ಆಕಸ್ಮಾತ್ ಸಿದ್ದರಾಮಯ್ಯ ಕೋಲಾರ ಬದಲು ಹಾಲಿ ಕ್ಷೇತ್ರ ಬಾದಾಮಿ ಆಯ್ಕೆ ಮಾಡಿಕೊಂಡರೆ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಅವರಿಗೆ ಟಿಕೆಟ್ ಸಿಗುವ ಸಾಧ್ಯತೆ ಇದೆ. ಈಗಾಗಲೇ ಅವರೊಂದಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸ್ಪರ್ಧೆ ಸಂಬಂಧ ಮಾತನಾಡಿದ್ದಾರೆ. ಹಲವು ಸಮೀಕ್ಷೆ ಬಳಿಕ ಕೋಲಾರ ಸುರಕ್ಷಿತವಲ್ಲ ಎಂಬ ಸಲಹೆಯನ್ನು ರಾಹುಲ್ ಗಾಂಧಿ ಈಚೆಗೆ ಸಿದ್ದರಾಮಯ್ಯ ಅವರಿಗೆ ನೀಡಿದ್ದರು. ಹೀಗಾಗಿ, ಕ್ಷೇತ್ರದಲ್ಲಿ ಗೊಂದಲ ಉಂಟಾಗಿದೆ. ಆದರೆ, ಸಿದ್ದರಾಮಯ್ಯ ಅವರೇ ಸ್ಪರ್ಧಿಸಲಿದ್ದಾರೆ ಎಂಬ ಆಶಾವಾದದಲ್ಲಿ ಸ್ಥಳೀಯ ನಾಯಕರು ಇದ್ದಾರೆ