<p><strong>ಕೋಲಾರ: </strong>ಜಿಲ್ಲೆಯಲ್ಲಿ ಮಂಗಳವಾರ ಸಹ ಕೊರೊನಾ ಸೋಂಕಿತರ ಗುಣಮುಖ ಪ್ರಮಾಣದಲ್ಲಿ ದಾಖಲೆಯ ಏರಿಕೆಯಾಗಿದ್ದು, ಒಂದೇ ದಿನ 166 ಮಂದಿ ಆಸ್ಪತ್ರೆಯಿಂದ ಮನೆಗೆ ಮರಳಿದರು.</p>.<p>ಜಿಲ್ಲೆಯಲ್ಲಿ ಹೊಸದಾಗಿ ಪತ್ತೆಯಾಗುತ್ತಿರುವ ಸೋಂಕಿತರ ಸಂಖ್ಯೆಗೆ ಹೋಲಿಸಿದರೆ ಗುಣಮುಖರಾಗಿ ಮನೆಗೆ ಮರಳುತ್ತಿರುವವರ ಸಂಖ್ಯೆಯೇ ಹೆಚ್ಚಿದೆ. ಮತ್ತೊಂದೆಡೆ 3 ದಿನಗಳಲ್ಲಿ ಸೋಂಕಿತರ ಸಾವು ಸಂಭವಿಸದಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. ಸೋಂಕು ಹರಡುವಿಕೆ ತಡೆಗೆ ಆರೋಗ್ಯ ಇಲಾಖೆ ನಡೆಸುತ್ತಿರುವ ಪ್ರಯತ್ನ ಫಲ ಕೊಡಲಾರಂಭಿಸಿದೆ.</p>.<p>ಕಳೆದ 3 ದಿನಗಳಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ಏರು ಗತಿಯಲ್ಲೇ ಸಾಗಿದ್ದು, ದಿನೇದಿನೇ ಕೋವಿಡ್ ಆತಂಕ ಕಡಿಮೆಯಾಗುತ್ತಿದೆ. ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ ಕೋಲಾರ ತಾಲ್ಲೂಕಿನಲ್ಲಿ ಅತಿ ಹೆಚ್ಚು 62 ಮಂದಿ ಗುಣಮುಖರಾಗಿ ಮಂಗಳವಾರ ಆಸ್ಪತ್ರೆಯಿಂದ ಮನೆಗೆ ತೆರಳಿದರು.</p>.<p>ಉಳಿದಂತೆ ಮಾಲೂರು ತಾಲ್ಲೂಕಿನ 38 ಮಂದಿ, ಬಂಗಾರಪೇಟೆ ತಾಲ್ಲೂಕು 13, ಕೆಜಿಎಫ್ ತಾಲ್ಲೂಕು 20, ಮುಳಬಾಗಿಲು ತಾಲ್ಲೂಕು 21 ಮತ್ತು ಶ್ರೀನಿವಾಸಪುರ ತಾಲ್ಲೂಕಿನ 12 ಮಂದಿಯನ್ನು ಆಸ್ಪತ್ರೆಯಿಂದ ಬೀಳ್ಕೊಡಲಾಯಿತು.</p>.<p>96 ಮಂದಿಗೆ ಸೋಂಕು: ಹೊಸದಾಗಿ 96 ಮಂದಿಗೆ ಸೋಂಕು ಹರಡಿರುವುದು ಮಂಗಳವಾರ ದೃಢಪಟ್ಟಿದೆ. ಮುಖ್ಯವಾಗಿ ವಿಷಮ ಶೀತ ಜ್ವರದಿಂದ ಬಳಲುತ್ತಿರುವ 72 ಮಂದಿಗೆ ಮತ್ತು ಸೋಂಕಿತರ ಸಂಪರ್ಕದಿಂದ 20 ಮಂದಿಗೆ ಸೋಂಕು ತಗುಲಿದೆ.</p>.<p>ಕೋಲಾರ ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರವಿರುವ 19 ಮಂದಿಗೆ, ಸೋಂಕಿತರ ಸಂಪರ್ಕದಿಂದ 14 ಮಂದಿಗೆ, ಹೊರ ಜಿಲ್ಲೆಗೆ ಹೋಗಿದ್ದ ಒಬ್ಬರಿಗೆ ಮತ್ತು ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿರುವ ಒಬ್ಬರಿಗೆ ಸೋಂಕು ಬಂದಿರುವುದು ಖಚಿತವಾಗಿದೆ.</p>.<p>ಮಾಲೂರು ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರಪೀಡಿತ 23 ಮಂದಿಗೆ ಮತ್ತು ಸೋಂಕಿತರ ಸಂಪರ್ಕದಿಂದ 4 ಮಂದಿಗೆ ಸೋಂಕು ಹರಡಿದೆ. ಬಂಗಾರಪೇಟೆ ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರದಿಂದ ಬಳಲುತ್ತಿರುವ ಇಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ.</p>.<p>ಕೆಜಿಎಫ್ ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರಕ್ಕೆ ತುತ್ತಾಗಿರುವ 16 ಮಂದಿಗೆ ಮತ್ತು ಸೋಂಕಿತರ ಸಂಪರ್ಕದಿಂದ ಒಬ್ಬರಿಗೆ, ಶ್ರೀನಿವಾಸಪುರ ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರದಿಂದ ಬಳಲುತ್ತಿರುವ ಒಬ್ಬರಿಗೆ ಹಾಗೂ ಹೊರ ಜಿಲ್ಲೆಗೆ ಹೋಗಿ ಬಂದಿದ್ದ ಒಬ್ಬರಿಗೆ ಸೋಂಕು ತಗುಲಿದೆ.</p>.<p>ಮುಳಬಾಗಿಲು ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರದಿಂದ ಬಳಲುತ್ತಿರುವ 11 ಮಂದಿಗೆ, ಸೋಂಕಿತರ ಸಂಪರ್ಕದಿಂದ ಒಬ್ಬರಿಗೆ ಸೋಂಕು ಹರಡಿದೆ. ಮತ್ತೊಬ್ಬ ವ್ಯಕ್ತಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಸೋಂಕಿನ ಮೂಲ ಪತ್ತೆಯಾಗಿಲ್ಲ.</p>.<p>ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶವನ್ನು ಸೀಲ್ಡೌನ್ ಮಾಡಲಾಗಿದೆ. ಸುರಕ್ಷತಾ ಕ್ರಮವಾಗಿ ಇಡೀ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಗಿದೆ. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ: </strong>ಜಿಲ್ಲೆಯಲ್ಲಿ ಮಂಗಳವಾರ ಸಹ ಕೊರೊನಾ ಸೋಂಕಿತರ ಗುಣಮುಖ ಪ್ರಮಾಣದಲ್ಲಿ ದಾಖಲೆಯ ಏರಿಕೆಯಾಗಿದ್ದು, ಒಂದೇ ದಿನ 166 ಮಂದಿ ಆಸ್ಪತ್ರೆಯಿಂದ ಮನೆಗೆ ಮರಳಿದರು.</p>.<p>ಜಿಲ್ಲೆಯಲ್ಲಿ ಹೊಸದಾಗಿ ಪತ್ತೆಯಾಗುತ್ತಿರುವ ಸೋಂಕಿತರ ಸಂಖ್ಯೆಗೆ ಹೋಲಿಸಿದರೆ ಗುಣಮುಖರಾಗಿ ಮನೆಗೆ ಮರಳುತ್ತಿರುವವರ ಸಂಖ್ಯೆಯೇ ಹೆಚ್ಚಿದೆ. ಮತ್ತೊಂದೆಡೆ 3 ದಿನಗಳಲ್ಲಿ ಸೋಂಕಿತರ ಸಾವು ಸಂಭವಿಸದಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. ಸೋಂಕು ಹರಡುವಿಕೆ ತಡೆಗೆ ಆರೋಗ್ಯ ಇಲಾಖೆ ನಡೆಸುತ್ತಿರುವ ಪ್ರಯತ್ನ ಫಲ ಕೊಡಲಾರಂಭಿಸಿದೆ.</p>.<p>ಕಳೆದ 3 ದಿನಗಳಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ಏರು ಗತಿಯಲ್ಲೇ ಸಾಗಿದ್ದು, ದಿನೇದಿನೇ ಕೋವಿಡ್ ಆತಂಕ ಕಡಿಮೆಯಾಗುತ್ತಿದೆ. ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ ಕೋಲಾರ ತಾಲ್ಲೂಕಿನಲ್ಲಿ ಅತಿ ಹೆಚ್ಚು 62 ಮಂದಿ ಗುಣಮುಖರಾಗಿ ಮಂಗಳವಾರ ಆಸ್ಪತ್ರೆಯಿಂದ ಮನೆಗೆ ತೆರಳಿದರು.</p>.<p>ಉಳಿದಂತೆ ಮಾಲೂರು ತಾಲ್ಲೂಕಿನ 38 ಮಂದಿ, ಬಂಗಾರಪೇಟೆ ತಾಲ್ಲೂಕು 13, ಕೆಜಿಎಫ್ ತಾಲ್ಲೂಕು 20, ಮುಳಬಾಗಿಲು ತಾಲ್ಲೂಕು 21 ಮತ್ತು ಶ್ರೀನಿವಾಸಪುರ ತಾಲ್ಲೂಕಿನ 12 ಮಂದಿಯನ್ನು ಆಸ್ಪತ್ರೆಯಿಂದ ಬೀಳ್ಕೊಡಲಾಯಿತು.</p>.<p>96 ಮಂದಿಗೆ ಸೋಂಕು: ಹೊಸದಾಗಿ 96 ಮಂದಿಗೆ ಸೋಂಕು ಹರಡಿರುವುದು ಮಂಗಳವಾರ ದೃಢಪಟ್ಟಿದೆ. ಮುಖ್ಯವಾಗಿ ವಿಷಮ ಶೀತ ಜ್ವರದಿಂದ ಬಳಲುತ್ತಿರುವ 72 ಮಂದಿಗೆ ಮತ್ತು ಸೋಂಕಿತರ ಸಂಪರ್ಕದಿಂದ 20 ಮಂದಿಗೆ ಸೋಂಕು ತಗುಲಿದೆ.</p>.<p>ಕೋಲಾರ ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರವಿರುವ 19 ಮಂದಿಗೆ, ಸೋಂಕಿತರ ಸಂಪರ್ಕದಿಂದ 14 ಮಂದಿಗೆ, ಹೊರ ಜಿಲ್ಲೆಗೆ ಹೋಗಿದ್ದ ಒಬ್ಬರಿಗೆ ಮತ್ತು ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿರುವ ಒಬ್ಬರಿಗೆ ಸೋಂಕು ಬಂದಿರುವುದು ಖಚಿತವಾಗಿದೆ.</p>.<p>ಮಾಲೂರು ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರಪೀಡಿತ 23 ಮಂದಿಗೆ ಮತ್ತು ಸೋಂಕಿತರ ಸಂಪರ್ಕದಿಂದ 4 ಮಂದಿಗೆ ಸೋಂಕು ಹರಡಿದೆ. ಬಂಗಾರಪೇಟೆ ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರದಿಂದ ಬಳಲುತ್ತಿರುವ ಇಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ.</p>.<p>ಕೆಜಿಎಫ್ ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರಕ್ಕೆ ತುತ್ತಾಗಿರುವ 16 ಮಂದಿಗೆ ಮತ್ತು ಸೋಂಕಿತರ ಸಂಪರ್ಕದಿಂದ ಒಬ್ಬರಿಗೆ, ಶ್ರೀನಿವಾಸಪುರ ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರದಿಂದ ಬಳಲುತ್ತಿರುವ ಒಬ್ಬರಿಗೆ ಹಾಗೂ ಹೊರ ಜಿಲ್ಲೆಗೆ ಹೋಗಿ ಬಂದಿದ್ದ ಒಬ್ಬರಿಗೆ ಸೋಂಕು ತಗುಲಿದೆ.</p>.<p>ಮುಳಬಾಗಿಲು ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರದಿಂದ ಬಳಲುತ್ತಿರುವ 11 ಮಂದಿಗೆ, ಸೋಂಕಿತರ ಸಂಪರ್ಕದಿಂದ ಒಬ್ಬರಿಗೆ ಸೋಂಕು ಹರಡಿದೆ. ಮತ್ತೊಬ್ಬ ವ್ಯಕ್ತಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಸೋಂಕಿನ ಮೂಲ ಪತ್ತೆಯಾಗಿಲ್ಲ.</p>.<p>ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶವನ್ನು ಸೀಲ್ಡೌನ್ ಮಾಡಲಾಗಿದೆ. ಸುರಕ್ಷತಾ ಕ್ರಮವಾಗಿ ಇಡೀ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಗಿದೆ. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>