‘ಪ್ರತಿ ತಾಲ್ಲೂಕಿನಿಂದ 20 ಬಸ್, 50 ಟ್ರ್ಯಾಕ್ಟರ್ ಹಾಗೂ ಇತರೆ ವಾಹನಗಳಲ್ಲಿ ಬರುವ ಕಾರ್ಯಕರ್ತರು ಜ.20ರಂದು ಬೆಳಿಗ್ಗೆ 8 ಗಂಟೆಗೆ ಜಿಲ್ಲೆಯ ಗಡಿ ಭಾಗದ ರಾಮಸಂದ್ರ ಬಳಿ ಜಮಾವಣೆಗೊಳ್ಳುತ್ತಾರೆ. ಬಳಿಕ ಬೆಂಗಳೂರಿಗೆ ತೆರಳುವ ಕಾರ್ಯಕರ್ತರು ರಾಜಭವನಕ್ಕೆ ಮುತ್ತಿಗೆ ಹಾಕುತ್ತಾರೆ’ ಎಂದು ಕಾಂಗ್ರೆಸ್ ಕಿಸಾನ್ ಖೇತ್ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀನಿವಾಸ್ ಮಾಹಿತಿ ನೀಡಿದರು.