‘ರಾಜೀನಾಮೆ ಕೊಟ್ಟಾಗ ಸಾಕಷ್ಟು ಮಂದಿ ಆಡಿಕೊಂಡರು. ನಾನು ರಾಜೀನಾಮೆ ಕೊಟ್ಟಿರುವುದು ಮಿತ್ರ ಮಂಡಳಿಯ ಸಾಕಷ್ಟು ಮಂದಿಗೆ ನೋವು ತಂದಿದೆ. ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಈಗಾಗಲೇ ಬೇಸರ ವ್ಯಕ್ತಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ನನಗೆ ಮತ್ತು ಶಾಸಕ ಮುನಿರತ್ನ ಅವರಿಗೆ ಸಚಿವ ಸ್ಥಾನ ನೀಡುವ ನಿರೀಕ್ಷೆಯಿದೆ. ಮಿತ್ರ ಮಂಡಳಿಯ ಎಲ್ಲರೂ ಒಟ್ಟಾಗಿದ್ದೇವೆ, ನಮ್ಮಲ್ಲಿ ಒಡಕಿಲ್ಲ’ ಎಂದರು.