರಸಾದ ವಿನಿಯೋಗ ಕಾರ್ಯಕ್ರಮಗಳು ನಡೆದವು.</p>.<p>ಸುತ್ತಮುತ್ತಲಿನ ಗ್ರಾಮಗಳಿಂದ ಬಂದಿದ್ದ ಸಾವಿರಾರು ಭಕ್ತರು ರಥೋತ್ಸವದ ಮೇಲೆ ಬಾಳೆಹಣ್ಣು, ಹೂವು, ತುಳಸಿ, ದವನ ಹಾಗೂ ಉಪ್ಪನ್ನು ಎರಚುವ ಮೂಲಕ ಭಕ್ತರು ತಮ್ಮ ಕೋರಿಕೆ ಹಾಗೂ ಹರಿಕೆ ತೀರಿಸಿದರು.</p>.<p>ಸೇವಾಕರ್ತರು ಭಕ್ತರಿಗೆ ಪಾನಕ, ಕೋಸಂಬರಿ, ಮಜ್ಜಿಗೆ ಹಾಗೂ ಅನ್ನಸಂತರ್ಪಣೆ ಮಾಡಿದರು.</p>.<p>ಧ್ರುವ ಚಾರಿಟಬಲ್ ಟ್ರಸ್ಟ್ ವತಿಯಿಂದ ದೇವಾಲಯಕ್ಕೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು. ಕಾಂಗ್ರೆಸ್ ಪಕ್ಷದ ತಾಲ್ಲೂಕು ಕಾರ್ಯದರ್ಶಿ ಮಂಡಿಕಲ್ ಮಂಜುನಾಥ್ ಅವರಿಂದ ಅವರು ಎರಡು ಸಾವಿರ ಮಂದಿಗೆ ಮಜ್ಜಿಗೆ ಹಾಗೂ ತಂಪು ಪಾನಿಯ ವಿತರಿಸಿದರು.</p>.<p>ಕೋಲಾರ ಶಾಸಕ ಕೊತ್ತೂರು ಮಂಜುನಾಥ್, ವಿಧಾನ ಪರಿಷತ್ ಸದಸ್ಯ ಎಂ.ಎಲ್.ಅನಿಲ್ ಕುಮಾರ್, ಗ್ರಾಮ ಪಂಚಾಯತಿ ಅಧ್ಯಕ್ಷೆ ಜ್ಯೋತಿ ಮಂಜುನಾಥ್, ವಿ.ಆದಿನಾರಾಯಣ , ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ಆರ್. ಆರ್. ರಾಜೇಂದ್ರಗೌಡ, ಗುಜ್ಜನಹಳ್ಳಿ ಮಂಜುನಾಥ್, ಉಮಾಶಂಕರ್, ಮಂಡಿಕಲ್ ಜಗದೀಶ್, ಚೌಡಪ್ಪ , ರಾಜಣ್ಣ , ರವಿ, ಮಂಡಿಕಲ್ ಮಂಜುನಾಥ್, ಉತ್ತನೂರು ಸುಬ್ರಮಣಿ, ಮುನಿವೆಂಕಟಪ್ಪ, ಕೆ.ವಿ.ವೆಂಕಟರಮಣಪ್ಪ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಳಬಾಗಿಲು:</strong> ತಾಲ್ಲೂಕಿನ ಮಂಡಿಕಲ್ನಲ್ಲಿ ಚೌಡೇಶ್ವರಿ ದೇವಿಯ ರಥೋತ್ಸವ ಹಾಗೂ ಜಾತ್ರಾ ಮಹೋತ್ಸವ ಶನಿವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.</p>.<p>ರಥೋತ್ಸವ ಪ್ರಯುಕ್ತ ದೇವರ ಮೂರ್ತಿಗೆ ವಿಶೇಷವಾದ ಹೂಗಳಿಂದ ಅಲಂಕಾರ ಮಾಡಲಾಗಿತ್ತು. ಅಭಿಷೇಕ, ತೀರ್ಥ ಪ್ರಸಾದ ವಿನಿಯೋಗ ಕಾರ್ಯಕ್ರಮಗಳು ನಡೆದವು.</p>.<p>ಸುತ್ತಮುತ್ತಲಿನ ಗ್ರಾಮಗಳಿಂದ ಬಂದಿದ್ದ ಸಾವಿರಾರು ಭಕ್ತರು ರಥೋತ್ಸವದ ಮೇಲೆ ಬಾಳೆಹಣ್ಣು, ಹೂವು, ತುಳಸಿ, ದವನ ಹಾಗೂ ಉಪ್ಪನ್ನು ಎರಚುವ ಮೂಲಕ ಭಕ್ತರು ತಮ್ಮ ಕೋರಿಕೆ ಹಾಗೂ ಹರಿಕೆ ತೀರಿಸಿದರು.</p>.<p>ಸೇವಾಕರ್ತರು ಭಕ್ತರಿಗೆ ಪಾನಕ, ಕೋಸಂಬರಿ, ಮಜ್ಜಿಗೆ ಹಾಗೂ ಅನ್ನಸಂತರ್ಪಣೆ ಮಾಡಿದರು.</p>.<p>ಧ್ರುವ ಚಾರಿಟಬಲ್ ಟ್ರಸ್ಟ್ ವತಿಯಿಂದ ದೇವಾಲಯಕ್ಕೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು. ಕಾಂಗ್ರೆಸ್ ಪಕ್ಷದ ತಾಲ್ಲೂಕು ಕಾರ್ಯದರ್ಶಿ ಮಂಡಿಕಲ್ ಮಂಜುನಾಥ್ ಅವರಿಂದ ಅವರು ಎರಡು ಸಾವಿರ ಮಂದಿಗೆ ಮಜ್ಜಿಗೆ ಹಾಗೂ ತಂಪು ಪಾನಿಯ ವಿತರಿಸಿದರು.</p>.<p>ಕೋಲಾರ ಶಾಸಕ ಕೊತ್ತೂರು ಮಂಜುನಾಥ್, ವಿಧಾನ ಪರಿಷತ್ ಸದಸ್ಯ ಎಂ.ಎಲ್.ಅನಿಲ್ ಕುಮಾರ್, ಗ್ರಾಮ ಪಂಚಾಯತಿ ಅಧ್ಯಕ್ಷೆ ಜ್ಯೋತಿ ಮಂಜುನಾಥ್, ವಿ.ಆದಿನಾರಾಯಣ , ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ಆರ್. ಆರ್. ರಾಜೇಂದ್ರಗೌಡ, ಗುಜ್ಜನಹಳ್ಳಿ ಮಂಜುನಾಥ್, ಉಮಾಶಂಕರ್, ಮಂಡಿಕಲ್ ಜಗದೀಶ್, ಚೌಡಪ್ಪ , ರಾಜಣ್ಣ , ರವಿ, ಮಂಡಿಕಲ್ ಮಂಜುನಾಥ್, ಉತ್ತನೂರು ಸುಬ್ರಮಣಿ, ಮುನಿವೆಂಕಟಪ್ಪ, ಕೆ.ವಿ.ವೆಂಕಟರಮಣಪ್ಪ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>