<p>ಕೋಲಾರ: ‘ದೇಶದಲ್ಲಿ ಪ್ರಜಾಪ್ರಭುತ್ವ ಇದೆಯೋ ಇಲ್ಲವೋ ಎಂಬ ಅನುಮಾನ ಉಂಟಾಗುತ್ತಿದೆ. ರಾಮರಾಜ್ಯ ಮಾಡುವುದಾಗಿ ಹೇಳಿದ್ದ ಪ್ರಧಾನಿ ಈಗ ರಾವಣ ರಾಜ್ಯ ಮಾಡಿದ್ದಾರೆ. ಸ್ವರ್ಗ ತೋರಿಸುವುದಾಗಿ ಹೇಳಿ ನರಕ ತೋರಿಸುತ್ತಿದ್ದಾರೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ವಾಗ್ದಾಳಿ ನಡೆಸಿದರು. </p>.<p>ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಮಹಾತ್ಮ ಗಾಂಧಿ, ಇಂದಿರಾ ಗಾಂಧಿ, ರಾಜೀವ್ ಗಾಂಧಿ ಮೇಲೆ ಬಿಜೆಪಿಯವರು ಟೀಕೆ ಮಾಡುತ್ತಾರೆ. ಆದರೆ, ಕಾಂಗ್ರೆಸ್ ಮುಖಂಡರು ಯಾವತ್ತೂ ದೂರು ನೀಡಿಲ್ಲ’ ಎಂದರು.</p>.<p>‘ರಾಹುಲ್ ವಿರುದ್ಧ ಬಿಜೆಪಿ ಷಡ್ಯಂತ್ರ ನಡೆಸುತ್ತಿದೆ. ಇದಕ್ಕೆಲ್ಲಾ ಕಾಂಗ್ರೆಸ್ ಹೆದರುವುದಿಲ್ಲ. ಎಲ್ಲಿ ಹೋರಾಟ ಆರಂಭವಾಯಿತೋ ಅಲ್ಲಿಂದ ಮತ್ತೆ ಹೋರಾಟ ಆರಂಭಿಸಲು ಸಮಾವೇಶ ಹಮ್ಮಿಕೊಳ್ಳುತ್ತಿದ್ದೇವೆ. ಕೋಲಾರದಿಂದಲೇ ಸತ್ಯಮೇವ ಜಯತೇ ಸಂದೇಶ ಹೋಗಲಿದೆ’ ಎಂದು ತಿಳಿಸಿದರು.</p>.<p>‘ಸಂಸತ್ನಲ್ಲಿ ಅದಾನಿ ವಿಚಾರ ಚರ್ಚಿಸಬಾರದೆಂದು ರಾಹುಲ್ ಅವರನ್ನು ಅನರ್ಹ ಮಾಡಲಾಗಿದೆ. ಭಾರತ್ ಜೋಡೋ ಯಾತ್ರೆಗೆ ಸಿಕ್ಕಿದ ಯಶಸ್ಸಿನಿಂದ ಬಿಜೆಪಿಗೆ ಭ್ರಮನಿರಸನವಾಗಿದೆ. ಹೇಗಾದರೂ ಮಾಡಿ ರಾಹುಲ್ ಹೋರಾಟಕ್ಕೆ ತಡೆಯೊಡ್ಡಲು ಬಿಜೆಪಿ ಈ ಕೆಲಸಕ್ಕೆ ಮುಂದಾಗಿದೆ’ ಎಂದರು.</p>.<p>‘ಯಾವ ಘನ ಕಾರ್ಯ ಮಾಡಿದ್ದಾರೆ ಎಂದು ಎಂದು ಬಿಜೆಪಿಯವರು ರಾಜ್ಯದಲ್ಲಿ ವಿಜಯ ಸಂಕಲ್ಪಯಾತ್ರೆ ನಡೆಸಿದರು? ಶೇ 40 ಕಮಿಷನ್ ಪಡೆದಿರುವುದಕ್ಕಾ? ಪೆಟ್ರೋಲ್, ಅಡುಗೆ ಅನಿಲ ಬೆಲೆ ಏರಿಸಿದ್ದಕ್ಕಾ? ಯುವಕರಿಗೆ ಉದ್ಯೋಗ ನೀಡಲು ಸಾಧ್ಯವಾಗದ್ದಕ್ಕಾ’ ಎಂದು ಪ್ರಶ್ನಿಸಿದರು.</p>.<p>‘ಬದ್ಧತೆ ಇಲ್ಲದ ಕೆಟ್ಟ, ಭ್ರಷ್ಟ ಸರ್ಕಾರ, ಶೇ 40 ಕಮಿಷನ್ ಸರ್ಕಾರ. ಈ ಬಗ್ಗೆ ರಾಜ್ಯದ ಜನರಿಗೆ ತಿಳಿಸುತ್ತೇವೆ’ ಎಂದರು.</p>.<p>‘ಪ್ರಧಾನಿ, ಗೃಹ ಸಚಿವರು ನೂರು ಬಾರಿ ಬಂದು ಹೋದರೂ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರಲಿದೆ. 150ಕ್ಕೂ ಅಧಿಕ ಸ್ಥಾನ ಗೆಲ್ಲುತ್ತೇವೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>‘ಕೋಲಾರ ಜಿಲ್ಲೆಯಲ್ಲಿ ಯಾವುದೇ ಬಣ, ತಂಡ ಇಲ್ಲ. ಇರುವುದು ಕಾಂಗ್ರೆಸ್ ತಂಡ ಮಾತ್ರ’ ಎಂದು ನುಡಿದರು.</p>.<p>ಅಭಿಷೇಕ್ ದತ್ತ ಭೇಟಿ: ಎಐಸಿಸಿ ಕಾರ್ಯದರ್ಶಿ ಅಭೀಷೇಕ್ ದತ್ತ ಕೂಡ ಬೆಳಿಗ್ಗೆ ಸಮಾವೇಶದ ಸ್ಥಳಕ್ಕೆ ಬಂದು ಸಿದ್ಧತೆ ವೀಕ್ಷಿಸಿದರು. <br />ವಿಧಾನ ಪರಿಷತ್ ಸದಸ್ಯ ಎಂ.ಎಲ್.ಅನಿಲ್ ಕುಮಾರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಲಕ್ಷ್ಮಿನಾರಾಯಣ ಇದ್ದರು.</p>.<p><strong>‘ಸತ್ಯಮೇವ ಜಯತೇ’ ಸಮಾವೇಶ: </strong>‘ಸತ್ಯಮೇವ ಜಯತೇ’ ಸಮಾವೇಶ ನಡೆಯಲಿರುವ ಕೋಲಾರ ಹೊರವಲಯದ ಟಮಕದಲ್ಲಿನ ಮೈದಾನವನ್ನು ಸಲೀಂ ಪರಿಶೀಲಿಸಿದರು. ಸ್ಥಳೀಯ ಮುಖಂಡರೊಂದಿಗೆ ಅವರು ಸಭೆ ನಡೆಸಿದರು. ರಾಹುಲ್ ಗಾಂಧಿ ನೇತೃತ್ವದಲ್ಲಿ ಏ.9ರಂದು ಸಮಾವೇಶ ನಡೆಯಲಿದೆ. ಈ ಮೊದಲು ಏ.5ಕ್ಕೆ ನಿಗದಿಯಾಗಿತ್ತು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ತಿಳಿಸಿದರು.</p>.<p>ಜಾಲಪ್ಪ ಆಸ್ಪತ್ರೆಯ ಮುಂಭಾಗದ 11 ಎಕರೆ ಜಮೀನಿನಲ್ಲಿ ಬೃಹತ್ ವೇದಿಕೆ ಸಿದ್ಧಪಡಿಸಲಾಗುತ್ತಿದೆ. ಸಮಾವೇಶದಲ್ಲಿ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಲಕ್ಷಕ್ಕೂ ಅಧಿಕ ಮಂದಿ ಪಾಲ್ಗೊಳ್ಳುವ ಸಾಧ್ಯತೆ ಇದೆ.</p>.<p>ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಲಕ್ಷ್ಮಿನಾರಾಯಣ, ವಿಧಾನ ಪರಿಷತ್ ಮಾಜಿ ಸಭಾಪತಿ ವಿ.ಆರ್.ಸುದರ್ಶನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸಾದ್ ಬಾಬು, ಮುಖಂಡರಾದ ಸೀಸಂದ್ರ ಗೋಪಾಲಗೌಡ, ಎಲ್.ಎ ಮಂಜುನಾಥ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೋಲಾರ: ‘ದೇಶದಲ್ಲಿ ಪ್ರಜಾಪ್ರಭುತ್ವ ಇದೆಯೋ ಇಲ್ಲವೋ ಎಂಬ ಅನುಮಾನ ಉಂಟಾಗುತ್ತಿದೆ. ರಾಮರಾಜ್ಯ ಮಾಡುವುದಾಗಿ ಹೇಳಿದ್ದ ಪ್ರಧಾನಿ ಈಗ ರಾವಣ ರಾಜ್ಯ ಮಾಡಿದ್ದಾರೆ. ಸ್ವರ್ಗ ತೋರಿಸುವುದಾಗಿ ಹೇಳಿ ನರಕ ತೋರಿಸುತ್ತಿದ್ದಾರೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ವಾಗ್ದಾಳಿ ನಡೆಸಿದರು. </p>.<p>ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಮಹಾತ್ಮ ಗಾಂಧಿ, ಇಂದಿರಾ ಗಾಂಧಿ, ರಾಜೀವ್ ಗಾಂಧಿ ಮೇಲೆ ಬಿಜೆಪಿಯವರು ಟೀಕೆ ಮಾಡುತ್ತಾರೆ. ಆದರೆ, ಕಾಂಗ್ರೆಸ್ ಮುಖಂಡರು ಯಾವತ್ತೂ ದೂರು ನೀಡಿಲ್ಲ’ ಎಂದರು.</p>.<p>‘ರಾಹುಲ್ ವಿರುದ್ಧ ಬಿಜೆಪಿ ಷಡ್ಯಂತ್ರ ನಡೆಸುತ್ತಿದೆ. ಇದಕ್ಕೆಲ್ಲಾ ಕಾಂಗ್ರೆಸ್ ಹೆದರುವುದಿಲ್ಲ. ಎಲ್ಲಿ ಹೋರಾಟ ಆರಂಭವಾಯಿತೋ ಅಲ್ಲಿಂದ ಮತ್ತೆ ಹೋರಾಟ ಆರಂಭಿಸಲು ಸಮಾವೇಶ ಹಮ್ಮಿಕೊಳ್ಳುತ್ತಿದ್ದೇವೆ. ಕೋಲಾರದಿಂದಲೇ ಸತ್ಯಮೇವ ಜಯತೇ ಸಂದೇಶ ಹೋಗಲಿದೆ’ ಎಂದು ತಿಳಿಸಿದರು.</p>.<p>‘ಸಂಸತ್ನಲ್ಲಿ ಅದಾನಿ ವಿಚಾರ ಚರ್ಚಿಸಬಾರದೆಂದು ರಾಹುಲ್ ಅವರನ್ನು ಅನರ್ಹ ಮಾಡಲಾಗಿದೆ. ಭಾರತ್ ಜೋಡೋ ಯಾತ್ರೆಗೆ ಸಿಕ್ಕಿದ ಯಶಸ್ಸಿನಿಂದ ಬಿಜೆಪಿಗೆ ಭ್ರಮನಿರಸನವಾಗಿದೆ. ಹೇಗಾದರೂ ಮಾಡಿ ರಾಹುಲ್ ಹೋರಾಟಕ್ಕೆ ತಡೆಯೊಡ್ಡಲು ಬಿಜೆಪಿ ಈ ಕೆಲಸಕ್ಕೆ ಮುಂದಾಗಿದೆ’ ಎಂದರು.</p>.<p>‘ಯಾವ ಘನ ಕಾರ್ಯ ಮಾಡಿದ್ದಾರೆ ಎಂದು ಎಂದು ಬಿಜೆಪಿಯವರು ರಾಜ್ಯದಲ್ಲಿ ವಿಜಯ ಸಂಕಲ್ಪಯಾತ್ರೆ ನಡೆಸಿದರು? ಶೇ 40 ಕಮಿಷನ್ ಪಡೆದಿರುವುದಕ್ಕಾ? ಪೆಟ್ರೋಲ್, ಅಡುಗೆ ಅನಿಲ ಬೆಲೆ ಏರಿಸಿದ್ದಕ್ಕಾ? ಯುವಕರಿಗೆ ಉದ್ಯೋಗ ನೀಡಲು ಸಾಧ್ಯವಾಗದ್ದಕ್ಕಾ’ ಎಂದು ಪ್ರಶ್ನಿಸಿದರು.</p>.<p>‘ಬದ್ಧತೆ ಇಲ್ಲದ ಕೆಟ್ಟ, ಭ್ರಷ್ಟ ಸರ್ಕಾರ, ಶೇ 40 ಕಮಿಷನ್ ಸರ್ಕಾರ. ಈ ಬಗ್ಗೆ ರಾಜ್ಯದ ಜನರಿಗೆ ತಿಳಿಸುತ್ತೇವೆ’ ಎಂದರು.</p>.<p>‘ಪ್ರಧಾನಿ, ಗೃಹ ಸಚಿವರು ನೂರು ಬಾರಿ ಬಂದು ಹೋದರೂ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರಲಿದೆ. 150ಕ್ಕೂ ಅಧಿಕ ಸ್ಥಾನ ಗೆಲ್ಲುತ್ತೇವೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>‘ಕೋಲಾರ ಜಿಲ್ಲೆಯಲ್ಲಿ ಯಾವುದೇ ಬಣ, ತಂಡ ಇಲ್ಲ. ಇರುವುದು ಕಾಂಗ್ರೆಸ್ ತಂಡ ಮಾತ್ರ’ ಎಂದು ನುಡಿದರು.</p>.<p>ಅಭಿಷೇಕ್ ದತ್ತ ಭೇಟಿ: ಎಐಸಿಸಿ ಕಾರ್ಯದರ್ಶಿ ಅಭೀಷೇಕ್ ದತ್ತ ಕೂಡ ಬೆಳಿಗ್ಗೆ ಸಮಾವೇಶದ ಸ್ಥಳಕ್ಕೆ ಬಂದು ಸಿದ್ಧತೆ ವೀಕ್ಷಿಸಿದರು. <br />ವಿಧಾನ ಪರಿಷತ್ ಸದಸ್ಯ ಎಂ.ಎಲ್.ಅನಿಲ್ ಕುಮಾರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಲಕ್ಷ್ಮಿನಾರಾಯಣ ಇದ್ದರು.</p>.<p><strong>‘ಸತ್ಯಮೇವ ಜಯತೇ’ ಸಮಾವೇಶ: </strong>‘ಸತ್ಯಮೇವ ಜಯತೇ’ ಸಮಾವೇಶ ನಡೆಯಲಿರುವ ಕೋಲಾರ ಹೊರವಲಯದ ಟಮಕದಲ್ಲಿನ ಮೈದಾನವನ್ನು ಸಲೀಂ ಪರಿಶೀಲಿಸಿದರು. ಸ್ಥಳೀಯ ಮುಖಂಡರೊಂದಿಗೆ ಅವರು ಸಭೆ ನಡೆಸಿದರು. ರಾಹುಲ್ ಗಾಂಧಿ ನೇತೃತ್ವದಲ್ಲಿ ಏ.9ರಂದು ಸಮಾವೇಶ ನಡೆಯಲಿದೆ. ಈ ಮೊದಲು ಏ.5ಕ್ಕೆ ನಿಗದಿಯಾಗಿತ್ತು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ತಿಳಿಸಿದರು.</p>.<p>ಜಾಲಪ್ಪ ಆಸ್ಪತ್ರೆಯ ಮುಂಭಾಗದ 11 ಎಕರೆ ಜಮೀನಿನಲ್ಲಿ ಬೃಹತ್ ವೇದಿಕೆ ಸಿದ್ಧಪಡಿಸಲಾಗುತ್ತಿದೆ. ಸಮಾವೇಶದಲ್ಲಿ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಲಕ್ಷಕ್ಕೂ ಅಧಿಕ ಮಂದಿ ಪಾಲ್ಗೊಳ್ಳುವ ಸಾಧ್ಯತೆ ಇದೆ.</p>.<p>ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಲಕ್ಷ್ಮಿನಾರಾಯಣ, ವಿಧಾನ ಪರಿಷತ್ ಮಾಜಿ ಸಭಾಪತಿ ವಿ.ಆರ್.ಸುದರ್ಶನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸಾದ್ ಬಾಬು, ಮುಖಂಡರಾದ ಸೀಸಂದ್ರ ಗೋಪಾಲಗೌಡ, ಎಲ್.ಎ ಮಂಜುನಾಥ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>