<p><strong>ಕೋಲಾರ</strong>: ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸಿಂಡಿಕೇಟ್ ಹಾಗೂ ವಿದ್ಯಾವಿಷಯಕ ಪರಿಷತ್ತಿನ ಸದಸ್ಯರನ್ನು ಒಳಗೊಂಡ ಸಮಿತಿ ಶಿಫಾರಸ್ಸಿನಂತೆ ಪತ್ರಿಕೋದ್ಯಮ ಸ್ನಾತಕೋತ್ತರ ಅಧ್ಯಯನ ವಿಭಾಗವನ್ನು ಮುಚ್ಚಲು ನಿರ್ಧರಿಸಲಾಗಿದೆ ಎಂದು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ನಿರಂಜನ ವಾನಳ್ಳಿ ಸ್ಪಷ್ಟಪಡಿಸಿದ್ದಾರೆ.</p>.<p>‘ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಮೂರು ವರ್ಷಗಳಿಂದ ವಿದ್ಯಾರ್ಥಿಗಳ ಕೊರತೆ ಎದುರಿಸುತ್ತಿದೆ. ಐವರು ಅತಿಥಿ ಉಪನ್ಯಾಸಕರಿದ್ದಾರೆ. 10ಕ್ಕಿಂತ ಕಡಿಮೆ ವಿದ್ಯಾರ್ಥಿಗಳು ಪ್ರವೇಶ ಪಡೆದು ಪರೀಕ್ಷೆ ಹೊತ್ತಿಗೆ ಅವರೂ ಗೈರಾಗುತ್ತಿರುವ ವಿಷಯ ವಿಶ್ವವಿದ್ಯಾಲಯ ಗಮನಕ್ಕೆ ಬಂದಿದ್ದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ’ ಎಂದು ಹೇಳಿದ್ದಾರೆ.</p>.<p>‘ಅಂತಿಮ ಸೆಮಿಸ್ಟರ್ನಲ್ಲಿ ಕೇವಲ ಒಬ್ಬ ವಿದ್ಯಾರ್ಥಿ ತರಗತಿಗೆ ಹಾಜರಾದರೂ ತರಗತಿ ನಡೆಸಿ ವ್ಯಾಸಂಗಕ್ಕೆ ಅವಕಾಶ ಕಲ್ಪಿಸಲಾಯಿತು. ಆದರೆ, ಇದೀಗ ವಿದ್ಯಾರ್ಥಿಗಳಿಗೆ ಬೇಕಿಲ್ಲದ ವಿಭಾಗವನ್ನು ಮುಚ್ಚುವುದು ಅನಿವಾರ್ಯವಾಗಿದೆ’ ಎಂದಿದ್ದಾರೆ.</p>.<p>‘ಕೋರ್ಸ್ ಮುಚ್ಚಲು ಏಕಪಕ್ಷೀಯ ನಿರ್ಧಾರ ತೆಗೆದುಕೊಂಡಿಲ್ಲ. ಸಮಿತಿ ರಚಿಸಿ ಅದರ ಶಿಫಾರಸ್ಸಿನಂತೆ ಈ ಶೈಕ್ಷಣಿಕ ಸಾಲಿನಲ್ಲಿ ಮುಂದುವರಿಸದಿರಲು ನಿರ್ಧಾರ ಕೈಗೊಳ್ಳಲಾಗಿದೆ. ವಿದ್ಯಾ<br>ವಿಷಯಕ ಪರಿಷತ್ ಮತ್ತು ಸಿಂಡಿಕೇಟ್ ಸಭೆಯಲ್ಲಿ ಅನುಮೋದನೆ ಕೂಡ ಪಡೆಯ<br>ಲಾಗಿದೆ. ಈ ವಿಷಯವನ್ನು ಸರ್ಕಾರದ ಗಮನಕ್ಕೂ ತರಲಾಗಿದೆ’ ಎಂದಿದ್ದಾರೆ.</p>.<p>‘ವಿಶ್ವವಿದ್ಯಾಲಯ ಸ್ವಾಯುತ್ತ ಸಂಸ್ಥೆಯಾಗಿದೆ. ಕರ್ನಾಟಕ ವಿಶ್ವವಿದ್ಯಾಲಯಗಳ ಕಾಯ್ದೆಯಡಿ 2000ರ 34 (4)ನೇ ವಿಧಿಯ ಪ್ರಕಾರ ಯಾವುದೇ ಅಧ್ಯಯನ ವಿಭಾಗವನ್ನು ರದ್ದುಪಡಿಸುವ ಹಕ್ಕು ಹೊಂದಿದೆ. ಈ ಹಿನ್ನೆಲೆಯಲ್ಲಿ ವಿಶ್ವವಿದ್ಯಾಲಯ ಪ್ರಜ್ಞಾಪೂರ್ವಕವಾಗಿಯೇ ಈ ಕ್ರಮ ಕೈಗೊಂಡಿದೆ. ನಿರಂತರವಾಗಿ ವಿದ್ಯಾರ್ಥಿಗಳ ಕೊರತೆ ಎದುರಿಸುತ್ತಿರುವ ಈ ವಿಭಾಗವನ್ನು ನಡೆಸಲು ಸಾಧ್ಯವಾಗುತ್ತಿಲ್ಲ’ ಎಂದು ಪ್ರಕಟಣೆ ಮೂಲಕ ಸಾರ್ವಜನಿಕರಿಗೆ ಮನವರಿಕೆ ಮಾಡಿದ್ದಾರೆ.</p>.<p>ಪತ್ರಿಕೋದ್ಯಮ ವಿಭಾಗ ಮುಚ್ಚಲು ವಿದ್ಯಾರ್ಥಿಗಳ ಕೊರತೆಯೇ ಕಾರಣ ಎಂದು ವಿಶ್ವವಿದ್ಯಾಲಯದ ಕುಲಸಚಿವರು ಕೂಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. </p>.<p>‘ಉತ್ತರ ವಿ.ವಿ ಪತ್ರಿಕೋದ್ಯಮ ವಿಭಾಗ ಬಂದ್’ ಎಂಬ ವಿಶೇಷ ವರದಿ ಜುಲೈ 21ರಂದು ‘ಪ್ರಜಾವಾಣಿ’<br>ಯಲ್ಲಿ ಪ್ರಕಟವಾಗಿತ್ತು. ಆ ಬಳಿಕ ಪರ ವಿರೋಧ ಚರ್ಚೆಗಳು ನಡೆದಿದ್ದವು. ಹೀಗಾಗಿ ಅವರು ಈ ಸ್ಪಷ್ಟನೆ ನೀಡಿದ್ದಾರೆ.</p>.<p>- ‘ಪ್ರಜಾವಾಣಿ’ ವರದಿ ಬಳಿಕ ಪರ ವಿರೋಧ ಚರ್ಚೆ ದಾಖಲಾತಿ ಕೊರತೆ ಮುಖ್ಯ ಕಾರಣ: ಕುಲಪತಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ</strong>: ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸಿಂಡಿಕೇಟ್ ಹಾಗೂ ವಿದ್ಯಾವಿಷಯಕ ಪರಿಷತ್ತಿನ ಸದಸ್ಯರನ್ನು ಒಳಗೊಂಡ ಸಮಿತಿ ಶಿಫಾರಸ್ಸಿನಂತೆ ಪತ್ರಿಕೋದ್ಯಮ ಸ್ನಾತಕೋತ್ತರ ಅಧ್ಯಯನ ವಿಭಾಗವನ್ನು ಮುಚ್ಚಲು ನಿರ್ಧರಿಸಲಾಗಿದೆ ಎಂದು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ನಿರಂಜನ ವಾನಳ್ಳಿ ಸ್ಪಷ್ಟಪಡಿಸಿದ್ದಾರೆ.</p>.<p>‘ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಮೂರು ವರ್ಷಗಳಿಂದ ವಿದ್ಯಾರ್ಥಿಗಳ ಕೊರತೆ ಎದುರಿಸುತ್ತಿದೆ. ಐವರು ಅತಿಥಿ ಉಪನ್ಯಾಸಕರಿದ್ದಾರೆ. 10ಕ್ಕಿಂತ ಕಡಿಮೆ ವಿದ್ಯಾರ್ಥಿಗಳು ಪ್ರವೇಶ ಪಡೆದು ಪರೀಕ್ಷೆ ಹೊತ್ತಿಗೆ ಅವರೂ ಗೈರಾಗುತ್ತಿರುವ ವಿಷಯ ವಿಶ್ವವಿದ್ಯಾಲಯ ಗಮನಕ್ಕೆ ಬಂದಿದ್ದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ’ ಎಂದು ಹೇಳಿದ್ದಾರೆ.</p>.<p>‘ಅಂತಿಮ ಸೆಮಿಸ್ಟರ್ನಲ್ಲಿ ಕೇವಲ ಒಬ್ಬ ವಿದ್ಯಾರ್ಥಿ ತರಗತಿಗೆ ಹಾಜರಾದರೂ ತರಗತಿ ನಡೆಸಿ ವ್ಯಾಸಂಗಕ್ಕೆ ಅವಕಾಶ ಕಲ್ಪಿಸಲಾಯಿತು. ಆದರೆ, ಇದೀಗ ವಿದ್ಯಾರ್ಥಿಗಳಿಗೆ ಬೇಕಿಲ್ಲದ ವಿಭಾಗವನ್ನು ಮುಚ್ಚುವುದು ಅನಿವಾರ್ಯವಾಗಿದೆ’ ಎಂದಿದ್ದಾರೆ.</p>.<p>‘ಕೋರ್ಸ್ ಮುಚ್ಚಲು ಏಕಪಕ್ಷೀಯ ನಿರ್ಧಾರ ತೆಗೆದುಕೊಂಡಿಲ್ಲ. ಸಮಿತಿ ರಚಿಸಿ ಅದರ ಶಿಫಾರಸ್ಸಿನಂತೆ ಈ ಶೈಕ್ಷಣಿಕ ಸಾಲಿನಲ್ಲಿ ಮುಂದುವರಿಸದಿರಲು ನಿರ್ಧಾರ ಕೈಗೊಳ್ಳಲಾಗಿದೆ. ವಿದ್ಯಾ<br>ವಿಷಯಕ ಪರಿಷತ್ ಮತ್ತು ಸಿಂಡಿಕೇಟ್ ಸಭೆಯಲ್ಲಿ ಅನುಮೋದನೆ ಕೂಡ ಪಡೆಯ<br>ಲಾಗಿದೆ. ಈ ವಿಷಯವನ್ನು ಸರ್ಕಾರದ ಗಮನಕ್ಕೂ ತರಲಾಗಿದೆ’ ಎಂದಿದ್ದಾರೆ.</p>.<p>‘ವಿಶ್ವವಿದ್ಯಾಲಯ ಸ್ವಾಯುತ್ತ ಸಂಸ್ಥೆಯಾಗಿದೆ. ಕರ್ನಾಟಕ ವಿಶ್ವವಿದ್ಯಾಲಯಗಳ ಕಾಯ್ದೆಯಡಿ 2000ರ 34 (4)ನೇ ವಿಧಿಯ ಪ್ರಕಾರ ಯಾವುದೇ ಅಧ್ಯಯನ ವಿಭಾಗವನ್ನು ರದ್ದುಪಡಿಸುವ ಹಕ್ಕು ಹೊಂದಿದೆ. ಈ ಹಿನ್ನೆಲೆಯಲ್ಲಿ ವಿಶ್ವವಿದ್ಯಾಲಯ ಪ್ರಜ್ಞಾಪೂರ್ವಕವಾಗಿಯೇ ಈ ಕ್ರಮ ಕೈಗೊಂಡಿದೆ. ನಿರಂತರವಾಗಿ ವಿದ್ಯಾರ್ಥಿಗಳ ಕೊರತೆ ಎದುರಿಸುತ್ತಿರುವ ಈ ವಿಭಾಗವನ್ನು ನಡೆಸಲು ಸಾಧ್ಯವಾಗುತ್ತಿಲ್ಲ’ ಎಂದು ಪ್ರಕಟಣೆ ಮೂಲಕ ಸಾರ್ವಜನಿಕರಿಗೆ ಮನವರಿಕೆ ಮಾಡಿದ್ದಾರೆ.</p>.<p>ಪತ್ರಿಕೋದ್ಯಮ ವಿಭಾಗ ಮುಚ್ಚಲು ವಿದ್ಯಾರ್ಥಿಗಳ ಕೊರತೆಯೇ ಕಾರಣ ಎಂದು ವಿಶ್ವವಿದ್ಯಾಲಯದ ಕುಲಸಚಿವರು ಕೂಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. </p>.<p>‘ಉತ್ತರ ವಿ.ವಿ ಪತ್ರಿಕೋದ್ಯಮ ವಿಭಾಗ ಬಂದ್’ ಎಂಬ ವಿಶೇಷ ವರದಿ ಜುಲೈ 21ರಂದು ‘ಪ್ರಜಾವಾಣಿ’<br>ಯಲ್ಲಿ ಪ್ರಕಟವಾಗಿತ್ತು. ಆ ಬಳಿಕ ಪರ ವಿರೋಧ ಚರ್ಚೆಗಳು ನಡೆದಿದ್ದವು. ಹೀಗಾಗಿ ಅವರು ಈ ಸ್ಪಷ್ಟನೆ ನೀಡಿದ್ದಾರೆ.</p>.<p>- ‘ಪ್ರಜಾವಾಣಿ’ ವರದಿ ಬಳಿಕ ಪರ ವಿರೋಧ ಚರ್ಚೆ ದಾಖಲಾತಿ ಕೊರತೆ ಮುಖ್ಯ ಕಾರಣ: ಕುಲಪತಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>