<p><strong>ಮಾಲೂರು:</strong> ತಾಲ್ಲೂಕಿನಲ್ಲಿ ಅ.30 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸುಮಾರು ₹2,500 ಕೋಟಿ ವೆಚ್ಚದ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಲಿದ್ದಾರೆ. ಅದರಲ್ಲಿ ₹21 ಕೋಟಿ ವೆಚ್ಚದಲ್ಲಿ ಬಸ್ ನಿಲ್ದಾಣ ಕಾಮಗಾರಿಗೆ ಚಾಲನೆ ನೀಡಲಾಗುವುದು. ಹಾಗಾಗಿ ಸಿದ್ಧತೆ ನಡೆಯುತ್ತಿದೆ ಎಂದು ಶಾಸಕ ಕೆ.ವೈ.ನಂಜೇಗೌಡ ತಿಳಿಸಿದರು.</p>.<p>ನಗರದ ಬಸ್ ನಿಲ್ದಾಣಕ್ಕೆ ಗುರುವಾರ ಭೇಟಿ ನೀಡಿ ಹಳೆ ಅಂಗಡಿ ಮಳಿಗೆಗಳ ಕಟ್ಟಡ ತೆರವು ಕಾರ್ಯ ವೀಕ್ಷಿಸಿ ಮಾತನಾಡಿದರು.</p>.<p>ಮುಖ್ಯಮಂತ್ರಿಗಳು ಮಾಲೂರಿಗೆ ಬರುವ ಕಾರ್ಯಕ್ರಮ ಯಾವುದೇ ಕಾರಣಕ್ಕೂ ಮುಂದೂಡಲ್ಲ. ವಿರೋಧ ಪಕ್ಷದವರು ಏನೇ ಮಾತನಾಡಲಿ ಕಾರ್ಯಕ್ರಮ ನಡೆಯುತ್ತದೆ. ಪಕ್ಷದ ಕಾರ್ಯಕರ್ತರು ಧೈರ್ಯವಾಗಿರಿ ಎಂದರು.</p>.<p>ಇಒ ಕೃಷ್ಣಪ್ಪ, ತಹಶೀಲ್ದಾರ್ ಎಂ.ವಿ.ರೂಪ, ನಗರ ಸಭಾಧ್ಯಕ್ಷೆ ವಿಜಯಲಕ್ಷ್ಮಿ, ಸದಸ್ಯರಾದ ವೆಂಕಟೇಶ್, ಇಮ್ತಿಯಾಜ್, ಹನುಮಂತಪ್ಪ, ರತ್ನಮ್ಮ, ಕಸಾಪ ಅಧ್ಯಕ್ಷ ಹನುಮಂತಯ್ಯ, ಮುಖಂಡರಾದ ಹನುಮಂತರೆಡ್ಡಿ, ಲಕ್ಕೂರು ಬಾಬು ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.</p>.<div><blockquote>ಇಲ್ಲಿನ ವಿರೋಧ ಪಕ್ಷದವರು ಭ್ರಮೆಯಲ್ಲಿದ್ದಾರೆ. ನ್ಯಾಯಾಧೀಶರು ಮೇಲ್ಮನವಿಗೆ ಅವಕಾಶ ನೀಡಿದ್ದಾರೆ. ಅದರ ಕೆಲಸ ನಡೆಯುತ್ತಿದೆ. ತಾಲ್ಲೂಕಿನ ಅಭಿವೃದ್ಧಿ ಬಗ್ಗೆ ಗಮನ ಹರಿಸಿದ್ದೇನೆ. ಮರು ಮತ ಏಣಿಕೆಯಲ್ಲಿ ನಾನು ಸೋತರೆ ರಾಜಕೀಯ ನಿವೃತ್ತಿ ಘೋಷಿಸುತ್ತೇನೆ. </blockquote><span class="attribution">ಕೆ.ವೈ.ನಂಜೇಗೌಡ ಶಾಸಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಲೂರು:</strong> ತಾಲ್ಲೂಕಿನಲ್ಲಿ ಅ.30 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸುಮಾರು ₹2,500 ಕೋಟಿ ವೆಚ್ಚದ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಲಿದ್ದಾರೆ. ಅದರಲ್ಲಿ ₹21 ಕೋಟಿ ವೆಚ್ಚದಲ್ಲಿ ಬಸ್ ನಿಲ್ದಾಣ ಕಾಮಗಾರಿಗೆ ಚಾಲನೆ ನೀಡಲಾಗುವುದು. ಹಾಗಾಗಿ ಸಿದ್ಧತೆ ನಡೆಯುತ್ತಿದೆ ಎಂದು ಶಾಸಕ ಕೆ.ವೈ.ನಂಜೇಗೌಡ ತಿಳಿಸಿದರು.</p>.<p>ನಗರದ ಬಸ್ ನಿಲ್ದಾಣಕ್ಕೆ ಗುರುವಾರ ಭೇಟಿ ನೀಡಿ ಹಳೆ ಅಂಗಡಿ ಮಳಿಗೆಗಳ ಕಟ್ಟಡ ತೆರವು ಕಾರ್ಯ ವೀಕ್ಷಿಸಿ ಮಾತನಾಡಿದರು.</p>.<p>ಮುಖ್ಯಮಂತ್ರಿಗಳು ಮಾಲೂರಿಗೆ ಬರುವ ಕಾರ್ಯಕ್ರಮ ಯಾವುದೇ ಕಾರಣಕ್ಕೂ ಮುಂದೂಡಲ್ಲ. ವಿರೋಧ ಪಕ್ಷದವರು ಏನೇ ಮಾತನಾಡಲಿ ಕಾರ್ಯಕ್ರಮ ನಡೆಯುತ್ತದೆ. ಪಕ್ಷದ ಕಾರ್ಯಕರ್ತರು ಧೈರ್ಯವಾಗಿರಿ ಎಂದರು.</p>.<p>ಇಒ ಕೃಷ್ಣಪ್ಪ, ತಹಶೀಲ್ದಾರ್ ಎಂ.ವಿ.ರೂಪ, ನಗರ ಸಭಾಧ್ಯಕ್ಷೆ ವಿಜಯಲಕ್ಷ್ಮಿ, ಸದಸ್ಯರಾದ ವೆಂಕಟೇಶ್, ಇಮ್ತಿಯಾಜ್, ಹನುಮಂತಪ್ಪ, ರತ್ನಮ್ಮ, ಕಸಾಪ ಅಧ್ಯಕ್ಷ ಹನುಮಂತಯ್ಯ, ಮುಖಂಡರಾದ ಹನುಮಂತರೆಡ್ಡಿ, ಲಕ್ಕೂರು ಬಾಬು ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.</p>.<div><blockquote>ಇಲ್ಲಿನ ವಿರೋಧ ಪಕ್ಷದವರು ಭ್ರಮೆಯಲ್ಲಿದ್ದಾರೆ. ನ್ಯಾಯಾಧೀಶರು ಮೇಲ್ಮನವಿಗೆ ಅವಕಾಶ ನೀಡಿದ್ದಾರೆ. ಅದರ ಕೆಲಸ ನಡೆಯುತ್ತಿದೆ. ತಾಲ್ಲೂಕಿನ ಅಭಿವೃದ್ಧಿ ಬಗ್ಗೆ ಗಮನ ಹರಿಸಿದ್ದೇನೆ. ಮರು ಮತ ಏಣಿಕೆಯಲ್ಲಿ ನಾನು ಸೋತರೆ ರಾಜಕೀಯ ನಿವೃತ್ತಿ ಘೋಷಿಸುತ್ತೇನೆ. </blockquote><span class="attribution">ಕೆ.ವೈ.ನಂಜೇಗೌಡ ಶಾಸಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>