ಬಿಜೆಪಿ ಕಾರ್ಯಕರ್ತರು ಹಾಗೂ ಭಾರತೀಯ ಹಿತರಕ್ಷಣಾ ವೇದಿಕೆ ಸದಸ್ಯರು ಸಿಎಎ ಬೆಂಬಲಿಸಿ ಕ್ಲಾಕ್ಟವರ್ ಮಾರ್ಗವಾಗಿ ಮೆರವಣಿಗೆ ಹೋಗುವ ವೇಳೆ ಮತ್ತೊಂದು ಕೋಮಿನ ಜನರು ಜಾವಿದ್ ಮತ್ತು ಶಾಹಿದ್ ಜತೆ ಸೇರಿ ಕಲ್ಲು ತೂರಾಟ ನಡೆಸಲು ಯೋಜಿಸಿದ್ದರು. ದೊಣ್ಣೆ ಸೇರಿದಂತೆ ಮಾರಕಾಸ್ತ್ರಗಳನ್ನು ಶೇಖರಿಸಿಕೊಂಡು ಮೆರವಣಿಗೆಯಲ್ಲಿ ಪಾಲ್ಗೊಂಡವರ ವಿರುದ್ಧ ಘೋಷಣೆ ಕೂಗಿ ಹಲ್ಲೆ ನಡೆಸಲು ಸಂಚು ರೂಪಿಸಿದ್ದರು. ನ್ಯಾಯಾಲಯವು ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.