ಪರಿಶಿಷ್ಟರು ಹಾಗೂ ಸವರ್ಣೀಯರು ಕಲ್ಲು, ದೊಣ್ಣೆ, ಇಟ್ಟಿಗೆಯಿಂದ ಹೊಡೆದಾಡಿಕೊಂಡಿದ್ದಾರೆ. ಎರಡೂ ಗುಂಪಿನ ಹಲವರಿಗೆ ಗಾಯವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ವೇಮಗಲ್ ಪೊಲೀಸ್ ಠಾಣೆಯಲ್ಲಿ 9 ಮಂದಿ ಸರ್ವರ್ಣೀಯರ ಮೇಲೆ ದೌರ್ಜನ್ಯ ಪ್ರಕರಣ ಹಾಗೂ 11 ಮಂದಿ ಪರಿಶಿಷ್ಟರ ಮೇಲೆ ಕೊಲೆ ಯತ್ನ ಪ್ರಕರಣ ದಾಖಲಾಗಿದೆ.