<p><strong>ಶ್ರೀನಿವಾಸಪುರ</strong>: ವಿಧಾನಸಭೆ ಮಾಜಿ ಅಧ್ಯಕ್ಷ ಕೆ.ಆರ್.ರಮೇಶ್ ಕುಮಾರ್ ಪುತ್ರ ಹರ್ಷ ಕನಡಂ ಅವರಿಗೆ ಎಐಸಿಸಿ ಹೊಸ ಜಬಾಬ್ದಾರಿ ನೀಡಿದೆ.</p>.<p>ಅವರನ್ನು ಕೇರಳ ರಾಜ್ಯ ಕಾಂಗ್ರೆಸ್ನ ವಾರ ರೂಂ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಮುಂದಿನ ವಿಧಾನಸಭಾ ಚುನಾವಣೆಗೆ ಪಕ್ಷವು ಸಂಘಟನೆ ಬಲವರ್ಧನೆ ಹಾಗೂ ಚುನಾವಣಾ ತಂತ್ರ ರೂಪಿಸುವ ಕಾರ್ಯಗಳಿಗೆ ವೇಗ ನೀಡುತ್ತಿದ್ದು, ಈ ನಿಟ್ಟಿನಲ್ಲಿ ಈ ನಿರ್ಧಾರ ಕೈಗೊಂಡಿದೆ.</p>.<p>ಪಕ್ಷದ ಯುವ ನಾಯಕರಾಗಿರುವ ಹರ್ಷ, ಸಂಘಟನಾ ಚಟುವಟಿಕೆಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ಚುನಾವಣಾ ತಂತ್ರ ರೂಪಿಸುವಲ್ಲಿ ಹಾಗೂ ಆಂತರಿಕ ಸಂಘಟನಾ ಕಾರ್ಯಗಳಲ್ಲಿ ಗುರುತಿಸಿಕೊಂಡಿದ್ದಾರೆ. ಈ ಜವಾಬ್ದಾರಿಯೊಂದಿಗೆ ರಾಜಕೀಯ ಪ್ರವೇಶಕ್ಕೂ ಹಾದಿ ಮಾಡಿಕೊಟ್ಟಂತಿದೆ.</p>.<p>ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅ. 7ರಂದು ಈ ಘೋಷಣೆ ಮಾಡಿದ್ದಾರೆ. ವಾರ ರೂಂ ಘಟಕವು ಪಕ್ಷದ ಚುನಾವಣಾ ತಂತ್ರ ರೂಪಿಸುವುದು, ಪ್ರಚಾರ ಅಭಿಯಾನಗಳ ಯೋಜನೆ, ಸಾಮಾಜಿಕ ಮಾಧ್ಯಮ ತಂತ್ರ ಸಿದ್ಧತೆ ಹಾಗೂ ಪ್ರಾದೇಶಿಕ ಮಟ್ಟದಲ್ಲಿ ಸಂಪರ್ಕ ವ್ಯವಸ್ಥೆಗಳನ್ನು ಸಮನ್ವಯಗೊಳಿಸುವ ಕೇಂದ್ರವಾಗಿ ಕಾರ್ಯನಿರ್ವಹಿಸುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಿವಾಸಪುರ</strong>: ವಿಧಾನಸಭೆ ಮಾಜಿ ಅಧ್ಯಕ್ಷ ಕೆ.ಆರ್.ರಮೇಶ್ ಕುಮಾರ್ ಪುತ್ರ ಹರ್ಷ ಕನಡಂ ಅವರಿಗೆ ಎಐಸಿಸಿ ಹೊಸ ಜಬಾಬ್ದಾರಿ ನೀಡಿದೆ.</p>.<p>ಅವರನ್ನು ಕೇರಳ ರಾಜ್ಯ ಕಾಂಗ್ರೆಸ್ನ ವಾರ ರೂಂ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಮುಂದಿನ ವಿಧಾನಸಭಾ ಚುನಾವಣೆಗೆ ಪಕ್ಷವು ಸಂಘಟನೆ ಬಲವರ್ಧನೆ ಹಾಗೂ ಚುನಾವಣಾ ತಂತ್ರ ರೂಪಿಸುವ ಕಾರ್ಯಗಳಿಗೆ ವೇಗ ನೀಡುತ್ತಿದ್ದು, ಈ ನಿಟ್ಟಿನಲ್ಲಿ ಈ ನಿರ್ಧಾರ ಕೈಗೊಂಡಿದೆ.</p>.<p>ಪಕ್ಷದ ಯುವ ನಾಯಕರಾಗಿರುವ ಹರ್ಷ, ಸಂಘಟನಾ ಚಟುವಟಿಕೆಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ಚುನಾವಣಾ ತಂತ್ರ ರೂಪಿಸುವಲ್ಲಿ ಹಾಗೂ ಆಂತರಿಕ ಸಂಘಟನಾ ಕಾರ್ಯಗಳಲ್ಲಿ ಗುರುತಿಸಿಕೊಂಡಿದ್ದಾರೆ. ಈ ಜವಾಬ್ದಾರಿಯೊಂದಿಗೆ ರಾಜಕೀಯ ಪ್ರವೇಶಕ್ಕೂ ಹಾದಿ ಮಾಡಿಕೊಟ್ಟಂತಿದೆ.</p>.<p>ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅ. 7ರಂದು ಈ ಘೋಷಣೆ ಮಾಡಿದ್ದಾರೆ. ವಾರ ರೂಂ ಘಟಕವು ಪಕ್ಷದ ಚುನಾವಣಾ ತಂತ್ರ ರೂಪಿಸುವುದು, ಪ್ರಚಾರ ಅಭಿಯಾನಗಳ ಯೋಜನೆ, ಸಾಮಾಜಿಕ ಮಾಧ್ಯಮ ತಂತ್ರ ಸಿದ್ಧತೆ ಹಾಗೂ ಪ್ರಾದೇಶಿಕ ಮಟ್ಟದಲ್ಲಿ ಸಂಪರ್ಕ ವ್ಯವಸ್ಥೆಗಳನ್ನು ಸಮನ್ವಯಗೊಳಿಸುವ ಕೇಂದ್ರವಾಗಿ ಕಾರ್ಯನಿರ್ವಹಿಸುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>