ಕೋಲಾರ: ‘ನಾನು ಯಾವತ್ತೂ ಜೆಡಿಎಸ್ನವರ ಮನೆ ಬಾಗಿಲಿಗೆ ಹೋಗಿ ನಮ್ಮ ಪಕ್ಷದ ಜತೆ ಸೇರಿ ಸರ್ಕಾರ ರಚಿಸಿ ಎಂದು ಕೇಳಿಲ್ಲ. ಆಗ ವರಿಷ್ಠರ ಮಟ್ಟದಲ್ಲಿ ಮಾತುಕತೆ ಆಗಿದ್ದು ನಿಜ. ಆದರೆ, ನಾನಂತೂ ಅವರ ಮನೆಗೆ ಹೋಗಿಲ್ಲ’ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು.