<p><strong>ಕೋಲಾರ: </strong>ಕೋವಿಡ್–19 ಭೀತಿ ಹಿನ್ನೆಲೆಯಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಕಾಂಗ್ರೆಸ್ ಜಿಲ್ಲಾ ಘಟಕದ ವತಿಯಿಂದ ಇಲ್ಲಿ ಬುಧವಾರ ಉಚಿತವಾಗಿ ಮುಖಗವಸು ವಿತರಿಸಲಾಯಿತು.</p>.<p>ನಗರದ ಕಾಲೇಜು ವೃತ್ತ, ಹಳೇ ಬಸ್ ನಿಲ್ದಾಣ, ಮೆಕ್ಕೆ ವೃತ್ತ, ಕೆಎಸ್ಆರ್ಟಿಸಿ ಬಸ್ ನಿಲ್ದಾಣ, ದೊಡ್ಡಪೇಟೆ ಸೇರಿದಂತೆ ಹೆಚ್ಚಿನ ಜನಸಂದಣಿ ಇರುವ ಸ್ಥಳಗಳು ಹಾಗೂ ವಾಣಿಜ್ಯ ಪ್ರದೇಶದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಜನರಿಗೆ ಮುಖಗವಸು ನೀಡಿ ರೋಗ ತಡೆಗೆ ಜಾಗೃತಿ ಮೂಡಿಸಿದರು.</p>.<p>‘ಬಿಜೆಪಿಯು ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗಲೆಲ್ಲಾ ಜನರನ್ನು ಒಂದಲ್ಲ ಒಂದು ರೀತಿಯ ಸಮಸ್ಯೆಗಳು ಕಾಡುತ್ತವೆ. ಕೊರೊನಾ ಸೋಂಕು ತಡೆಗೆ ಸೂಕ್ತ ಕ್ರಮ ಕೈಗೊಳ್ಳುವಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ವಿಫಲವಾಗಿವೆ’ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಚಂದ್ರಾರೆಡ್ಡಿ ದೂರಿದರು.</p>.<p>‘ಕೊರೊನಾ ಸೋಂಕಿನಿಂದಾಗಿ ಜಿಲ್ಲೆಯ ಜನ ಸಾಕಷ್ಟು ಆತಂಕಗೊಂಡಿದ್ದಾರೆ. ಜನರ ಆರೋಗ್ಯ ಮತ್ತು ಸುರಕ್ಷತೆ ದೃಷ್ಟಿಯಿಂದ ಪಕ್ಷವು ಉಚಿತವಾಗಿ 5 ಸಾವಿರ ಮುಖಗವಸು ವಿತರಿಸುತ್ತಿದೆ. ಕೊರೊನಾ ಸೋಂಕು ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಆದ ಕಾರಣ ಜನ ಸೋಂಕು ತಡೆಗೆ ಹೆಚ್ಚು ಮುನ್ನೆಚ್ಚರಿಕೆ ವಹಿಸಬೇಕು’ ಎಂದು ಕಿವಿಮಾತು ಹೇಳಿದರು.</p>.<p>‘ಜನರು ಸೋಂಕಿಗೆ ಭಯಪಡುವ ಅಗತ್ಯವಿಲ್ಲ. ತಾಳ್ಮೆಯಿಂದ ಪರಿಸ್ಥಿತಿ ನಿಭಾಯಿಸಬೇಕು. ಅಕ್ಕಪಕ್ಕದ ಮನೆಗಳಲ್ಲಿ ಯಾರಿಗಾದರೂ ಕೊರೊನಾ ಸೋಂಕಿನ ಲಕ್ಷಣ ಕಂಡುಬಂದರೆ ವೈದ್ಯರಿಗೆ ಮಾಹಿತಿ ಕೊಡಬೇಕು. ಹೆಚ್ಚಿನ ಜನಸಂದಣಿ ಇರುವ ಸ್ಥಳಗಳಿಗೆ ಹೋಗಬಾರದು. ರೋಗ ತಡೆಗೆ ಸಂಘಟಿತ ಪ್ರಯತ್ನ ನಡೆಸಬೇಕು’ ಎಂದು ಸಲಹೆ ನೀಡಿದರು.</p>.<p>‘ಮೊದಲು ಹಂತದಲ್ಲಿ ಜಿಲ್ಲಾ ಕೇಂದ್ರದಲ್ಲಿ ಮುಖಗವಸು ವಿತರಿಸಲಾಗಿದೆ. ಎರಡನೇ ಹಂತದಲ್ಲಿ ಜಿಲ್ಲೆಯ ತಾಲ್ಲೂಕು ಕೇಂದ್ರಗಳಲ್ಲೂ ಮುಖಗವಸು ವಿತರಣೆ ಮಾಡುತ್ತೇವೆ. ಸಾರ್ವಜನಿಕರು ಮನೆಯಿಂದ ಹೊರ ಬಂದಾಗ ಕಡ್ಡಾಯವಾಗಿ ಮುಖಗವಸು ಧರಿಸಬೇಕು’ ಎಂದು ಮನವಿ ಮಾಡಿದರು.</p>.<p>ಮಾಜಿ ಸಚಿವ ನಿಸಾರ್ ಅಹಮ್ಮದ್, ನಗರಸಭೆ ಸದಸ್ಯ ಪ್ರಸಾದ್ ಬಾಬು, ಪಕ್ಷದ ಮುಖಂಡರಾದ ಜೋಗ್ಮಲ್, ವೆಂಕಟಪತೆಪ್ಪ, ಕುಮಾರ್, ಜಯದೇವ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ: </strong>ಕೋವಿಡ್–19 ಭೀತಿ ಹಿನ್ನೆಲೆಯಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಕಾಂಗ್ರೆಸ್ ಜಿಲ್ಲಾ ಘಟಕದ ವತಿಯಿಂದ ಇಲ್ಲಿ ಬುಧವಾರ ಉಚಿತವಾಗಿ ಮುಖಗವಸು ವಿತರಿಸಲಾಯಿತು.</p>.<p>ನಗರದ ಕಾಲೇಜು ವೃತ್ತ, ಹಳೇ ಬಸ್ ನಿಲ್ದಾಣ, ಮೆಕ್ಕೆ ವೃತ್ತ, ಕೆಎಸ್ಆರ್ಟಿಸಿ ಬಸ್ ನಿಲ್ದಾಣ, ದೊಡ್ಡಪೇಟೆ ಸೇರಿದಂತೆ ಹೆಚ್ಚಿನ ಜನಸಂದಣಿ ಇರುವ ಸ್ಥಳಗಳು ಹಾಗೂ ವಾಣಿಜ್ಯ ಪ್ರದೇಶದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಜನರಿಗೆ ಮುಖಗವಸು ನೀಡಿ ರೋಗ ತಡೆಗೆ ಜಾಗೃತಿ ಮೂಡಿಸಿದರು.</p>.<p>‘ಬಿಜೆಪಿಯು ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗಲೆಲ್ಲಾ ಜನರನ್ನು ಒಂದಲ್ಲ ಒಂದು ರೀತಿಯ ಸಮಸ್ಯೆಗಳು ಕಾಡುತ್ತವೆ. ಕೊರೊನಾ ಸೋಂಕು ತಡೆಗೆ ಸೂಕ್ತ ಕ್ರಮ ಕೈಗೊಳ್ಳುವಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ವಿಫಲವಾಗಿವೆ’ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಚಂದ್ರಾರೆಡ್ಡಿ ದೂರಿದರು.</p>.<p>‘ಕೊರೊನಾ ಸೋಂಕಿನಿಂದಾಗಿ ಜಿಲ್ಲೆಯ ಜನ ಸಾಕಷ್ಟು ಆತಂಕಗೊಂಡಿದ್ದಾರೆ. ಜನರ ಆರೋಗ್ಯ ಮತ್ತು ಸುರಕ್ಷತೆ ದೃಷ್ಟಿಯಿಂದ ಪಕ್ಷವು ಉಚಿತವಾಗಿ 5 ಸಾವಿರ ಮುಖಗವಸು ವಿತರಿಸುತ್ತಿದೆ. ಕೊರೊನಾ ಸೋಂಕು ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಆದ ಕಾರಣ ಜನ ಸೋಂಕು ತಡೆಗೆ ಹೆಚ್ಚು ಮುನ್ನೆಚ್ಚರಿಕೆ ವಹಿಸಬೇಕು’ ಎಂದು ಕಿವಿಮಾತು ಹೇಳಿದರು.</p>.<p>‘ಜನರು ಸೋಂಕಿಗೆ ಭಯಪಡುವ ಅಗತ್ಯವಿಲ್ಲ. ತಾಳ್ಮೆಯಿಂದ ಪರಿಸ್ಥಿತಿ ನಿಭಾಯಿಸಬೇಕು. ಅಕ್ಕಪಕ್ಕದ ಮನೆಗಳಲ್ಲಿ ಯಾರಿಗಾದರೂ ಕೊರೊನಾ ಸೋಂಕಿನ ಲಕ್ಷಣ ಕಂಡುಬಂದರೆ ವೈದ್ಯರಿಗೆ ಮಾಹಿತಿ ಕೊಡಬೇಕು. ಹೆಚ್ಚಿನ ಜನಸಂದಣಿ ಇರುವ ಸ್ಥಳಗಳಿಗೆ ಹೋಗಬಾರದು. ರೋಗ ತಡೆಗೆ ಸಂಘಟಿತ ಪ್ರಯತ್ನ ನಡೆಸಬೇಕು’ ಎಂದು ಸಲಹೆ ನೀಡಿದರು.</p>.<p>‘ಮೊದಲು ಹಂತದಲ್ಲಿ ಜಿಲ್ಲಾ ಕೇಂದ್ರದಲ್ಲಿ ಮುಖಗವಸು ವಿತರಿಸಲಾಗಿದೆ. ಎರಡನೇ ಹಂತದಲ್ಲಿ ಜಿಲ್ಲೆಯ ತಾಲ್ಲೂಕು ಕೇಂದ್ರಗಳಲ್ಲೂ ಮುಖಗವಸು ವಿತರಣೆ ಮಾಡುತ್ತೇವೆ. ಸಾರ್ವಜನಿಕರು ಮನೆಯಿಂದ ಹೊರ ಬಂದಾಗ ಕಡ್ಡಾಯವಾಗಿ ಮುಖಗವಸು ಧರಿಸಬೇಕು’ ಎಂದು ಮನವಿ ಮಾಡಿದರು.</p>.<p>ಮಾಜಿ ಸಚಿವ ನಿಸಾರ್ ಅಹಮ್ಮದ್, ನಗರಸಭೆ ಸದಸ್ಯ ಪ್ರಸಾದ್ ಬಾಬು, ಪಕ್ಷದ ಮುಖಂಡರಾದ ಜೋಗ್ಮಲ್, ವೆಂಕಟಪತೆಪ್ಪ, ಕುಮಾರ್, ಜಯದೇವ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>