ಇಲ್ಲಿ ಶನಿವಾರ ನಡೆದ ನಗರಸಭೆ ಪೌರ ಕಾರ್ಮಿಕರಿಗೆ ಕೋವಿಡ್ ಲಸಿಕೆ ನೀಡಿಕೆ ಶಿಬಿರದಲ್ಲಿ ಮಾತನಾಡಿ, ‘ಎಲ್ಲೆಡೆ ಕೋವಿಡ್ ಆತಂಕ ಹೆಚ್ಚಿದೆ. ಇಂತಹ ವಿಷಮ ಸ್ಥಿತಿಯಲ್ಲೂ ಪೌರ ಕಾರ್ಮಿಕರು ಕುಟುಂಬ ಸದಸ್ಯರಿಂದ ದೂರವಾಗಿ ಪ್ರಾಣ ಪಣಕ್ಕಿಟ್ಟು ಕೆಲಸ ಮಾಡುತ್ತಿದ್ದಾರೆ. ಅವರ ಸೇವೆಗೆ ಬೆಲೆ ಕಟ್ಟಲಾಗುವುದಿಲ್ಲ’ಎಂದು ಹೇಳಿದರು.