<p>ಕೋಲಾರ: ಕೋಲಾರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಸ್ಪರ್ಧೆಗೆ ಸಂಬಂಧಿಸಿದಂತೆ ಕೇಂದ್ರದ ಮಾಜಿ ಸಚಿವ ಕೆ.ಎಚ್.ಮುನಿಯಪ್ಪ ಹಾಗೂ ಶಾಸಕ ಕೆ.ಆರ್.ರಮೇಶ್ ಕುಮಾರ್ ಬೆಂಬಲಿಗರು ಮತ್ತೆ ನಡುಬೀದಿಯಲ್ಲಿ ಕಿತ್ತಾಡಿಕೊಂಡಿದ್ದಾರೆ.</p>.<p>ನಗರದ ಕಾಂಗ್ರೆಸ್ ಭವನ ಎದುರಿನ ರಸ್ತೆಯಲ್ಲಿ ಸೋಮವಾರ ಮುನಿಯಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಉಭಯ ಬಣಗಳ ಕಾರ್ಯಕರ್ತರ ನಡುವೆ ವಾಗ್ವಾದ, ತಳ್ಳಾಟ ನಡೆಯಿತು. ಪರಿಸ್ಥಿತಿ ಕೈ, ಕೈ ಮಿಲಾಯಿಸುವ ಹಂತಕ್ಕೆ ಹೋಯಿತು. ಇದನ್ನು ಗಮನಿಸಿದ ಪೊಲೀಸರು ಮಧ್ಯ ಪ್ರವೇಶಿಸಿ ನಿಯಂತ್ರಣಕ್ಕೆ ತಂದರು.</p>.<p>‘ಲೋಕಸಭೆ ಚುನಾವಣೆಯಲ್ಲಿನನ್ನನ್ನು ಸೋಲಿಸಿದವರು, ಸಿದ್ದರಾಮಯ್ಯ ಅವರನ್ನು ಕೋಲಾರಕ್ಕೆ ಕರೆತಂದು ಗೆಲ್ಲಿಸುವುದಾಗಿ ಹೇಳುತ್ತಿದ್ದಾರೆ. ಹಳೆ ಕಾಂಗ್ರೆಸ್ಸಿಗರನ್ನು ಬಿಟ್ಟು ಇವರೇ (ರಮೇಶ್ ಕುಮಾರ್ ಬೆಂಬಲಿಗರು) ಏಕಪಕ್ಷೀಯವಾಗಿ ಸಭೆ ನಡೆಸುತ್ತಿದ್ದಾರೆ. ಇವರಿಗೆ ಈ ಉಸಾಬರಿ ಕೊಟ್ಟವರು ಯಾರು? ಅದನ್ನು ಮೊದಲು ಬಿಟ್ಟುಬಿಡಬೇಕು. ಒಂದಿಬ್ಬರಿಂದ ಗೊಂದಲ ಸೃಷ್ಟಿಯಾಗಿದೆ' ಎಂದು ಮುನಿಯಪ್ಪ ಸಭೆಯಲ್ಲಿ ಹೇಳುತ್ತಿದಂತೆ ರಮೇಶ್ ಕುಮಾರ್ ಬಣದವರು ಸಿಡಿದೆದ್ದರು.</p>.<p>ನಗರಸಭೆ ಸದಸ್ಯ ಅಂಬರೀಷ್ ನೇತೃತ್ವದಲ್ಲಿ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸಿದ್ದರಾಮಯ್ಯ ಅವರಿಗೆ ಜೈಕಾರ ಹಾಕಿದರು. ಇನ್ನು ಕೆಲ ಕಾರ್ಯಕರ್ತರು, ‘ನಿಮ್ಮಿಬ್ಬರ ಬಣ ಜಗಳದಿಂದ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಹಾಳಾಗುತ್ತಿದೆ’ ಎಂದು ಹರಿಹಾಯ್ದರು.</p>.<p>ಕೆಲ ಮುಸ್ಲಿಂ ಕಾರ್ಯಕರ್ತರು, ‘ಸಿದ್ದರಾಮಯ್ಯ ಅವರೇ ಈ ಕ್ಷೇತ್ರದಿಂದ ಸ್ಪರ್ಧಿಸಬೇಕು’ ಎಂದು ಪಟ್ಟುಹಿಡಿದರು. ಈ ವಿಚಾರ ಮಾತಿನ ಚಕಮಕಿಗೆ ತಿರುಗಿತು. ಎರಡೂ ಬಣದವರು ರಸ್ತೆಗೆ ಬಂದರು. ನಡು ಬೀದಿಯಲ್ಲೇ ಪರಸ್ಪರ ಕೈ ಮಿಲಾಯಿಸಲು ಮುಂದಾದರು.</p>.<p>ರಸ್ತೆಯಲ್ಲಿ ಜಗಳ ಜೋರಾಗುತ್ತಿದ್ದಂತೆ ಅತ್ತ ಸಭಾಂಗಣದಲ್ಲಿ ಮೈಕ್ ಕಿತ್ತುಕೊಂಡ ಮುನಿಯಪ್ಪ, ‘ಈ ರೀತಿ ಗಲಾಟೆ ಮಾಡುವವರು ಸಿದ್ದರಾಮಯ್ಯ ಅವರನ್ನು ಕರೆದುಕೊಂಡು ಬಂದು ಗೆಲ್ಲಿಸುತ್ತಾರಾ’ ಎಂದು ಪ್ರಶ್ನಿಸಿದರು.</p>.<p>‘ನಾನು ಹಳೆಯದ್ದನ್ನು ಮರೆತಿದ್ದೇನೆ. ಕ್ಷೇತ್ರದಲ್ಲಿ ಸ್ಪರ್ಧಿಸುವುದಾದರೆ ಸಿದ್ದರಾಮಯ್ಯನವರು ಮೊದಲು ಇಲ್ಲಿನ ಗೊಂದಲ ಸರಿಪಡಿಸಬೇಕು. ಅವರ ಸ್ಪರ್ಧೆಗೆ ನಮ್ಮ ಸ್ವಾಗತವಿದೆ. ಅವರು ಸ್ಪರ್ಧಿಸದಿದ್ದರೆ ಸ್ಥಳೀಯರಿಗೇ ಟಿಕೆಟ್ ಕೊಡಬೇಕು’ ಎಂದು ಸಮಾಧಾನಪಡಿಸಲು ಪ್ರಯತ್ನಿಸಿದರು.</p>.<p>ಈ ಸಂದರ್ಭದಲ್ಲಿ ಕೋಲಾರ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿ ಕೆಪಿಸಿಸಿಗೆ ಅರ್ಜಿ ಸಲ್ಲಿಸಿರುವ ವಿ.ಆರ್.ಸುದರ್ಶನ್ ಕೂಡ ವೇದಿಕೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೋಲಾರ: ಕೋಲಾರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಸ್ಪರ್ಧೆಗೆ ಸಂಬಂಧಿಸಿದಂತೆ ಕೇಂದ್ರದ ಮಾಜಿ ಸಚಿವ ಕೆ.ಎಚ್.ಮುನಿಯಪ್ಪ ಹಾಗೂ ಶಾಸಕ ಕೆ.ಆರ್.ರಮೇಶ್ ಕುಮಾರ್ ಬೆಂಬಲಿಗರು ಮತ್ತೆ ನಡುಬೀದಿಯಲ್ಲಿ ಕಿತ್ತಾಡಿಕೊಂಡಿದ್ದಾರೆ.</p>.<p>ನಗರದ ಕಾಂಗ್ರೆಸ್ ಭವನ ಎದುರಿನ ರಸ್ತೆಯಲ್ಲಿ ಸೋಮವಾರ ಮುನಿಯಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಉಭಯ ಬಣಗಳ ಕಾರ್ಯಕರ್ತರ ನಡುವೆ ವಾಗ್ವಾದ, ತಳ್ಳಾಟ ನಡೆಯಿತು. ಪರಿಸ್ಥಿತಿ ಕೈ, ಕೈ ಮಿಲಾಯಿಸುವ ಹಂತಕ್ಕೆ ಹೋಯಿತು. ಇದನ್ನು ಗಮನಿಸಿದ ಪೊಲೀಸರು ಮಧ್ಯ ಪ್ರವೇಶಿಸಿ ನಿಯಂತ್ರಣಕ್ಕೆ ತಂದರು.</p>.<p>‘ಲೋಕಸಭೆ ಚುನಾವಣೆಯಲ್ಲಿನನ್ನನ್ನು ಸೋಲಿಸಿದವರು, ಸಿದ್ದರಾಮಯ್ಯ ಅವರನ್ನು ಕೋಲಾರಕ್ಕೆ ಕರೆತಂದು ಗೆಲ್ಲಿಸುವುದಾಗಿ ಹೇಳುತ್ತಿದ್ದಾರೆ. ಹಳೆ ಕಾಂಗ್ರೆಸ್ಸಿಗರನ್ನು ಬಿಟ್ಟು ಇವರೇ (ರಮೇಶ್ ಕುಮಾರ್ ಬೆಂಬಲಿಗರು) ಏಕಪಕ್ಷೀಯವಾಗಿ ಸಭೆ ನಡೆಸುತ್ತಿದ್ದಾರೆ. ಇವರಿಗೆ ಈ ಉಸಾಬರಿ ಕೊಟ್ಟವರು ಯಾರು? ಅದನ್ನು ಮೊದಲು ಬಿಟ್ಟುಬಿಡಬೇಕು. ಒಂದಿಬ್ಬರಿಂದ ಗೊಂದಲ ಸೃಷ್ಟಿಯಾಗಿದೆ' ಎಂದು ಮುನಿಯಪ್ಪ ಸಭೆಯಲ್ಲಿ ಹೇಳುತ್ತಿದಂತೆ ರಮೇಶ್ ಕುಮಾರ್ ಬಣದವರು ಸಿಡಿದೆದ್ದರು.</p>.<p>ನಗರಸಭೆ ಸದಸ್ಯ ಅಂಬರೀಷ್ ನೇತೃತ್ವದಲ್ಲಿ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸಿದ್ದರಾಮಯ್ಯ ಅವರಿಗೆ ಜೈಕಾರ ಹಾಕಿದರು. ಇನ್ನು ಕೆಲ ಕಾರ್ಯಕರ್ತರು, ‘ನಿಮ್ಮಿಬ್ಬರ ಬಣ ಜಗಳದಿಂದ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಹಾಳಾಗುತ್ತಿದೆ’ ಎಂದು ಹರಿಹಾಯ್ದರು.</p>.<p>ಕೆಲ ಮುಸ್ಲಿಂ ಕಾರ್ಯಕರ್ತರು, ‘ಸಿದ್ದರಾಮಯ್ಯ ಅವರೇ ಈ ಕ್ಷೇತ್ರದಿಂದ ಸ್ಪರ್ಧಿಸಬೇಕು’ ಎಂದು ಪಟ್ಟುಹಿಡಿದರು. ಈ ವಿಚಾರ ಮಾತಿನ ಚಕಮಕಿಗೆ ತಿರುಗಿತು. ಎರಡೂ ಬಣದವರು ರಸ್ತೆಗೆ ಬಂದರು. ನಡು ಬೀದಿಯಲ್ಲೇ ಪರಸ್ಪರ ಕೈ ಮಿಲಾಯಿಸಲು ಮುಂದಾದರು.</p>.<p>ರಸ್ತೆಯಲ್ಲಿ ಜಗಳ ಜೋರಾಗುತ್ತಿದ್ದಂತೆ ಅತ್ತ ಸಭಾಂಗಣದಲ್ಲಿ ಮೈಕ್ ಕಿತ್ತುಕೊಂಡ ಮುನಿಯಪ್ಪ, ‘ಈ ರೀತಿ ಗಲಾಟೆ ಮಾಡುವವರು ಸಿದ್ದರಾಮಯ್ಯ ಅವರನ್ನು ಕರೆದುಕೊಂಡು ಬಂದು ಗೆಲ್ಲಿಸುತ್ತಾರಾ’ ಎಂದು ಪ್ರಶ್ನಿಸಿದರು.</p>.<p>‘ನಾನು ಹಳೆಯದ್ದನ್ನು ಮರೆತಿದ್ದೇನೆ. ಕ್ಷೇತ್ರದಲ್ಲಿ ಸ್ಪರ್ಧಿಸುವುದಾದರೆ ಸಿದ್ದರಾಮಯ್ಯನವರು ಮೊದಲು ಇಲ್ಲಿನ ಗೊಂದಲ ಸರಿಪಡಿಸಬೇಕು. ಅವರ ಸ್ಪರ್ಧೆಗೆ ನಮ್ಮ ಸ್ವಾಗತವಿದೆ. ಅವರು ಸ್ಪರ್ಧಿಸದಿದ್ದರೆ ಸ್ಥಳೀಯರಿಗೇ ಟಿಕೆಟ್ ಕೊಡಬೇಕು’ ಎಂದು ಸಮಾಧಾನಪಡಿಸಲು ಪ್ರಯತ್ನಿಸಿದರು.</p>.<p>ಈ ಸಂದರ್ಭದಲ್ಲಿ ಕೋಲಾರ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿ ಕೆಪಿಸಿಸಿಗೆ ಅರ್ಜಿ ಸಲ್ಲಿಸಿರುವ ವಿ.ಆರ್.ಸುದರ್ಶನ್ ಕೂಡ ವೇದಿಕೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>