<p><strong>ಬಂಗಾರಪೇಟೆ</strong>: ‘ಜನರ ಹಣವನ್ನು ಜನರ ಕೆಲಸಕ್ಕೇ ವಿನಿಯೋಗಿಸುವ ಮೂಲಕ ನಮ್ಮ ಸರ್ಕಾರ ಸಾಮಾಜಿಕ ಸಮಾನತೆಗಾಗಿ ಶ್ರಮಿಸುತ್ತಿದೆ’ ಎಂದು ಶಾಸಕ ಎಸ್.ಎನ್. ನಾರಾಯಣಸ್ವಾಮಿ ಹೇಳಿದರು.</p>.<p>ಪಟ್ಟಣದ ಕುವೆಂಪು ವೃತ್ತದಲ್ಲಿ ಕಾಂಗ್ರೆಸ್ ಪಕ್ಷದಿಂದ ಮಂಗಳವಾರ ಆಯೋಜಿಸಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರದ ಎರಡು ವರ್ಷಗಳ ಸಾಧನೆಯ ಸಂಭ್ರಮ ಆಚರಣೆಯಲ್ಲಿ ಮಾತನಾಡಿದರು.</p>.<p>ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಕಾಂಗ್ರೆಸ್ ಪಕ್ಷ ನುಡಿದಂತೆ ನಡೆದಿದೆ. ಜನಪರ, ಅಭಿವೃದ್ಧಿಪರ, ಬಡವರ ಪರ, ಮಹಿಳೆಯರ ಪರ ಕೆಲಸ ಮಾಡಿದೆ ಎಂದರು.</p>.<p>‘ಭೂ ಗ್ಯಾರಂಟಿ ಯೋಜನೆ ಮೂಲಕ ನಮ್ಮ ಸರ್ಕಾರ ಹೊಸ ಇತಿಹಾಸ ಬರೆದಿದೆ. ಎಲ್ಲ ಇಲಾಖೆಗಳಿಂದಲೂ ಜನರಿಗೆ ಕಾರ್ಯಕ್ರಮಗಳನ್ನು ಕೊಡುವಂತ ಕೆಲಸವನ್ನು ಮಾಡುತ್ತಿದೆ’ ಎಂದರು.</p>.<p>ಮಾಜಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಾರೆಡ್ಡಿ ಮಾತನಾಡಿದರು. ಪಾರ್ಥಸಾರಥಿ, ಶಂಷುದ್ದೀನ್ ಬಾಬು, ಅಣ್ಣಾ ದೊರೈ, ಕುಂಬಾರ ಪಾಳ್ಯ ಮಂಜುನಾಥ್, ಅರುಣಾಚಲ ಮಣಿ, ಮಹಾದೇವ,ಬಿ ವಿ ಶಂಕರ್,ವಸಂತ್, ಆದಿ ನಾರಾಯಣ ಕುಟ್ಟಿ,ಮರವಹಳ್ಳಿ ಮಂಜುನಾಥ,ಹೆಚ್ ಕೆ ನಾರಾಯಣಸ್ವಾಮಿ,ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಂಗಾರಪೇಟೆ</strong>: ‘ಜನರ ಹಣವನ್ನು ಜನರ ಕೆಲಸಕ್ಕೇ ವಿನಿಯೋಗಿಸುವ ಮೂಲಕ ನಮ್ಮ ಸರ್ಕಾರ ಸಾಮಾಜಿಕ ಸಮಾನತೆಗಾಗಿ ಶ್ರಮಿಸುತ್ತಿದೆ’ ಎಂದು ಶಾಸಕ ಎಸ್.ಎನ್. ನಾರಾಯಣಸ್ವಾಮಿ ಹೇಳಿದರು.</p>.<p>ಪಟ್ಟಣದ ಕುವೆಂಪು ವೃತ್ತದಲ್ಲಿ ಕಾಂಗ್ರೆಸ್ ಪಕ್ಷದಿಂದ ಮಂಗಳವಾರ ಆಯೋಜಿಸಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರದ ಎರಡು ವರ್ಷಗಳ ಸಾಧನೆಯ ಸಂಭ್ರಮ ಆಚರಣೆಯಲ್ಲಿ ಮಾತನಾಡಿದರು.</p>.<p>ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಕಾಂಗ್ರೆಸ್ ಪಕ್ಷ ನುಡಿದಂತೆ ನಡೆದಿದೆ. ಜನಪರ, ಅಭಿವೃದ್ಧಿಪರ, ಬಡವರ ಪರ, ಮಹಿಳೆಯರ ಪರ ಕೆಲಸ ಮಾಡಿದೆ ಎಂದರು.</p>.<p>‘ಭೂ ಗ್ಯಾರಂಟಿ ಯೋಜನೆ ಮೂಲಕ ನಮ್ಮ ಸರ್ಕಾರ ಹೊಸ ಇತಿಹಾಸ ಬರೆದಿದೆ. ಎಲ್ಲ ಇಲಾಖೆಗಳಿಂದಲೂ ಜನರಿಗೆ ಕಾರ್ಯಕ್ರಮಗಳನ್ನು ಕೊಡುವಂತ ಕೆಲಸವನ್ನು ಮಾಡುತ್ತಿದೆ’ ಎಂದರು.</p>.<p>ಮಾಜಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಾರೆಡ್ಡಿ ಮಾತನಾಡಿದರು. ಪಾರ್ಥಸಾರಥಿ, ಶಂಷುದ್ದೀನ್ ಬಾಬು, ಅಣ್ಣಾ ದೊರೈ, ಕುಂಬಾರ ಪಾಳ್ಯ ಮಂಜುನಾಥ್, ಅರುಣಾಚಲ ಮಣಿ, ಮಹಾದೇವ,ಬಿ ವಿ ಶಂಕರ್,ವಸಂತ್, ಆದಿ ನಾರಾಯಣ ಕುಟ್ಟಿ,ಮರವಹಳ್ಳಿ ಮಂಜುನಾಥ,ಹೆಚ್ ಕೆ ನಾರಾಯಣಸ್ವಾಮಿ,ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>