<p><strong>ಬಂಗಾರಪೇಟೆ</strong>: 'ವಿರೋಧಿಗಳು ತನ್ನ ವಿರುದ್ಧ ಏನೆಲ್ಲ ಷಡ್ಯಂತ್ರ ಮಾಡಿದರೂ ಒಳ್ಳೆಯವರನ್ನು ಭಗವಂತ ಎಂದೂ ಕೈಬಿಡುವುದಿಲ್ಲ ಎನ್ನುವುದಕ್ಕೆ ಹೈಕೋರ್ಟ್ನಿಂದ ನನಗೆ ಸಿಕ್ಕ ಜಯವೇ ಸಾಕ್ಷಿ' ಎಂದು ಶಾಸಕ ಎಸ್.ಎನ್.ನಾರಾಯಣಸ್ವಾಮಿ ಅಭಿಪ್ರಾಯಪಟ್ಟರು. <br><br>ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಮೇ ತಿಂಗಳಲ್ಲಿ ನಡೆದ ವಿಧಾನಸಭೆ ಸಾರ್ವತ್ರಿಕ ಚುನಾವಣೆ ಸಂದರ್ಭ ಕೆಜಿಎಫ್ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಆಗಿದ್ದ ಧರಣಿದೇವಿ, ಮುಖ್ಯಮಂತ್ರಿ ಪ್ರಧಾನ ಕಾರ್ಯದರ್ಶಿ ಆಗಿದ್ದ ಮಂಜುನಾಥ್ ಪ್ರಸಾದ್ ಅವರ ಪ್ರಚೋದನೆಗೆ ಒಳಪಟ್ಟು ಸುಳ್ಳು ಮೊಕದ್ದಮೆ ದಾಖಲಿಸಿದ್ದರು.</p>.<p>’ಯಾರೋ ವ್ಯಾಪಾರಸ್ಥರಿಗೆ ಸೇರಿದ ಹಣವನ್ನು ಜಿಯಾನ್ ಹಿಲ್ಸ್ ಗಾಲ್ಫ್ ವಿಲ್ಲಾದಲ್ಲಿ ವಶಕ್ಕೆ ಪಡೆದ ರೀತಿಯಲ್ಲಿ ಮಾಡಿ ಅಪವಾದವನ್ನು ನನ್ನ ಮೇಲೆ ಹೊರೆಸಿ ಮೊಕದ್ದಮೆ ದಾಖಲಿಸಿದ್ದರು‘ ಎಂದರು.</p>.<p>’ಮಂಜುನಾಥ್ ಪ್ರಸಾದ್ ಅವರ ಪಾಲುದಾರಿಕೆ ಹೊಂದಿರುವ ಬಿ.ಟಿವಿ ಸೇರಿದಂತೆ ಹಲವು ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ನನ್ನ ವಿರುದ್ಧ ಅಪಪ್ರಚಾರ ಕೂಡ ಮಾಡಲಾಯಿತು‘ ಎಂದು ದೂರಿದರು.</p>.<p>‘ಮಂಜುನಾಥ ಪ್ರಸಾದ್ ಜತೆ ಕೈಜೋಡಿಸಿದ್ದ ಧರಣಿದೇವಿ ಚುನಾವಣೆಯಲ್ಲಿ ಸೋಲಿಸಲೇಬೇಕು ಎಂದು ಪಣತೊಟ್ಟಿದ್ದರು. ಬಿಜೆಪಿಯೊಂದಿಗೆ ಶಾಮೀಲಾಗಿ ಷಡ್ಯಂತ್ರ ರೂಪಿಸಿದ್ದರು’ ಎಂದು ಆರೋಪಿಸಿದರು.</p>.<p>’ಈ ಎಲ್ಲ ಷಡ್ಯಂತ್ರ ವಿರುದ್ಧ ಹೈಕೋರ್ಟ್ಗೆ ಮನವಿ ಸಲ್ಲಿಸಿದ್ದೆ. ವಿಚಾರಣೆ ನಡೆಸಿದ ಹೈಕೋರ್ಟ್ ನನ್ನ ವಿರುದ್ಧ ದಾಖಲಿಸಿದ್ದ ಕ್ರೈಮ್ ಪಿಟಿಷನ್ ಅನ್ನು ಜುಲೈ 7ರಂದು ವಜಾ ಮಾಡಿದೆ. ಇದು ಸತ್ಯಕ್ಕೆ ಸಂದ ಜಯವಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಂಗಾರಪೇಟೆ</strong>: 'ವಿರೋಧಿಗಳು ತನ್ನ ವಿರುದ್ಧ ಏನೆಲ್ಲ ಷಡ್ಯಂತ್ರ ಮಾಡಿದರೂ ಒಳ್ಳೆಯವರನ್ನು ಭಗವಂತ ಎಂದೂ ಕೈಬಿಡುವುದಿಲ್ಲ ಎನ್ನುವುದಕ್ಕೆ ಹೈಕೋರ್ಟ್ನಿಂದ ನನಗೆ ಸಿಕ್ಕ ಜಯವೇ ಸಾಕ್ಷಿ' ಎಂದು ಶಾಸಕ ಎಸ್.ಎನ್.ನಾರಾಯಣಸ್ವಾಮಿ ಅಭಿಪ್ರಾಯಪಟ್ಟರು. <br><br>ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಮೇ ತಿಂಗಳಲ್ಲಿ ನಡೆದ ವಿಧಾನಸಭೆ ಸಾರ್ವತ್ರಿಕ ಚುನಾವಣೆ ಸಂದರ್ಭ ಕೆಜಿಎಫ್ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಆಗಿದ್ದ ಧರಣಿದೇವಿ, ಮುಖ್ಯಮಂತ್ರಿ ಪ್ರಧಾನ ಕಾರ್ಯದರ್ಶಿ ಆಗಿದ್ದ ಮಂಜುನಾಥ್ ಪ್ರಸಾದ್ ಅವರ ಪ್ರಚೋದನೆಗೆ ಒಳಪಟ್ಟು ಸುಳ್ಳು ಮೊಕದ್ದಮೆ ದಾಖಲಿಸಿದ್ದರು.</p>.<p>’ಯಾರೋ ವ್ಯಾಪಾರಸ್ಥರಿಗೆ ಸೇರಿದ ಹಣವನ್ನು ಜಿಯಾನ್ ಹಿಲ್ಸ್ ಗಾಲ್ಫ್ ವಿಲ್ಲಾದಲ್ಲಿ ವಶಕ್ಕೆ ಪಡೆದ ರೀತಿಯಲ್ಲಿ ಮಾಡಿ ಅಪವಾದವನ್ನು ನನ್ನ ಮೇಲೆ ಹೊರೆಸಿ ಮೊಕದ್ದಮೆ ದಾಖಲಿಸಿದ್ದರು‘ ಎಂದರು.</p>.<p>’ಮಂಜುನಾಥ್ ಪ್ರಸಾದ್ ಅವರ ಪಾಲುದಾರಿಕೆ ಹೊಂದಿರುವ ಬಿ.ಟಿವಿ ಸೇರಿದಂತೆ ಹಲವು ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ನನ್ನ ವಿರುದ್ಧ ಅಪಪ್ರಚಾರ ಕೂಡ ಮಾಡಲಾಯಿತು‘ ಎಂದು ದೂರಿದರು.</p>.<p>‘ಮಂಜುನಾಥ ಪ್ರಸಾದ್ ಜತೆ ಕೈಜೋಡಿಸಿದ್ದ ಧರಣಿದೇವಿ ಚುನಾವಣೆಯಲ್ಲಿ ಸೋಲಿಸಲೇಬೇಕು ಎಂದು ಪಣತೊಟ್ಟಿದ್ದರು. ಬಿಜೆಪಿಯೊಂದಿಗೆ ಶಾಮೀಲಾಗಿ ಷಡ್ಯಂತ್ರ ರೂಪಿಸಿದ್ದರು’ ಎಂದು ಆರೋಪಿಸಿದರು.</p>.<p>’ಈ ಎಲ್ಲ ಷಡ್ಯಂತ್ರ ವಿರುದ್ಧ ಹೈಕೋರ್ಟ್ಗೆ ಮನವಿ ಸಲ್ಲಿಸಿದ್ದೆ. ವಿಚಾರಣೆ ನಡೆಸಿದ ಹೈಕೋರ್ಟ್ ನನ್ನ ವಿರುದ್ಧ ದಾಖಲಿಸಿದ್ದ ಕ್ರೈಮ್ ಪಿಟಿಷನ್ ಅನ್ನು ಜುಲೈ 7ರಂದು ವಜಾ ಮಾಡಿದೆ. ಇದು ಸತ್ಯಕ್ಕೆ ಸಂದ ಜಯವಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>