ಬಲವಂತದ ಮತಾಂತರಕ್ಕೆ ಅವಕಾಶ ಇಲ್ಲದಿದ್ದರೂ ಅದರ ನಿಯಂತ್ರಣಕ್ಕೆ ಪ್ರತ್ಯೇಕವಾಗಿ ಕಾನೂನು ರೂಪಿಸುತ್ತಿರುವುದರ ಹಿಂದೆ ಬಿಜೆಪಿ ಸರ್ಕಾರದ ರಾಜಕೀಯ ಲೆಕ್ಕಾಚಾರವಿದೆ. ಮಧ್ಯಪ್ರದೇಶ, ಗುಜರಾತ್, ಉತ್ತರ ಪ್ರದೇಶ, ಜಾರ್ಖಂಡ್ ಸೇರಿದಂತೆ ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಈ ವಿವಾದಿತ ಮತಾಂತರ ವಿರೋಧಿ ಕಾನೂನು ಜಾರಿಗೊಳಿಸಲಾಗಿದೆ. ಇದು ಪ್ರಮುಖವಾಗಿ ಮುಸ್ಲಿಂ, ಕ್ರಿಶ್ಚಿಯನ್, ದಲಿತ ಮತ್ತು ಆದಿವಾಸಿ ಸಮುದಾಯಗಳನ್ನು ವ್ಯವಸ್ಥಿತವಾಗಿ ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ.