<p><strong>ಕೋಲಾರ:</strong> ‘ಆಸ್ಪತ್ರೆಗಳಲ್ಲಿ ಸ್ವಚ್ಛತೆ ಇರಬೇಕು. ಸರ್ಕಾರಿ ಆಸ್ಪತ್ರೆಗಳಲ್ಲಿ ಖಾಸಗಿ ಆಸ್ಪತ್ರೆಗಳಿಗಿಂತ ಉತ್ತಮ ವ್ಯವಸ್ಥೆ ಕಾಣಬೇಕು. ಆಸ್ಪತ್ರೆಗಳಿಗೆ ಸ್ವಚ್ಛತೆಯೇ ಬಂಡವಾಳ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ನಾಗೇಶ್ ಆರೋಗ್ಯ ಇಲಾಖೆ ಸಿಬ್ಬಂದಿಗೆ ಕಿವಿಮಾತು ಹೇಳಿದರು.</p>.<p>ಇಲ್ಲಿ ಶನಿವಾರ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ, ‘ಎಸ್ಎನ್ಆರ್ ಜಿಲ್ಲಾ ಆಸ್ಪತ್ರೆಯಲ್ಲಿನ ವೈದ್ಯರು ಮತ್ತು ಸಿಬ್ಬಂದಿ ಹುದ್ದೆಗಳನ್ನು 2 ತಿಂಗಳಲ್ಲಿ ಭರ್ತಿ ಮಾಡಿ ಆಸ್ಪತ್ರೆಯನ್ನು ಮತ್ತಷ್ಟು ಅಭಿವೃದ್ಧಿಪಡಿಸುತ್ತೇವೆ’ ಎಂದು ಭರವಸೆ ನೀಡಿದರು.</p>.<p>‘ಎಸ್ಎನ್ಆರ್ ಆಸ್ಪತ್ರೆಯು 250 ಹಾಸಿಗೆ ಸಾಮರ್ಥ್ಯದಿಂದ 500 ಹಾಸಿಗೆ ಸೌಲಭ್ಯದವರೆಗೆ ಬೆಳೆದಿದೆ. ಹಾಸಿಗೆಗಳಿಗೆ ತಕ್ಕಂತೆ ವೈದ್ಯರು ಮತ್ತು ಸಿಬ್ಬಂದಿ ಇರಬೇಕು. ಆಗ ಮಾತ್ರ ಉತ್ತಮ ಸೇವೆ ಸಲ್ಲಿಸಲು ಸಾಧ್ಯ’ ಎಂದರು.</p>.<p>‘ಆರೋಗ್ಯವೇ ಭಾಗ್ಯ, ಮನುಷ್ಯನಿಗೆ ಮೊದಲು ಆರೋಗ್ಯ ಬೇಕು. ರೋಗಿಗಳ ಕಣ್ಣಿಗೆ ವೈದ್ಯರು ದೇವರಂತೆ ಕಾಣುತ್ತಾರೆ. ಜಿಲ್ಲೆಯಲ್ಲಿ ಈ ಹಿಂದೆ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕೊರತೆಯಿಂದ ಸಾಕಷ್ಟು ಮಕ್ಕಳು ಮೃತಪಟ್ಟಿವೆ. ಮುಂದೆ ಈ ರೀತಿ ಆಗಬಾರದು. ಹೊಸದಾಗಿ ನಿರ್ಮಿಸಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಆಧುನಿಕ ಸೌಲಭ್ಯಗಳಿವೆ’ ಎಂದರು.</p>.<p>ವೈದ್ಯಕೀಯ ಕಾಲೇಜು: ‘ರಾಜ್ಯದ ರಾಜಧಾನಿ ಬೆಂಗಳೂರಿನಿಂದ 60 ಕಿ.ಮೀ ದೂರದಲ್ಲಿರುವ ಕೋಲಾರಕ್ಕೆ ವೈದ್ಯಕೀಯ ಕಾಲೇಜು ಬೇಕು. ಕೋಲಾರದಿಂದ ಬೆಂಗಳೂರಿಗೆ ಹೋಗಿ ಕಲಿಯಲು ಮಕ್ಕಳಿಗೆ ತೊಂದರೆ ಆಗುತ್ತದೆ. ವೈದ್ಯಕೀಯ ಕಾಲೇಜು ಸ್ಥಾಪನೆಯಿಂದ ಜನರಿಗೆ ಮತ್ತಷ್ಟು ಸುಧಾರಿತ ಆರೋಗ್ಯ ಸೇವೆ ಸಿಗುತ್ತದೆ’ ಎಂದು ಸಂಸದ ಎಸ್.ಮುನಿಸ್ವಾಮಿ ಅಭಿಪ್ರಾಯಪಟ್ಟರು.</p>.<p>‘ಕೋಲಾರದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಮೊದಲಿನಿಂದಲೂ ಹೆಚ್ಚಿನ ಬೇಡಿಕೆಯಿತ್ತು. ಈ ಬೇಡಿಕೆ ಈಗ ಈಡೇರಿದೆ. ಆಸ್ಪತ್ರೆ ನಿರ್ಮಾಣಕ್ಕೆ ಸ್ಥಳೀಯವಾಗಿ ಸಾಕಷ್ಟು ಜನಪ್ರತಿನಿಧಿಗಳು ಶ್ರಮಿಸಿದ್ದಾರೆ. ಎಸ್ಎನ್ಆರ್ ಆಸ್ಪತ್ರೆಯಲ್ಲಿನ 5 ಹಾಸಿಗೆ ಸಾಮರ್ಥ್ಯದ ತೀವ್ರ ನಿಗಾ ಘಟಕವನ್ನು 25 ಹಾಸಿಗೆಗಳಿಗೆ ಏರಿಸಬೇಕು’ ಎಂದು ಮನವಿ ಮಾಡಿದರು.</p>.<p>ಶಾಸಕ ಕೆ.ನಂಜೇಗೌಡ, ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ, ಜಿ.ಪಂ ಉಪಾಧ್ಯಕ್ಷೆ ಯಶೋದಾ, ಸದಸ್ಯ ಎಂ.ವಿ.ಶ್ರೀನಿವಾಸ್, ಬಿ.ಎಂ.ಜಯಪ್ರಕಾಶ್, ಜಿಲ್ಲಾಧಿಕಾರಿ ಜೆ.ಮಂಜುನಾಥ್, ಜಿ.ಪಂ ಸಿಇಒ ಎಚ್.ವಿ.ದರ್ಶನ್, ತಹಶೀಲ್ದಾರ್ ಶೋಭಿತಾ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ‘ಆಸ್ಪತ್ರೆಗಳಲ್ಲಿ ಸ್ವಚ್ಛತೆ ಇರಬೇಕು. ಸರ್ಕಾರಿ ಆಸ್ಪತ್ರೆಗಳಲ್ಲಿ ಖಾಸಗಿ ಆಸ್ಪತ್ರೆಗಳಿಗಿಂತ ಉತ್ತಮ ವ್ಯವಸ್ಥೆ ಕಾಣಬೇಕು. ಆಸ್ಪತ್ರೆಗಳಿಗೆ ಸ್ವಚ್ಛತೆಯೇ ಬಂಡವಾಳ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ನಾಗೇಶ್ ಆರೋಗ್ಯ ಇಲಾಖೆ ಸಿಬ್ಬಂದಿಗೆ ಕಿವಿಮಾತು ಹೇಳಿದರು.</p>.<p>ಇಲ್ಲಿ ಶನಿವಾರ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ, ‘ಎಸ್ಎನ್ಆರ್ ಜಿಲ್ಲಾ ಆಸ್ಪತ್ರೆಯಲ್ಲಿನ ವೈದ್ಯರು ಮತ್ತು ಸಿಬ್ಬಂದಿ ಹುದ್ದೆಗಳನ್ನು 2 ತಿಂಗಳಲ್ಲಿ ಭರ್ತಿ ಮಾಡಿ ಆಸ್ಪತ್ರೆಯನ್ನು ಮತ್ತಷ್ಟು ಅಭಿವೃದ್ಧಿಪಡಿಸುತ್ತೇವೆ’ ಎಂದು ಭರವಸೆ ನೀಡಿದರು.</p>.<p>‘ಎಸ್ಎನ್ಆರ್ ಆಸ್ಪತ್ರೆಯು 250 ಹಾಸಿಗೆ ಸಾಮರ್ಥ್ಯದಿಂದ 500 ಹಾಸಿಗೆ ಸೌಲಭ್ಯದವರೆಗೆ ಬೆಳೆದಿದೆ. ಹಾಸಿಗೆಗಳಿಗೆ ತಕ್ಕಂತೆ ವೈದ್ಯರು ಮತ್ತು ಸಿಬ್ಬಂದಿ ಇರಬೇಕು. ಆಗ ಮಾತ್ರ ಉತ್ತಮ ಸೇವೆ ಸಲ್ಲಿಸಲು ಸಾಧ್ಯ’ ಎಂದರು.</p>.<p>‘ಆರೋಗ್ಯವೇ ಭಾಗ್ಯ, ಮನುಷ್ಯನಿಗೆ ಮೊದಲು ಆರೋಗ್ಯ ಬೇಕು. ರೋಗಿಗಳ ಕಣ್ಣಿಗೆ ವೈದ್ಯರು ದೇವರಂತೆ ಕಾಣುತ್ತಾರೆ. ಜಿಲ್ಲೆಯಲ್ಲಿ ಈ ಹಿಂದೆ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕೊರತೆಯಿಂದ ಸಾಕಷ್ಟು ಮಕ್ಕಳು ಮೃತಪಟ್ಟಿವೆ. ಮುಂದೆ ಈ ರೀತಿ ಆಗಬಾರದು. ಹೊಸದಾಗಿ ನಿರ್ಮಿಸಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಆಧುನಿಕ ಸೌಲಭ್ಯಗಳಿವೆ’ ಎಂದರು.</p>.<p>ವೈದ್ಯಕೀಯ ಕಾಲೇಜು: ‘ರಾಜ್ಯದ ರಾಜಧಾನಿ ಬೆಂಗಳೂರಿನಿಂದ 60 ಕಿ.ಮೀ ದೂರದಲ್ಲಿರುವ ಕೋಲಾರಕ್ಕೆ ವೈದ್ಯಕೀಯ ಕಾಲೇಜು ಬೇಕು. ಕೋಲಾರದಿಂದ ಬೆಂಗಳೂರಿಗೆ ಹೋಗಿ ಕಲಿಯಲು ಮಕ್ಕಳಿಗೆ ತೊಂದರೆ ಆಗುತ್ತದೆ. ವೈದ್ಯಕೀಯ ಕಾಲೇಜು ಸ್ಥಾಪನೆಯಿಂದ ಜನರಿಗೆ ಮತ್ತಷ್ಟು ಸುಧಾರಿತ ಆರೋಗ್ಯ ಸೇವೆ ಸಿಗುತ್ತದೆ’ ಎಂದು ಸಂಸದ ಎಸ್.ಮುನಿಸ್ವಾಮಿ ಅಭಿಪ್ರಾಯಪಟ್ಟರು.</p>.<p>‘ಕೋಲಾರದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಮೊದಲಿನಿಂದಲೂ ಹೆಚ್ಚಿನ ಬೇಡಿಕೆಯಿತ್ತು. ಈ ಬೇಡಿಕೆ ಈಗ ಈಡೇರಿದೆ. ಆಸ್ಪತ್ರೆ ನಿರ್ಮಾಣಕ್ಕೆ ಸ್ಥಳೀಯವಾಗಿ ಸಾಕಷ್ಟು ಜನಪ್ರತಿನಿಧಿಗಳು ಶ್ರಮಿಸಿದ್ದಾರೆ. ಎಸ್ಎನ್ಆರ್ ಆಸ್ಪತ್ರೆಯಲ್ಲಿನ 5 ಹಾಸಿಗೆ ಸಾಮರ್ಥ್ಯದ ತೀವ್ರ ನಿಗಾ ಘಟಕವನ್ನು 25 ಹಾಸಿಗೆಗಳಿಗೆ ಏರಿಸಬೇಕು’ ಎಂದು ಮನವಿ ಮಾಡಿದರು.</p>.<p>ಶಾಸಕ ಕೆ.ನಂಜೇಗೌಡ, ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ, ಜಿ.ಪಂ ಉಪಾಧ್ಯಕ್ಷೆ ಯಶೋದಾ, ಸದಸ್ಯ ಎಂ.ವಿ.ಶ್ರೀನಿವಾಸ್, ಬಿ.ಎಂ.ಜಯಪ್ರಕಾಶ್, ಜಿಲ್ಲಾಧಿಕಾರಿ ಜೆ.ಮಂಜುನಾಥ್, ಜಿ.ಪಂ ಸಿಇಒ ಎಚ್.ವಿ.ದರ್ಶನ್, ತಹಶೀಲ್ದಾರ್ ಶೋಭಿತಾ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>