<p><strong>ಕೆಜಿಎಫ್</strong>: ತಾಲ್ಲೂಕಿನ ಕಂಗಾನಲ್ಲೂರು ಗ್ರಾಮದಲ್ಲಿ ಅಂಗನವಾಡಿ ಕಾರ್ಯಕರ್ತೆ ಸಮಯಕ್ಕೆ ಸರಿಯಾಗಿ ಬರುತ್ತಿಲ್ಲ ಎಂಬ ಗ್ರಾಮಸ್ಥರ ದೂರಿನ ಬಗ್ಗೆ ಸ್ಥಳ ತನಿಖೆ ಮಾಡಿ ಮಾಹಿತಿ ನೀಡುವಂತೆ ಶಾಸಕಿ ಎಂ. ರೂಪಕಲಾ ಅವರು ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗೆ ಸೂಚಿಸಿದರು.</p>.<p>ಗ್ರಾಮದಲ್ಲಿ ಬುಧವಾರ ₹ 30 ಲಕ್ಷ ಅನುದಾನದಲ್ಲಿ ನಡೆದ ರಸ್ತೆ ಅಭಿವೃದ್ಧಿ ಕಾಮಗಾರಿಯ ಉದ್ಘಾಟನೆಯ ಬಳಿಕ ಅವರುಗ್ರಾಮದ ಅಂಗನವಾಡಿಗೆ ಭೇಟಿ ನೀಡಿ ಪರಿಶೀಲಿಸಿದರು.</p>.<p>18 ಮಕ್ಕಳ ಪೈಕಿ ಕೇವಲ 4 ಮಕ್ಕಳು ಹಾಜರಾಗಿದ್ದರು. ನಿಗದಿತ ಸಮಯ ಮೀರಿದ್ದರೂ ಕಾರ್ಯಕರ್ತೆ ಅಂಗನವಾಡಿಗೆ ಬಂದಿರಲಿಲ್ಲ. ಈ ಸಂಬಂಧ ಗ್ರಾಮಸ್ಥರನ್ನು ಶಾಸಕಿ ವಿಚಾರಿಸಿದಾಗ, ಕಾರ್ಯಕರ್ತೆಯ ಕಾರ್ಯವೈಖರಿ ಬಗ್ಗೆ ಜನರು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಕೂಡಲೇ ಮೊಬೈಲ್ ಮೂಲಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಯನ್ನು ಸಂಪರ್ಕಿಸಿದ ಶಾಸಕಿ, ಸ್ಥಳಕ್ಕೆ ಭೇಟಿ ನೀಡಿ ಕಾರ್ಯಕರ್ತೆಯ ಕಾರ್ಯವೈಖರಿ ಬಗ್ಗೆ ತನಿಖೆ ನಡೆಸಬೇಕು. ಹೊಸದಾಗಿ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಸ್ಥಳದ ಗುರುತು ಹಾಕಿಕೊಡಬೇಕು ಎಂದು ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಜಿಎಫ್</strong>: ತಾಲ್ಲೂಕಿನ ಕಂಗಾನಲ್ಲೂರು ಗ್ರಾಮದಲ್ಲಿ ಅಂಗನವಾಡಿ ಕಾರ್ಯಕರ್ತೆ ಸಮಯಕ್ಕೆ ಸರಿಯಾಗಿ ಬರುತ್ತಿಲ್ಲ ಎಂಬ ಗ್ರಾಮಸ್ಥರ ದೂರಿನ ಬಗ್ಗೆ ಸ್ಥಳ ತನಿಖೆ ಮಾಡಿ ಮಾಹಿತಿ ನೀಡುವಂತೆ ಶಾಸಕಿ ಎಂ. ರೂಪಕಲಾ ಅವರು ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗೆ ಸೂಚಿಸಿದರು.</p>.<p>ಗ್ರಾಮದಲ್ಲಿ ಬುಧವಾರ ₹ 30 ಲಕ್ಷ ಅನುದಾನದಲ್ಲಿ ನಡೆದ ರಸ್ತೆ ಅಭಿವೃದ್ಧಿ ಕಾಮಗಾರಿಯ ಉದ್ಘಾಟನೆಯ ಬಳಿಕ ಅವರುಗ್ರಾಮದ ಅಂಗನವಾಡಿಗೆ ಭೇಟಿ ನೀಡಿ ಪರಿಶೀಲಿಸಿದರು.</p>.<p>18 ಮಕ್ಕಳ ಪೈಕಿ ಕೇವಲ 4 ಮಕ್ಕಳು ಹಾಜರಾಗಿದ್ದರು. ನಿಗದಿತ ಸಮಯ ಮೀರಿದ್ದರೂ ಕಾರ್ಯಕರ್ತೆ ಅಂಗನವಾಡಿಗೆ ಬಂದಿರಲಿಲ್ಲ. ಈ ಸಂಬಂಧ ಗ್ರಾಮಸ್ಥರನ್ನು ಶಾಸಕಿ ವಿಚಾರಿಸಿದಾಗ, ಕಾರ್ಯಕರ್ತೆಯ ಕಾರ್ಯವೈಖರಿ ಬಗ್ಗೆ ಜನರು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಕೂಡಲೇ ಮೊಬೈಲ್ ಮೂಲಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಯನ್ನು ಸಂಪರ್ಕಿಸಿದ ಶಾಸಕಿ, ಸ್ಥಳಕ್ಕೆ ಭೇಟಿ ನೀಡಿ ಕಾರ್ಯಕರ್ತೆಯ ಕಾರ್ಯವೈಖರಿ ಬಗ್ಗೆ ತನಿಖೆ ನಡೆಸಬೇಕು. ಹೊಸದಾಗಿ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಸ್ಥಳದ ಗುರುತು ಹಾಕಿಕೊಡಬೇಕು ಎಂದು ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>