<p><strong>ಕೋಲಾರ: </strong>ಮರಾಠ ಅಭಿವೃದ್ಧಿ ನಿಗಮ ರಚಿಸಬಾರದು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಸದಸ್ಯರು ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ವಿ. ಸ್ನೇಹಾ ಅವರಿಗೆ ಮನವಿ ಸಲ್ಲಿಸಿದರು.</p>.<p>ಸ್ವಾಭಿಮಾನಿ ಬಣದ ಜಿಲ್ಲಾ ಅಧ್ಯಕ್ಷ ಶೆಟ್ಟಿಹಳ್ಳಿ ರಮೇಶ್ ಮಾತನಾಡಿ, ಮರಾಠಿಗರನ್ನು ಓಲೈಸಿಕೊಳ್ಳಲು ಹಾಗೂ ಅವರ ಮತ ಬೇಟೆಗಾಗಿ ರಾಜ್ಯ ಸರ್ಕಾರ ನಿಗಮ ಸ್ಥಾಪನೆಗೆ ಮುಂದಾಗಿರುವುದು ಖಂಡನೀಯ ಎಂದರು.</p>.<p>ನಿಗಮ ರಚನೆ ನಿರ್ಧಾರದ ಬಗ್ಗೆ ರಾಜ್ಯದಲ್ಲಿರುವ ಮರಾಠಿಗರು ಸ್ವಾಗತಿಸಿಲ್ಲ. ಸರ್ಕಾರ ಮರಾಠಿಗರ ಹಲವಾರು ಬೇಡಿಕೆಗಳನ್ನು ಈಡೇರಿಸಿರುವಾಗ ನಿಗಮದ ಅವಶ್ಯಕತೆ ಏನಿದೆ ಎಂದು ಪ್ರಶ್ನಿಸಿದರು.</p>.<p>ನಿಗಮಕ್ಕೆ ಸರ್ಕಾರ ಮೀಸಲಿಟ್ಟಿರುವ ₹ 50 ಕೋಟಿಯನ್ನು ಕಷ್ಟದಲ್ಲಿರುವ ರೈತರಿಗೆ, ಪ್ರವಾಹದಿಂದ ನೊಂದವರಿಗೆ, ಕೋವಿಡ್ ಪೀಡಿತರಿಗೆ ಪರಿಹಾರವಾಗಿ ವಿತರಿಸಬೇಕು ಎಂದು ಆಗ್ರಹಿಸಿದರು.</p>.<p>ಉಪಾಧ್ಯಕ್ಷರಾದ ರಾಜೇಶ್, ಜನ್ನಘಟ್ಟ ಶಿವಣ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೊಲ್ಲಂಬಳ್ಳಿ ಶಿವು, ಕಾರ್ಯದರ್ಶಿ ಚಲಪತಿ, ಜಿಲ್ಲಾ ಯುವ ಘಟಕದ ಮನೋಜ್ ಕುಮಾರ್, ತಾಲ್ಲೂಕು ಅಧ್ಯಕ್ಷ ರಾಜೇಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ: </strong>ಮರಾಠ ಅಭಿವೃದ್ಧಿ ನಿಗಮ ರಚಿಸಬಾರದು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಸದಸ್ಯರು ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ವಿ. ಸ್ನೇಹಾ ಅವರಿಗೆ ಮನವಿ ಸಲ್ಲಿಸಿದರು.</p>.<p>ಸ್ವಾಭಿಮಾನಿ ಬಣದ ಜಿಲ್ಲಾ ಅಧ್ಯಕ್ಷ ಶೆಟ್ಟಿಹಳ್ಳಿ ರಮೇಶ್ ಮಾತನಾಡಿ, ಮರಾಠಿಗರನ್ನು ಓಲೈಸಿಕೊಳ್ಳಲು ಹಾಗೂ ಅವರ ಮತ ಬೇಟೆಗಾಗಿ ರಾಜ್ಯ ಸರ್ಕಾರ ನಿಗಮ ಸ್ಥಾಪನೆಗೆ ಮುಂದಾಗಿರುವುದು ಖಂಡನೀಯ ಎಂದರು.</p>.<p>ನಿಗಮ ರಚನೆ ನಿರ್ಧಾರದ ಬಗ್ಗೆ ರಾಜ್ಯದಲ್ಲಿರುವ ಮರಾಠಿಗರು ಸ್ವಾಗತಿಸಿಲ್ಲ. ಸರ್ಕಾರ ಮರಾಠಿಗರ ಹಲವಾರು ಬೇಡಿಕೆಗಳನ್ನು ಈಡೇರಿಸಿರುವಾಗ ನಿಗಮದ ಅವಶ್ಯಕತೆ ಏನಿದೆ ಎಂದು ಪ್ರಶ್ನಿಸಿದರು.</p>.<p>ನಿಗಮಕ್ಕೆ ಸರ್ಕಾರ ಮೀಸಲಿಟ್ಟಿರುವ ₹ 50 ಕೋಟಿಯನ್ನು ಕಷ್ಟದಲ್ಲಿರುವ ರೈತರಿಗೆ, ಪ್ರವಾಹದಿಂದ ನೊಂದವರಿಗೆ, ಕೋವಿಡ್ ಪೀಡಿತರಿಗೆ ಪರಿಹಾರವಾಗಿ ವಿತರಿಸಬೇಕು ಎಂದು ಆಗ್ರಹಿಸಿದರು.</p>.<p>ಉಪಾಧ್ಯಕ್ಷರಾದ ರಾಜೇಶ್, ಜನ್ನಘಟ್ಟ ಶಿವಣ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೊಲ್ಲಂಬಳ್ಳಿ ಶಿವು, ಕಾರ್ಯದರ್ಶಿ ಚಲಪತಿ, ಜಿಲ್ಲಾ ಯುವ ಘಟಕದ ಮನೋಜ್ ಕುಮಾರ್, ತಾಲ್ಲೂಕು ಅಧ್ಯಕ್ಷ ರಾಜೇಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>