ಶಿವಕುಮಾರ ಸ್ವಾಮೀಜಿಯವರ ನಿಧನದ ಸುದ್ದಿ ತಿಳಿದು ವೇದಿಕೆ ಕಾರ್ಯಕ್ರಮ ಮೊಟಕುಗೊಳಿಸಲಾಯಿತು. ಗಣ್ಯರು ಸಾಂಕೇತಿಕವಾಗಿ ಅಂಬಿಗರ ಚೌಡಯ್ಯರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಬೆಸ್ತ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಹಾಯಧನದ ಚೆಕ್ ವಿತರಿಸಲಾಯಿತು. ಗಣ್ಯರು ಹಾಗೂ ಸಭಿಕರು ಶಿವಕುಮಾರ ಸ್ವಾಮೀಜಿಯವರ ಸ್ಮರಣಾರ್ಥ ಮೌನಾಚರಣೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಿದರು.