ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈಷಮ್ಯ; ಟೊಮೆಟೊ ಬೆಳೆ ನಾಶ

Last Updated 16 ಸೆಪ್ಟೆಂಬರ್ 2020, 5:29 IST
ಅಕ್ಷರ ಗಾತ್ರ

ಬಂಗಾರಪೇಟೆ: ತಾಲ್ಲೂಕಿನ ಯಳೇಸಂದ್ರ ಗ್ರಾಮದ ಅರ್ಜುನಪ್ಪ ಎಂಬುವರ ಟೊಮೆಟೊ ತೋಟಕ್ಕೆ ಕಿಡಿಗೇಡಿಗಳು ಕಳೆನಾಶಕ ಸಿಂಪಡಿಸಿದ್ದು, ತೋಟ ಸಂಪೂರ್ಣ ನಾಶವಾಗಿದೆ.

ಹಳೆ ವೈಷಮ್ಯದಿಂದ ಕಿಡಿಗೇಡಿಗಳು ಈ ಕೃತ್ಯ ನಡೆಸಿದ್ದಾರೆ ಎನ್ನಲಾಗಿದೆ. ಅರ್ಜುನಪ್ಪ ಎರಡು ಎಕರೆ ಜಮೀನಿನಲ್ಲಿ 10 ಸಾವಿರ ಟೊಮೆಟೊ ಸಸಿ ನಾಟಿ ಮಾಡಿದ್ದರು. ಇದಕ್ಕಾಗಿ ₹4 ಲಕ್ಷ ಖರ್ಚು ಮಾಡಿದ್ದರು. ಆದರೆ, ಫಸಲು ಬರುವ ಹಂತದಲ್ಲಿ ಕಿಡಿಗೇಡಿಗಳು ಬೆಳೆ ನಾಶಮಾಡಿದ್ದಾರೆ.

ಪ್ರಸ್ತುತ ಟೊಮೆಟೊ ಬೆಲೆ ದಿನೇ ದಿನೇ ಏರಿಕೆಯಾಗುತ್ತಿದ್ದು, ದುಪ್ಪಟ್ಟು ಬೆಲೆ ಸಿಗುವ ನಿರೀಕ್ಷೆಯಿತ್ತು. ಘಟನೆಯಿಂದ ಆತಂಕಕ್ಕೀಡಾಗಿರುವ ರೈತ ಪಟ್ಟಣದ ಠಾಣೆಗೆ ದೂರು ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT