ಬಹುಪಾಲು ಪ್ರಯಾಣಿಕರು ಮುಷ್ಕರದ ಕಾರಣಕ್ಕೆ ಕೆಎಸ್ಆರ್ಟಿಸಿ ಬಸ್ ನಿಲ್ದಾಣಗಳತ್ತ ಸುಳಿಯಲಿಲ್ಲ. ಮುಷ್ಕರ ಮುಂದುವರಿದಿರುವ ಸಂಗತಿ ತಿಳಿಯದ ಗ್ರಾಮೀಣ ಭಾಗದ ಜನ ನಿಲ್ದಾಣದಲ್ಲಿ ಗಂಟೆಗಟ್ಟಲೇ ಕಾಯುತ್ತಾ ಕುಳಿತಿದ್ದ ದೃಶ್ಯ ಕಂಡುಬಂತು. ರೋಗಿಗಳು ಹಾಗೂ ಅವರ ಸಂಬಂಧಿಕರು ಅನ್ಯ ಮಾರ್ಗವಿಲ್ಲದೆ ಆಟೊಗಳಲ್ಲಿ ಪ್ರಯಾಣಿಸಿದರು. ಗ್ರಾಮೀಣ ಭಾಗದ ಜನ ಸರಕು ಸಾಗಣೆ ವಾಹನ, ಟೆಂಪೊಗಳನ್ನು ಆಶ್ರಯಿಸಿದರು.