<p><strong>ಕೋಲಾರ: </strong>ತಾಲ್ಲೂಕಿನ ಸೀಪೂರು ಗ್ರಾಮದಲ್ಲಿ ಕೆರೆಯಂಗಳದ ಒತ್ತುವರಿಯನ್ನು ಕಂದಾಯ ಇಲಾಖೆ ಅಧಿಕಾರಿಗಳು ಮಂಗಳವಾರ ಒತ್ತುವರಿ ತೆರವುಗೊಳಿಸಿದರು.</p>.<p>ಗ್ರಾಮದ ಚಂದ್ರಪ್ರಕಾಶ್ ಎಂಬುವರು ಕೆರೆ ಜಾಗ ಒತ್ತುವರಿ ಮಾಡಿಕೊಂಡು ಅನಧಿಕೃತವಾಗಿ ಕೆ.ಸಿ ವ್ಯಾಲಿ ಯೋಜನೆ ನೀರು ಬಳಕೆ ಮಾಡುತ್ತಿದ್ದರು. ಈ ಬಗ್ಗೆ ಗ್ರಾಮಸ್ಥರು ಕಂದಾಯ ಇಲಾಖೆಗೆ ದೂರು ಕೊಟ್ಟಿದ್ದರು. ಈ ದೂರು ಆಧರಿಸಿ ಮಂಗಳವಾರ ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳು ಒತ್ತುವರಿ ತೆರುವ ಮಾಡಿದರು.</p>.<p>ಚಂದ್ರಪ್ರಕಾಶ್ ಅವರು ಕೆರೆಯಂಗಳದ ಒತ್ತುವರಿಯ ಜತೆಗೆ ಪಕ್ಕದ ರಾಜಕಾಲುವೆಯಲ್ಲಿ ಹರಿದು ಹೋಗುವ ಕೆ.ಸಿ ವ್ಯಾಲಿ ನೀರನ್ನು ಕೃಷಿ ಚಟುವಟಿಕೆಗೆ ಬಳಕೆ ಮಾಡುತ್ತಿದ್ದರು. ರಾಜಕಾಲುವೆಯಿಂದ ಒತ್ತುವರಿ ಜಾಗದವರೆಗೆ ಪೈಪ್ ಅಳವಡಿಸಿ ನೀರು ಬರುವಂತೆ ವ್ಯವಸ್ಥೆ ಮಾಡಿಕೊಂಡಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದಾಗ ಚಂದ್ರಪ್ರಕಾಶ್ ಒತ್ತುವರಿ ತೆರವು ಕಾರ್ಯಾಚರಣೆಗೆ ಅಡ್ಡಿಪಡಿಸಿದರು. ಅಲ್ಲದೇ, ಅಧಿಕಾರಿಗಳೊಂದಿಗೆ ವಾಗ್ವಾದಕ್ಕಿಳಿದರು. ಇದರಿಂದ ಸ್ಥಳದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಯಿತು. ಬಳಿಕ ಗ್ರಾಮಸ್ಥರು ಚಂದ್ರಪ್ರಕಾಶ್ರ ಮನವೊಲಿಸಿ ಪರಿಸ್ಥಿತಿ ತಿಳಿಗೊಳಿಸಿದರು.</p>.<p>‘ಚಂದ್ರಪ್ರಕಾಶ್ ಒತ್ತುವರಿ ಮಾಡಿದ್ದ ಕೆರೆಯ ಜಾಗಕ್ಕೆ ನಕಲಿ ದಾಖಲೆಪತ್ರ ಸೃಷ್ಟಿಸಿಕೊಂಡಿದ್ದರು. ಇಲಾಖೆಯಲ್ಲಿ ಲಭ್ಯವಿರುವ ದಾಖಲೆಪತ್ರ ಪರಿಶೀಲಿಸಿ ಚಂದ್ರಪ್ರಕಾಶ್ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕು’ ಎಂದು ಗ್ರಾಮಸ್ಥರು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ: </strong>ತಾಲ್ಲೂಕಿನ ಸೀಪೂರು ಗ್ರಾಮದಲ್ಲಿ ಕೆರೆಯಂಗಳದ ಒತ್ತುವರಿಯನ್ನು ಕಂದಾಯ ಇಲಾಖೆ ಅಧಿಕಾರಿಗಳು ಮಂಗಳವಾರ ಒತ್ತುವರಿ ತೆರವುಗೊಳಿಸಿದರು.</p>.<p>ಗ್ರಾಮದ ಚಂದ್ರಪ್ರಕಾಶ್ ಎಂಬುವರು ಕೆರೆ ಜಾಗ ಒತ್ತುವರಿ ಮಾಡಿಕೊಂಡು ಅನಧಿಕೃತವಾಗಿ ಕೆ.ಸಿ ವ್ಯಾಲಿ ಯೋಜನೆ ನೀರು ಬಳಕೆ ಮಾಡುತ್ತಿದ್ದರು. ಈ ಬಗ್ಗೆ ಗ್ರಾಮಸ್ಥರು ಕಂದಾಯ ಇಲಾಖೆಗೆ ದೂರು ಕೊಟ್ಟಿದ್ದರು. ಈ ದೂರು ಆಧರಿಸಿ ಮಂಗಳವಾರ ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳು ಒತ್ತುವರಿ ತೆರುವ ಮಾಡಿದರು.</p>.<p>ಚಂದ್ರಪ್ರಕಾಶ್ ಅವರು ಕೆರೆಯಂಗಳದ ಒತ್ತುವರಿಯ ಜತೆಗೆ ಪಕ್ಕದ ರಾಜಕಾಲುವೆಯಲ್ಲಿ ಹರಿದು ಹೋಗುವ ಕೆ.ಸಿ ವ್ಯಾಲಿ ನೀರನ್ನು ಕೃಷಿ ಚಟುವಟಿಕೆಗೆ ಬಳಕೆ ಮಾಡುತ್ತಿದ್ದರು. ರಾಜಕಾಲುವೆಯಿಂದ ಒತ್ತುವರಿ ಜಾಗದವರೆಗೆ ಪೈಪ್ ಅಳವಡಿಸಿ ನೀರು ಬರುವಂತೆ ವ್ಯವಸ್ಥೆ ಮಾಡಿಕೊಂಡಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದಾಗ ಚಂದ್ರಪ್ರಕಾಶ್ ಒತ್ತುವರಿ ತೆರವು ಕಾರ್ಯಾಚರಣೆಗೆ ಅಡ್ಡಿಪಡಿಸಿದರು. ಅಲ್ಲದೇ, ಅಧಿಕಾರಿಗಳೊಂದಿಗೆ ವಾಗ್ವಾದಕ್ಕಿಳಿದರು. ಇದರಿಂದ ಸ್ಥಳದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಯಿತು. ಬಳಿಕ ಗ್ರಾಮಸ್ಥರು ಚಂದ್ರಪ್ರಕಾಶ್ರ ಮನವೊಲಿಸಿ ಪರಿಸ್ಥಿತಿ ತಿಳಿಗೊಳಿಸಿದರು.</p>.<p>‘ಚಂದ್ರಪ್ರಕಾಶ್ ಒತ್ತುವರಿ ಮಾಡಿದ್ದ ಕೆರೆಯ ಜಾಗಕ್ಕೆ ನಕಲಿ ದಾಖಲೆಪತ್ರ ಸೃಷ್ಟಿಸಿಕೊಂಡಿದ್ದರು. ಇಲಾಖೆಯಲ್ಲಿ ಲಭ್ಯವಿರುವ ದಾಖಲೆಪತ್ರ ಪರಿಶೀಲಿಸಿ ಚಂದ್ರಪ್ರಕಾಶ್ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕು’ ಎಂದು ಗ್ರಾಮಸ್ಥರು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>