<p><strong>ಕೋಲಾರ</strong>: ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡುವಿಕೆ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದ್ದು, ಹೊಸದಾಗಿ 8 ಮಂದಿಗೆ ಸೋಂಕು ತಗುಲಿರುವುದು ಭಾನುವಾರ ದೃಢಪಟ್ಟಿದೆ.</p>.<p>ಕೆಜಿಎಫ್ ಮತ್ತು ಮುಳಬಾಗಿಲು ತಾಲ್ಲೂಕಿನ ತಲಾ 3 ಮಂದಿ, ಕೋಲಾರ ಹಾಗೂ ಮಾಲೂರು ತಾಲ್ಲೂಕಿನ ತಲಾ ಒಬ್ಬರಿಗೆ ಸೋಂಕು ಬಂದಿರುವುದು ಖಚಿತವಾಗಿದೆ. ಇದರೊಂದಿಗೆ ಸಕ್ರಿಯ ಸೋಂಕಿತರ ಸಂಖ್ಯೆ 420ಕ್ಕೆ ಏರಿಕೆಯಾಗಿದೆ.</p>.<p>ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗಿದೆ.</p>.<p>ಹೊಸದಾಗಿ ಪತ್ತೆಯಾದ ಸೋಂಕಿತರ ಸಂಖ್ಯೆಗೆ ಹೋಲಿಸಿದರೆ ಗುಣಮುಖ ಪ್ರಮಾಣದಲ್ಲಿ ದಾಖಲೆಯ ಏರಿಕೆಯಾಗಿದೆ. ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಪೈಕಿ 48 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು.</p>.<p>ಕೋಲಾರ ತಾಲ್ಲೂಕಿನ 8, ಮಾಲೂರು ತಾಲ್ಲೂಕಿನ 24, ಬಂಗಾರಪೇಟೆ ತಾಲ್ಲೂಕಿನ 5, ಮುಳಬಾಗಿಲು ತಾಲ್ಲೂಕಿನ 9, ಕೆಜಿಎಫ್ ಮತ್ತು ಶ್ರೀನಿವಾಸಪುರ ತಾಲ್ಲೂಕಿನ ತಲಾ ಒಬ್ಬರನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ</strong>: ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡುವಿಕೆ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದ್ದು, ಹೊಸದಾಗಿ 8 ಮಂದಿಗೆ ಸೋಂಕು ತಗುಲಿರುವುದು ಭಾನುವಾರ ದೃಢಪಟ್ಟಿದೆ.</p>.<p>ಕೆಜಿಎಫ್ ಮತ್ತು ಮುಳಬಾಗಿಲು ತಾಲ್ಲೂಕಿನ ತಲಾ 3 ಮಂದಿ, ಕೋಲಾರ ಹಾಗೂ ಮಾಲೂರು ತಾಲ್ಲೂಕಿನ ತಲಾ ಒಬ್ಬರಿಗೆ ಸೋಂಕು ಬಂದಿರುವುದು ಖಚಿತವಾಗಿದೆ. ಇದರೊಂದಿಗೆ ಸಕ್ರಿಯ ಸೋಂಕಿತರ ಸಂಖ್ಯೆ 420ಕ್ಕೆ ಏರಿಕೆಯಾಗಿದೆ.</p>.<p>ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗಿದೆ.</p>.<p>ಹೊಸದಾಗಿ ಪತ್ತೆಯಾದ ಸೋಂಕಿತರ ಸಂಖ್ಯೆಗೆ ಹೋಲಿಸಿದರೆ ಗುಣಮುಖ ಪ್ರಮಾಣದಲ್ಲಿ ದಾಖಲೆಯ ಏರಿಕೆಯಾಗಿದೆ. ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಪೈಕಿ 48 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು.</p>.<p>ಕೋಲಾರ ತಾಲ್ಲೂಕಿನ 8, ಮಾಲೂರು ತಾಲ್ಲೂಕಿನ 24, ಬಂಗಾರಪೇಟೆ ತಾಲ್ಲೂಕಿನ 5, ಮುಳಬಾಗಿಲು ತಾಲ್ಲೂಕಿನ 9, ಕೆಜಿಎಫ್ ಮತ್ತು ಶ್ರೀನಿವಾಸಪುರ ತಾಲ್ಲೂಕಿನ ತಲಾ ಒಬ್ಬರನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>