‘ಜಲಶಕ್ತಿ ಅಭಿಯಾನದಡಿ ಕೇಂದ್ರ ನೋಡಲ್ ಅಧಿಕಾರಿ, ರಾಜ್ಯ ನೋಡಲ್ ಅಧಿಕಾರಿ, ತಾಂತ್ರಿಕ ಅಧಿಕಾರಿ ಹಾಗೂ ಜಿಲ್ಲಾಧಿಕಾರಿ ನೇತೃತ್ವದಲ್ಲಿ ತಲಾ 5 ಕಾಮಗಾರಿ ನಡೆಸಲು ಕ್ರಿಯಾಯೋಜನೆ ಸಿದ್ಧಪಡಿಸಲಾಗಿದೆ. ಮುಳಬಾಗಿಲು ನ್ಯಾಯಾಲಯ ನೂತನ ಕಟ್ಟಡದಲ್ಲಿ ಮಳೆ ಕೊಯ್ಲು ವ್ಯವಸ್ಥೆ ಅಳವಡಿಸಲಾಗುವುದು. ಇದೇ ರೀತಿ ಉಳಿದ ಅಧಿಕಾರಿಗಳೂ ಕಾಮಗಾರಿ ಕೈಗೆತ್ತಿಕೊಂಡು ಜಲ ಮೂಲ ಸಂರಕ್ಷಣೆ ಮಾಡಬೇಕು’ ಎಂದು ಸಲಹೆ ನೀಡಿದರು.